ಕಳ್ಳನ ಬಂಧನ: 7 ಬೈಕ್ ವಶ
Team Udayavani, Apr 11, 2022, 2:40 PM IST
ಬಳ್ಳಾರಿ: ಎಪಿಎಂಸಿ ಪೊಲೀಸ್ ಠಾಣೆ ಸೇರಿ ನಗರದ ವಿವಿಧೆಡೆ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂ ಧಿಸಿರುವ ಎಪಿಎಂಸಿ ಪೊಲೀಸರು ಅವನಿಂದ 3.5 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ನೆರೆಯ ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆ ಗೊಡಸಲಪಲ್ಲಿ ಗ್ರಾಮದ ಶ್ರಾವಿಣ್ (28) ಬಂಧಿತ ಆರೋಪಿ. ಎಪಿಎಂಸಿ ಠಾಣೆಯ ಪಿಎಸ್ಐ ಪರಶುರಾಮ್ ತಮ್ಮ ಸಿಬ್ಬಂದಿಯೊಂದಿಗೆ ಖಚಿತ ಮಾಹಿತಿ ಮೇರೆಗೆ ನಗರದ ಕಾಕರ್ಲತೋಟದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಡಭಾಗದಲ್ಲಿ ಆರೋಪಿ ಶ್ರಾವಿಣ್ ನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸಿದಾಗ ಎಪಿಎಂಸಿ ಠಾಣೆ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ , ಬ್ರೂಸ್ಪೇಟೆ ಠಾಣೆ ವ್ಯಾಪ್ತಿಯಲ್ಲಿ 4 ದ್ವಿಚಕ್ರ ವಾಹನಗಳನ್ನು ನಕಲು ಬೀಗ ಬಳಸಿ ಕಳ್ಳತನ ಮಾಡಿರುವುದು ಒಪ್ಪಿಕೊಂಡಿದ್ದು, ಒಟ್ಟು 3.5 ಲಕ್ಷ ರೂ. ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಎಪಿಎಂಸಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ. ಸೈದುಲು ಅಡಾವತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ