ದೇವೇಗೌಡ, ಸಿದ್ದು ಸ್ವಯಂ ಘೋಷಿತ ವ್ಯಕ್ತಿಗಳು
Team Udayavani, Oct 27, 2018, 6:00 AM IST
ಬಳ್ಳಾರಿ: ರಾಜ್ಯದಲ್ಲಿ ಇಬ್ಬರು ಸ್ವಯಂ ಘೋಷಿತ ವ್ಯಕ್ತಿಗಳಿದ್ದಾರೆ. ಇದರಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ವಯಂ ಘೋಷಿತ ಮಣ್ಣಿನ ಮಗನಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸ್ವಯಂ ಘೋಷಿತ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಲೇವಡಿ ಮಾಡಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಮೈಸೂರಿನಲ್ಲಿ ದಸರಾ ಉತ್ಸವಕ್ಕೆ ಚಾಲನೆ ನೀಡಿದ್ದ ಸಿದ್ದರಾಮಯ್ಯ, ಈಗಲೂ ನಾನೇ ಸಿಎಂ, ಮುಂದೆಯೂ ನಮ್ಮ ಸರ್ಕಾರ
ಬರಲಿದ್ದು, ಆಗಲೂ ನಾನೇ ಸಿಎಂ, ಮುಂದಿನ ವರ್ಷವೂ ನಾನೇ ದಸರಾ ಉತ್ಸವ ಉದ್ಘಾಟಿಸುವುದಾಗಿ ತಿಳಿಸುವ ಮೂಲಕ ಜನಾದೇಶವಿಲ್ಲದೇ ಸ್ವಯಂ ಘೋಷಿತ ಮುಖ್ಯಮಂತ್ರಿಯಾಗಿದ್ದಾರೆ. ಅದೇ ರೀತಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಹ ಯಾವಾಗಲೂ ಈ ನಾಡಿನ ಮಣ್ಣಿನ ಮಗ ಎಂದು ಹೇಳಿಕೊಂಡು ಸ್ವಯಂ ಘೋಷಿತ ಮಣ್ಣಿನ ಮಗನಾಗಿದ್ದಾರೆ. ಸಿದ್ದರಾಮಯ್ಯಗೆ ಚಾಮುಂಡಿ ಕ್ಷೇತ್ರದಲ್ಲಿ ಸೋತ ಮೇಲೂ ಬುದ್ಧಿ ಬರಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ