ಅರ್ಥಪೂರ್ಣ ಗಣರಾಜ್ಯೋತ್ಸವಕ್ಕೆ ನಿರ್ಧಾರ

ಗಣರಾಜ್ಯೋತ್ಸವಕ್ಕೆ ಹಾಜರಾಗದವರಿಗೆ ನೋಟಿಸ್‌ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

Team Udayavani, Jan 12, 2020, 3:54 PM IST

12-Janauary-20

ದಾವಣಗೆರೆ: ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವ ಅರ್ಥಪೂರ್ಣವಾಗಿರಬೇಕು. ದೇಶದ ಗಣರಾಜ್ಯಕ್ಕಾಗಿ ಶ್ರಮಿಸಿದ ಎಲ್ಲಾ ಮಹನೀಯರನ್ನು ನೆನೆಯುವ ದಿನ ಇದಾಗಿದ್ದು, ಅವರ ಶ್ರಮ, ತ್ಯಾಗ, ಬಲಿದಾನಕ್ಕೆ ನಾವು ಗೌರವ ಸಮರ್ಪಿಸಬೇಕಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದ್ದಾರೆ.

ತಮ್ಮ ಕಚೇರಿ ಸಭಾಂಗಣದಲ್ಲಿ 71ನೇ ಗಣರಾಜ್ಯೋತ್ಸವ ಪೂರ್ವಸಿದ್ಧತೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜ.26ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಲಿದೆ. ಎಲ್ಲ ಇಲಾಖೆ ಮುಖ್ಯಸ್ಥರು ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ. 9 ಗಂಟೆಯೊಳಗಾಗಿ ಕ್ರೀಡಾಂಗಣದಲ್ಲಿ ಹಾಜರಿರಬೇಕು. ಯಾವುದೇ ಕಾರಣಕ್ಕೂ ಸರ್ಕಾರಿ ಇಲಾಖೆ ಅ ಧಿಕಾರಿ ಮತ್ತು ಸಿಬ್ಬಂದಿ ರಜೆ ಎಂಬುದಾಗಿ ಭಾವಿಸದೇ ತಪ್ಪದೇ ಹಾಜರಿರಬೇಕು. ಹಾಜರಾಗದವರಿಗೆ ನೋಟಿಸ್‌ ನೀಡಲಾಗುವುದು ಎಂದರು.

10 ಸಾವಿರ ಜನರು ಕುಳಿತುಕೊಳ್ಳಲು ಸಾಮರ್ಥ್ಯದ ಕ್ರೀಡಾಂಗಣ ಅಂದು ತುಂಬಬೇಕು. ಅತಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಿಕ್ಷಣ ಇಲಾಖೆ ಕ್ರಮ ವಹಿಸಬೇಕು. ಮಕ್ಕಳಿಗೆ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಪೆರೇಡ್‌ನ‌ಲ್ಲಿ ಭಾಗವಹಿಸುವ ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು. ಪ್ಲಾಸ್ಟಿಕ್‌ ಧ್ವಜ, ಪ್ಲಾಸ್ಟಿಕ್‌ ಹೂಗುಚ್ಚ ಮತ್ತು ನೀರಿನ ಬಾಟಲ್‌ಗ‌ಳನ್ನು ಯಾವುದೇ ಕಾರಣಕ್ಕೂ ತರುವಂತಿಲ್ಲ. ಅಪರ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್‌, ಪೊಲೀಸ್‌ ಉಪ ಅಧೀಕ್ಷಕರು, ಮಹಾನಗರಪಾಲಿಕೆ ಆಯುಕ್ತರು ಕಾರ್ಯಕ್ರಮದ ಮೇಲುಸ್ತುವಾರಿ ವಹಿಸಿಕೊಂಡು ಸಹಕರಿಸಬೇಕು. ಎಲ್ಲಾ ಸರ್ಕಾರಿ ಇಲಾಖೆಗಳಲ್ಲಿ ಧ್ವಜ ಸಂಹಿತಿ ಕಾಪಾಡಬೇಕು. ಎಲ್ಲಾ ಶಾಲೆಗಳಲ್ಲಿ 7.30ಕ್ಕೆ ಧ್ವಜಾರೋಹಣಕ್ಕೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯವರಿಗೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪೂಜಾರ್‌ ವೀರಮಲ್ಲಪ್ಪ ಮಾತನಾಡಿ, ಗಣರಾಜ್ಯೋತ್ಸವ ಸಂಬಂಧ ಆಯಾ ಇಲಾಖೆಯವರು ತಮಗೆ ವಹಿಸಿರುವ ಜವಾಬ್ದಾರಿ ನಿರ್ವಹಿಸಬೇಕು. ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಹಾಗೂ ಪ್ರಮುಖ ಖಾಸಗಿ ಕಚೇರಿಗಳ ಮೇಲೆ ಜ.25 ಮತ್ತು 26 ರಂದು ವಿದ್ಯುತ್‌ ದೀಪಾಲಂಕಾರ ಮಾಡಿಸಬೇಕು. ಅಂದು ಸಂಜೆ ಕುವೆಂಪು ಕನ್ನಡ ಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ವೇದಿಕೆ ನಿರ್ಮಾಣ, ಆಸನದ ವ್ಯವಸ್ಥೆ, ಧ್ವನಿ ವರ್ಧಕ, ವಿದ್ಯುತ್‌ ಪೂರೈಕೆ ಕುರಿತು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರು, ಕಾರ್ಯಪಾಲಕ ಅಭಿಯಂತರರು ಸಂಪೂರ್ಣ ಮೇಲುಸ್ತುವಾರಿ ನೋಡಿಕೊಳ್ಳಬೇಕು. ಕ್ರೀಡಾಂಗಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಪೊಲೀಸ್‌ ಇಲಾಖೆಯವರು ಭದ್ರತೆ ಮತ್ತು ಸುರಕ್ಷತೆ ಒದಗಿಸಬೇಕು. ಕ್ರೀಡಾಂಗಣದಿಂದ ಕೆಲವು ಶಾಲೆಗಳು ದೂರವಿದ್ದು, ಆರ್‌ಟಿಓ ಶಾಲಾ ಮಕ್ಕಳಿಗೆ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಅಧಿಕಾರಿ, ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ನೀಡಿ, ಸನ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ.ಜಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.