ಕಾರ್ಖಾನೆ ಮಾಲೀಕರೊಂದಿಗೆ ಚರ್ಚಿಸಿ ಸಮಸ್ಯೆ ಇತ್ಯರ್ಥ
Team Udayavani, Nov 20, 2018, 5:16 PM IST
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕು ದೇಶನೂರು ಗ್ರಾಮದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕಬ್ಬು ಬೆಳೆಗಾರರ ಮಧ್ಯೆ ಉಂಟಾದ ಸಮಸ್ಯೆಯನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ನಗರದ ಜಿಪಂ ಕಚೇರಿಯ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಎನ್ಎಸ್ ಎಲ್ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೆಳೆಗಾರರನ್ನು ಭೇಟಿಯಾದ ಸಚಿವ ಡಿ.ಕೆ. ಶಿವಕುಮಾರ್, ಅಂದಾಜು 7500 ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆಯನ್ನು ಬೆಳೆಯಲಾಗಿದೆ. ಕಟಾವು ಹಂತಕ್ಕೆ ಬಂದಿರುವ ಕಬ್ಬನ್ನು ಖರೀದಿಸಲು ಸಕ್ಕರೆ ಕಾರ್ಖಾನೆ ಮಾಲೀಕರು ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ, ತುಂಗಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಜಿಲ್ಲೆಯ ಸಿರುಗುಪ್ಪ ಮತ್ತು ಪಕ್ಕದ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ರೈತರು ಸಾವಿರಾರು ಹೆಕೇrರ್ ಪ್ರದೇಶದಲ್ಲಿ ಕಬ್ಬು ಬೆಳೆಯನ್ನು ಬೆಳೆದಿದ್ದಾರೆ. ಅದು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಸೂಚನೆ ಮೇರೆಗೆ ಕಬ್ಬನ್ನು ಬೆಳೆದಿದ್ದು, ಆರ್ಥಿಕ ಮುಗ್ಗಟ್ಟು ಎದುರಾಗಿದೆ ಎಂಬ ಕಾರಣವೊಡ್ಡಲಾಗಿದೆ.
ಇದೀಗ ಕಬ್ಬು ಬೆಳೆಗಾರರು ಕಬ್ಬನ್ನು ಮಾರಾಟ ಮಾಡಲಾರದೆ, ಹಾಗೆಯೇ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದರು. ಆಯ್ತು ನಿಮ್ಮ ಈ ಸಮಸ್ಯೆಗಳ ಕುರಿತು ಪರಿಶೀಲಿಸಿ ಶೀಘ್ರವೇ ಇತ್ಯರ್ಥಪಡಿಸಲು ಶ್ರಮಿಸುವೆ. ಅಲ್ಲಿಯವರೆಗೆ ಸಾವಧಾನದಿಂದಿರಿ. ಈ ಜಿಲ್ಲೆಯ ಕಬ್ಬು ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳನ್ನು ಹೇಳಿಕೊಳ್ಳಲು ಹೊಸಪೇಟೆ, ಸಿರುಗುಪ್ಪ ತಾಲೂಕಿನ
ರೈತರು ಕೈಗೊಂಡಿದ್ದ ಪ್ರತಿಭಟನೆ ಮಧ್ಯ ಭಾಗದಲ್ಲೇ ಸಚಿವರು ಕುಳಿತುಕೊಂಡೇ ಸಮಸ್ಯೆ ಆಲಿಸಿದರು. ಈ ವಿಚಾರವಾಗಿ ನಾನು ಮತ್ತೆ ಮಾತನಾಡುವೆ.
ಜಿಲ್ಲಾಧಿಕಾರಿ ಡಾ| ರಾಮಪ್ರಸಾತ್ ಮನೋಹರ್ ಬಳಿ ನಾನು ಮಾಹಿತಿ ಪಡೆದು ಸಕ್ಕರೆ ಕಾರ್ಖಾನೆಗಳ ಮಾಲೀಕರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಭರವಸೆ ನೀಡಿದರು.
ಜಿಪಂ ಕಚೇರಿಗೆ ಮುತ್ತಿಗೆ: ಬೇಸಿಗೆ ಬೆಳೆಗೆ ತುಂಗಭದ್ರಾ ಜಲಾಶಯದಿಂದ ಎಚ್ಎಲ್ಸಿ ಉಪಕಾಲುವೆಗೆ ನೀರು ಹರಿಸಬೇಕು ಎಂದು ನೂರಾರು ರೈತರು ಜಿಲ್ಲಾ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಹೊರಟಿದ್ದರು. ಪೊಲೀಸರು ರೈತರನ್ನು ತಡೆಹಿಡಿದರು. ಸಚಿವರು ಬರುವಂತೆ ಪಟ್ಟು ಹಿಡಿದರು.
ಕಚೇರಿಯ ಸಭಾಂಗಣದಲ್ಲಿದ್ದ ಸಚಿವ ಡಿ.ಕೆ.ಶಿವಕುಮಾರ್ ಕೆಳಗಿಳಿದು ಬಂದರು. ರೈತರ ಮನವಿಪತ್ರ ಸ್ವೀಕರಿಸಿ, ಪರಿಶೀಲಿಸಿ ಬಗೆ ಹರಿಸುವುದಾಗಿ ಭರವಸೆ ನೀಡಿದರು. ಬಳ್ಳಾರಿ ಲೋಕಸಭಾ ಸದಸ್ಯ ವಿ.ಎಸ್. ಉಗ್ರಪ್ಪ, ಶಾಸಕರಾದ ಆನಂದ ಸಿಂಗ್, ಈ.ತುಕಾರಾಂ, ಜೆ.ಎನ್.ಗಣೇಶ, ಪಿ.ಟಿ.ಪರಮೇಶ್ವರ್ನಾಯ್ಕ ಸಾಥ್ ನೀಡಿದರು. ತುಂಗಭದ್ರಾ ರೈತ ಸಂಘದ ಅಧ್ಯಕ್ಷ ಜಿ.ಪುರುಷೋತ್ತಮಗೌಡ ಸೇರಿದಂತೆ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು