ಭವಿಷ್ಯದಲ್ಲಿ ವಿದ್ಯುತ್‌ ಚಾಲಿತ ವಾಹನಗಳೇ ಪರ್ಯಾಯ


Team Udayavani, Mar 7, 2020, 5:47 PM IST

7-March-26

ದಾವಣಗೆರೆ: ಮುಂದಿನ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್‌, ಇತರೆ ತೈಲಗಳು ಸಿಗದಂತಾಗಲಿದ್ದು, ಆಗ ಪರ್ಯಾಯ ವ್ಯವಸ್ಥೆಯಾಗಿ ನಮಗೆ ವಿದ್ಯುಚ್ಚಾಲಿತ ವಾಹನಗಳು ಸಹಾಯಕ್ಕೆ ಬರಲಿವೆ ಎಂದು ಬಾಪೂಜಿ ಇಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯ ಡಾ| ಎಂ.ಸಿ.ನಟರಾಜ್‌ ಹೇಳಿದ್ದಾರೆ.

ಶುಕ್ರವಾರ, ಬಿ.ಐ.ಇ.ಟಿ. ಕಾಲೇಜಲ್ಲಿ ಯಾಂತ್ರಿಕ ವಿಭಾಗದ ವತಿಯಿಂದ ಆಯೋಜಿಸಿದ್ದ ವಿದ್ಯುಚ್ಚಾಲಿತ ವಾಹನಗಳ ವಿನ್ಯಾಸ ಮತ್ತು ತಯಾರಿಕೆ ಬಗ್ಗೆ ಮೂರು ದಿನಗಳ ಕಾರ್ಯಗಾರ ಉದ್ಘಾಟಿಸಿ, ಮಾತನಾಡಿದ ಅವರು, ಕೆಲವೇ ದಿನಗಳಲ್ಲಿ ವಿದ್ಯುಚ್ಚಾಲಿತ ವಾಹನಗಳ ಯುಗ ಪ್ರಾರಂಭವಾಗಲಿದೆ. ವಾಹನಗಳಿಗೆ ಬೇಕಾಗುವ ಇಂಧನ ಕೊರತೆ ಉಂಟಾಗಲಿದ್ದು, ಆಗ ಪರ್ಯಾಯ ವ್ಯವಸ್ಥೆಯಾಗಿ ವಿದ್ಯುಚ್ಚಾಲಿತ ವಾಹನಗಳೇ ಅನಿವಾರ್ಯವಾಗಲಿವೆ ಎಂದರು.

ಕಾಲೇಜಿನ ನಿರ್ದೇಶಕ ಪ್ರೊ| ವೈ. ವೃಷಬೇಂದ್ರಪ್ಪ ಮಾತನಾಡಿ, ಕಾಲಕಾಲಕ್ಕೆ ತಂತ್ರಜ್ಞಾನ ಬದಲಾವಣೆ ಸಾರಿಗೆ ವಾಹನಗಳಲ್ಲಿ ಆಗುತ್ತಿದೆ. ಆ ಬದಲಾವಣೆಗೆ ನಾವು ಹೊಂದಿಕೊಂಡು ಆವಿಷ್ಕಾರ ಮಾಡಬೇಕಿದೆ. ಬ್ಯಾಟರಿ ಚಾರ್ಜ್‌ ಮಾಡುವುದೇ ಈ ವಾಹನಗಳಲ್ಲಿ ಸವಾಲಿನ ಕೆಲಸವಾಗಿದೆ ಎಂದರು. ಯಾಂತ್ರಿಕ ವಿಭಾಗದ ಮುಖ್ಯಸ್ಥ ಡಾ| ಎಸ್‌ .ಕುಮಾರಪ್ಪ ಮಾತನಾಡಿ, ಲಿಥಿಯಂ ಬ್ಯಾಟರಿಗೆ ಬದಲಾಗಿ ಪರ್ಯಾಯ ತಂತ್ರಜ್ಞಾನ ಅಭಿವೃದ್ಧಿಪಡಿಸಲಾಗಿದೆ. ಮೊದಲು ಬ್ಯಾಟರಿ ಚಾರ್ಜ್‌ ಮಾಡಲು 2-3 ಗಂಟೆ ಬೇಕಾಗುತ್ತಿತ್ತು. ಇದೀಗ ಕೆಲವೇ ಸೆಕೆಂಡುಗಳಲ್ಲಿ ರೀಚಾರ್ಜ್‌ ಮಾಡಲು ಫ್ಲಾÂಷ್‌ ಚಾರ್ಜರ್‌ ಬಂದಿವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಮೆಕ್ಯಾನಿಕಲ್‌ ವಿದ್ಯಾರ್ಥಿ ವೇದಿಕೆಯ ಆಯೋಜಕ ಡಿ.ಇ.ಉಮೇಶ್‌, ಟಿ.ಆರ್‌.ಮೋಹನ್‌ ಕಾಲೇಜಿನ ಅಕಾಡೆಮಿಕ್‌ ಡೀನ್‌ ಡಾ| ಕೆ ಸದಾಶಿವಪ್ಪ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಮಂಜುಳಾ ಸ್ವಾಗತಿಸಿ, ರುಕಯ್ಯ ನಿರೂಪಿಸಿದರು. ನೇಹಾ ವಂದಿಸಿದರು.

ಕಾರ್ಯಗಾರ ಉದ್ದೇಶ: ಕೇಂದ್ರ ಸರ್ಕಾರ 2030ರ ವರೆಗೆ ದೇಶದಲ್ಲಿ ಸುಮಾರು ಶೇ. 30-40ರಷ್ಟು ವಿದ್ಯುತ್‌ ಚಾಲಿತ ವಾಹನಗಳನ್ನು ಉಪಯೋಗಿಸು ವಂತಾಗಬೇಕೆಂದು ನಿರ್ಧರಿಸಿದೆ. ಇದರಿಂದ ವಾಯು ಮತ್ತು ಶಬ್ದ ಮಾಲಿನ್ಯ ಕಡಿಮೆಗೊಳಿಸಬಹುದು.
ಮುಂದಿನ ದಿನಗಳಲ್ಲಿ ಸರಿಸುಮಾರು ಕನಿಷ್ಠ 50 ಲಕ್ಷ ಉದ್ಯೋಗ ಸೃಷ್ಟಿಯನ್ನು ಈ ಕ್ಷೇತ್ರದಲ್ಲಿ ನಿರೀಕ್ಷಿಸಬಹುದು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿದ್ಯುಚ್ಚಾಲಿತ ವಾಹನಗಳ ವಿನ್ಯಾಸ ತಯಾರಿಕೆಗೆ ಬೇಕಾಗುವ ಕೌಶಲ್ಯಾಭಿವೃದ್ಧಿಗೆ ಮತ್ತು ಸ್ವಂತ ಉದ್ಯೋಗ ಪ್ರಾರಂಭಿಸುವುದಕ್ಕೆ ಪ್ರೋತ್ಸಾಹ ನೀಡುತ್ತಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು
ಬಿಐಇಟಿ ಕಾಲೇಜಿನ ಯಾಂತ್ರಿಕ ವಿಭಾಗವು ವಿದ್ಯುಚ್ಚಾಲಿತ ವಾಹನಗಳ ತಯಾರಿಕೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮೂರು ದಿನಗಳ ಕಾರ್ಯಾಗಾರ ಏರ್ಪಡಿಸಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಬೆಂಗಳೂರಿನ ಡೆಸಿಬಲ್‌ ಲ್ಯಾಬ್‌ನ ಕಾರ್ಯನಿರ್ವಾಹಕ
ಸೂರಜ್‌ ಎಸ್‌.ಡಿ. ಮತ್ತು ತಂಡದವರು ವಿವಿಧ ವಿಷಯ ಬೋಧಿಸಿ, ಪ್ರಾಯೋಗಿಕವಾಗಿ ಎರಡು ವಾಹನಗಳನ್ನು ವಿದ್ಯಾರ್ಥಿಗಳಿಂದ ತಯಾರಿಸಲಿದ್ದಾರೆ.

ಟಾಪ್ ನ್ಯೂಸ್

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.