ಗುರು ಭವನ ನಿರ್ಮಾಣಕ್ಕೆ ಗ್ರಹಣ!

2008-09ರಲ್ಲಿ ಪ್ರಾರಂಭಗೊಂಡ ಕಾಮಗಾರಿ

Team Udayavani, Nov 15, 2020, 6:37 PM IST

ಗುರು ಭವನ ನಿರ್ಮಾಣಕ್ಕೆ ಗ್ರಹಣ!

ಕೂಡ್ಲಿಗಿ: ಗುರು ಭವನ ನಿರ್ಮಾಣಕ್ಕೆ 2008-09ನೇ ಸಾಲಿನಲ್ಲಿ ಭೂಮಿಪೂಜೆ ನೆರವೇರಿಸಿ ಬುನಾದಿ ಹಾಕಿ 11 ವರ್ಷ ಕಳೆದಿದೆ. ಅಂದಿನಿಂದ ಇಂದಿನವರೆಗೆ ನಿರ್ಮಾಣ ಕಾಮಗಾರಿ ನನೆಗುದಿಗೆ ಬಿದ್ದಿದೆ!

ಪಟ್ಟಣದ ಚೋರನೂರು ರಸ್ತೆಯಲ್ಲಿನಬಡಾವಣೆಯಲ್ಲಿ ಎರಡು ವರ್ಷಗಳ ಹಿಂದೆ 60-40 ಅಡಿ ಅಳತೆಯ ನಿವೇಶನಗುರುತು ಮಾಡಲಾಗಿತ್ತು. ಇದರಲ್ಲಿ 1.25ಕೋಟಿ ರೂ. ವೆಚ್ಚದಲ್ಲಿ ಮೂರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿತ್ತು. ಅಂದಿನ ಶಾಸಕರಾಗಿದ್ದ ಬಿ. ನಾಗೇಂದ್ರ ಭೂಮಿಪೂಜೆ ನೆರವೇರಿಸಿದ್ದರು. ಈ ಸಂದರ್ಭದಲ್ಲಿ ಶಾಸಕರ ಅನುದಾನದಲ್ಲಿ 20 ಲಕ್ಷ ರೂ. ಹಣ ಬಿಡುಗಡೆಯಾಗಿದ್ದು, ಕಾಮಗಾರಿಯೂ ಆರಂಭವಾಗಿತ್ತು. ಆದರೆ ನೆಲಮಾಳಿಗೆ ನಿರ್ಮಾಣ ಮಾಡಲು ಸುಮಾರು 10 ಅಡಿಯಷ್ಟು ನೆಲ ಅಗೆದು ಪಿಲ್ಲರ್‌ಗಳನ್ನು ಹಾಕಿ ಕೈಬಿಡಲಾಗಿದೆ. ಅಲ್ಲಿಂದ ಇಲ್ಲಿಯವರೆಗೂ ಕಾಮಗಾರಿ ಸ್ಥಗಿತಗೊಂಡಿದ್ದು ಮಳೆ ಬಂದಾಗ ನೀರು ನಿಂತು ಕೃಷಿ ಹೊಂಡದಂತೆ ಗೋಚರವಾಗುತ್ತಿದೆ.

9 ಜನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ 5 ಜನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಬದಲಾದರೂ ಗುರುಭವನ ನಿರ್ಮಾಣದ ಬಗ್ಗೆ ಯಾರೊಬ್ಬರು ಅಸಕ್ತಿ ವಹಿಸಿಲ್ಲ. ಇದರಿಂದ ಶಿಕ್ಷಕರು ನೀಡಿದ ವಂತಿಗೆ ಹಣದ ಖರ್ಚುವೆಚ್ಚದ ಬಗ್ಗೆ ಮಾಹಿತಿ ಸಿಗುತ್ತಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಶಿಕ್ಷಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಐದು ಲಕ್ಷ ಹಣ ಅನುದಾನವನ್ನು ಡಿಸಿ ಕಚೇರಿಗೆ ವಿಧಾನಪರಿಷತ್‌ನಿಂದ ಬಿಡುಗಡೆ ಮಾಡಿದರೂ ಸದ್ಬಳಕೆಯಾಗಿಲ್ಲ. ಅಧಿಕಾರಿಗಳು ಹಾಗೂ ಶಿಕ್ಷಕರು ಸೇರಿ ಪ್ರತಿ ವರ್ಷ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಅಂದು ಮಾತ್ರ ಗುರುಭವನದ ನಿರ್ಮಾಣದ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ ಕಾಮಗಾರಿ ಜಾರಿಯಾಗಿಲ್ಲ ಎಂದು ಬಹುತೇಕ ಶಿಕ್ಷಕರು ಅಭಿಪ್ರಾಯ ಪಡುತ್ತಾರೆ.

ಇನ್ನಾದರೂ ಶಾಸಕರು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನ ಹರಿಸಿ ಶಿಕ್ಷಕರ ಅನುಕೂಲಕ್ಕಾಗಿ ಗುರುಭವನ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಅನೇಕ ಶಿಕ್ಷಕರು ಒತ್ತಾಯಿಸಿದ್ದಾರೆ. ಈಗಾಗಲೇ ಶಿಕ್ಷಕರ ಕಲ್ಯಾಣ ನಿಧಿಯಿಂದ 19 ಲಕ್ಷ ರೂ. ಬಿಡುಗೊಳಿಸಿ ವಾಪಸ್ಸು ತೆಗೆದುಕೊಂಡರು. 2018ರಲ್ಲಿ ಮತ್ತೇ ಚೇತರಿಕೆಯಿಂದ ಶಿಕ್ಷಕರ ಕಲ್ಯಾಣ ನಿಧಿಯಿಂದ ಹಂತಹಂತವಾಗಿ 19 ಲಕ್ಷ ರೂವನ್ನು ಕೊಡುತ್ತೇವೆ ಎಂದು ಮುಂದಾಗಿದ್ದಾರೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ಬಿ. ಶಿವಾನಂದ ಬೇಸರ ವ್ಯಕ್ತಪಡಿಸುತ್ತಾರೆ.

ಇತ್ತೀಚೆಗೆ ಶಾಸಕರಾದ ಎನ್‌.ವೈ. ಗೋಪಾಲಕೃಷ್ಣ ಮತ್ತು ಲೋಕಸಭಾ ಸದಸ್ಯರಾದ ದೇವೆಂದ್ರಪ್ಪ ಅನುದಾನ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಮುಂದಿನ ವರ್ಷದಲ್ಲೇ ಶಿಕ್ಷಕರ ಭವನ ಉದ್ಘಾಟನೆ ಮಾಡಿ ಶಿಕ್ಷಕರ ದಿನಾಚರಣೆ ಆಚರಿಸೋಣ ಎಂದು ತಿಳಿಸಿದ್ದಾರೆ. ಕೊಟ್ರಗೌಡ್ರು,ಕೂಡ್ಲಿಗಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ

ಶಿಕ್ಷಕ ಭವನ ನಿರ್ಮಾಣದ ಅನುಮತಿ ನವೀಕರಿಸಬೇಕಾಗಿದ್ದು, ಈ ಹಿಂದಿನ ಸರ್ಕಾರಿ ನೌಕರರ ಸಂಘದಅಧ್ಯಕ್ಷರಾಗಿದ್ದ ಪಿ.ವಿ. ಕೊತ್ಲಪ್ಪ ಅವರಿಗೆ ಅನುಮತಿ ನವೀಕರಿಸುವಂತೆ ಪತ್ರ ನೀಡಲಾಗಿತ್ತು. ಅನುಮತಿ ನವೀಕರಿಸದ ಹಿನ್ನೆಲೆಯಲ್ಲಿ ಯಾವ ಅನುದಾನವೂ ಬಿಡುಗಡೆಯಾಗುತ್ತಿಲ್ಲ. ಬಿ. ಉಮಾದೇವಿ,ಕ್ಷೇತ್ರ ಶಿಕ್ಷಣಾಧಿಕಾರಿ ಕೂಡ್ಲಿಗಿ

 

ಕೆ.ನಾಗರಾಜ್‌

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.