ಬಿಜೆಪಿಯಿಂದ 2220ಕ್ಕೂ ಹೆಚ್ಚು ಆಹಾರ ಕಿಟ್ ವಿತರಣೆ
Team Udayavani, Apr 23, 2020, 5:14 PM IST
ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಬಸವರಾಜ್ (ಭೈರತಿ), ಸಂಸದ ಜಿ.ಎಂ. ಸಿದ್ದೇಶ್ವರ್, ಬಿಜೆಪಿಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್
ಜಾಧವ್ ಮತ್ತು ಗೆಳೆಯರಿಂದ ದಾವಣಗೆರೆ ದಕ್ಷಿಣ ಭಾಗದ ವಿವಿಧ ವಾರ್ಡ್ಗಳಲ್ಲಿ 2,200ಕ್ಕೂ ಹೆಚ್ಚು ಆಹಾರದ ಕಿಟ್ ವಿತರಣೆ ಮಾಡಲಾಯಿತು.
ಪ್ರತಿ ಕಿಟ್ನಲ್ಲಿ 5 ಕೆಜಿ ಅಕ್ಕಿ 2 ಕೆಜಿ ರವೆ, 2 ಕೆಜಿ ಅವಲಕ್ಕಿ, 2 ಕೆಜಿ ಗೋಧಿ ಹಿಟ್ಟು, 1 ಕೆಜಿ ಬೇಳೆ, 1 ಕೆಜಿ ಉಪ್ಪು, 1 ಲೀಟರ್ ಶೇಂಗಾ ಎಣ್ಣೆ, 1ಪ್ಯಾಕೆಟ್ ಬಿಸ್ಕತ್, ಸೋಪು ಒಳಗೊಂಡಂತೆ 756 ರೂಪಾಯಿ ಮೊತ್ತದ ಸಾಮಗ್ರಿಗಳಿವೆ. ಹೊಂಡದ ವೃತ್ತದಲ್ಲಿ ಸಾಂಕೇತಿಕವಾಗಿ ಆಹಾರದ ಕಿಟ್ ವಿತರಣೆ ನಂತರ ಮಾತನಾಡಿದ ಸಂಸದ ಜಿ.ಎಂ. ಸಿದ್ದೇಶ್ವರ್, ಕೋವಿಡ್ ಹಿಂದೂ, ಮುಸ್ಲಿಂ, ಸಿಖ್ ಎಂದು ಯಾವುದನ್ನೂ ನೋಡಿ ಬರುವುದಿಲ್ಲ. ಪ್ರತಿಯೊಬ್ಬರಿಗೂ ಬರುವ ಸಾಧ್ಯತೆ ಇರುತ್ತದೆ. ಅದು ಬರದಂತೆ ಇರಬೇಕಾದರೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಲಾಕ್ಡೌನ್ನಿಂದ ತೊಂದರೆಗೆ ಒಳಗಾದವರಿಗೆ ಆಹಾರದ ಕಿಟ್ ವಿತರಣೆ ಮಾಡಲಾಗುತ್ತಿದೆ. ಅರ್ಹರಿಗೆ ಮನೆಬಾಗಿಲಿಗೆ ತಲುಪಿಸುವ ಕೆಲಸವನ್ನ ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡುತ್ತಿದ್ದಾರೆ. ಆಹಾರದ ಕಿಟ್ ಪಡೆಯಲಿಕ್ಕೆ ಬಂದ ಸಂದರ್ಭದಲ್ಲೂ ಎಲ್ಲರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಕೊರೊನಾ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಹಕರಿಸಬೇಕು ಎಂದರು.
ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಮಹಾನಗರಪಾಲಿಕೆ ಸದಸ್ಯರಾದ ಎಸ್.ಟಿ. ವೀರೇಶ್, ರಾಕೇಶ್ ಜಾಧವ್, ಎಲ್.ಡಿ. ಗೋಣೆಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ಆನಂದರಾವ್ ಶಿಂಧೆ, ಶಂಕರಗೌಡ ಬಿರಾದಾರ್, ಟಿಂಕರ್ ಮಂಜಣ್ಣ , ಪ್ರವೀಣ್ ಜಾಧವ್ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ