ಪ್ರೀತಿ ನಿರಾಕರಣೆ: ಎದೆಗೆ ಇರಿದುಕೊಂಡ ಯುವಕ
Team Udayavani, Feb 15, 2018, 6:35 AM IST
ಹೊಸಪೇಟೆ: ಪ್ರೀತಿಸುವಂತೆ ಒತ್ತಾಯಿಸಿದ ಯುವಕನೊಬ್ಬ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಗರದಲ್ಲಿ ನಡೆದಿದೆ.
ಉಡುಪಿ ಮೂಲದ ವೀರೇಶ್ (24) ಆತ್ಮಹತ್ಯೆಗೆ ಯತ್ನಿಸಿದ ಯುವಕ. ನಗರದ ಜಿಮ್ವೊಂದರಲ್ಲಿ ತರಬೇತಿ ನೀಡುತ್ತಿದ್ದ ವೀರೇಶ, ಕಾಲೇಜು ವಿದ್ಯಾರ್ಥಿನಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದ.
ಅಲ್ಲದೇ ಮೊಬೈಲ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಪ್ರೀತಿಸುವಂತೆ ಒತ್ತಡ ಹೇರಿದ್ದ.ಪ್ರೀತಿಸದಿದ್ದರೆ ಸಾಮಾಜಿಕ ಜಾಲತಾಣ ಗಳಲ್ಲಿ ಫೋಟೋ ಹಾಕುವುದಾಗಿ ಬೆದರಿಕೆಯೊಡ್ಡಿದ್ದ. ಬುಧವಾರ ಪ್ರೇಮಿಗಳ ದಿನಾಚರಣೆಯಾಗಿದ್ದರಿಂದ ವಿದ್ಯಾರ್ಥಿನಿಯ ಮನೆಗೆ ಮೂವರು ಸ್ನೇಹಿತರೊಂದಿಗೆ ಹೋಗಿ ಬೆದರಿಸಿ, ಚಾಕುವಿನಿಂದ ಎದೆಗೆ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ. ಕೂಡಲೇ ಆತನನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ