ಭತ್ತದ ಗದ್ದೆಗೆ ಕೃಷಿ ಅಧಿಕಾರಿಗಳ ಭೇಟಿ
Team Udayavani, Apr 25, 2020, 6:20 PM IST
ದಾವಣಗೆರೆ: ಕೋಲ್ಕುಂಟೆ ಭತ್ತದ ಗದ್ದೆಗಳಿಗೆ ಕೃಷಿ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು
ದಾವಣಗೆರೆ: ಕಳಪೆ ಗುಣಮಟ್ಟದ ಬಿತ್ತನೆ ಬೀಜದ ಪರಿಣಾಮ ತೆನೆ ಕಟ್ಟುವಲ್ಲಿ ವ್ಯತ್ಯಾಸ ಆಗಿದೆ ಎಂಬ ಆರೋಪ, ಹೋರಾಟಕ್ಕೆ ಸ್ಪಂದಿಸಿದ ದಾವಣಗೆರೆ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಕೆ.ಎಚ್. ರೇವಣಸಿದ್ದನಗೌಡ ಇತರರು ಶುಕ್ರವಾರ ಕೋಲ್ಕುಂಟೆ ಗ್ರಾಮದ ಭತ್ತದ ಗದ್ದೆಗಳಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳಪೆ ಗುಣಮಟ್ಟದ ಬಿತ್ತನೆ ಬೀಜದ ಪರಿಣಾಮ ತೆನೆ ಕಟ್ಟುವಲ್ಲಿ ವ್ಯತ್ಯಾಸ ಆಗಿದೆ. ಸಂಬಂಧಿತರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ನೇತೃತ್ವದಲ್ಲಿ ರೈತರು ಕೃಷಿ ಇಲಾಖೆಗೆ ಮನವಿ ಸಲ್ಲಿಸಿದ್ದರು. ಹಿರಿಯ ಅಧಿಕಾರಿಗಳ ಸೂಚನೆಯಂತೆ ಮಾಯಕೊಂಡ ಹೋಬಳಿಯ ಕೃಷಿ ಅಧಿಕಾರಿಗಳಾದ ತೇಜುವರ್ಧನ್, ನಾಗೇಂದ್ರಪ್ಪ ಗ್ರಾಮಕ್ಕೆ ಭೇಟಿ ನೀಡಿದ್ದರು. ಜಂಟಿ ನಿರ್ದೇಶಕರೇ ಆಗಮಿಸಿ ಪರಿಶೀಲನೆ ನಡೆಸಬೇಕು ಎಂದು ರೈತರು ಪಟ್ಟು ಹಿಡಿದರು.
ಅಂತಿಮವಾಗಿ ಸಹಾಯಕ ಕೃಷಿ ನಿರ್ದೇಶಕ ಕೆ.ಎಚ್. ರೇವಣಸಿದ್ದನಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಲಬೆರಕೆ ಬಿತ್ತನೆ ಬೀಜ ಮಿಶ್ರಣ ಮಾಡಲಾಗಿದೆ ಎಂಬುದು ಗೊತ್ತಾಗುತ್ತದೆ. ಕೃಷಿ ವಿಜ್ಞಾನಿಗಳನ್ನು ಕರೆಸಿ ಪರಿಶೀಲನೆ ನಡೆಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ರೈತ ಸಂಘಧ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೋಲ್ಕುಂಟೆ ಬಸವರಾಜಪ್ಪ, ಭೀಮಪ್ಪ, ಉಲ್ಲಳ್ಳಿ ಮಂಜಪ್ಪ, ರುದ್ರೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ