ಭತ್ತಕ್ಕೆ ರೋಗಗಳ ಬಾಧೆ: ಇಳುವರಿ ಕುಂಠಿತ


Team Udayavani, Nov 16, 2020, 8:08 PM IST

ಭತ್ತಕ್ಕೆ ರೋಗಗಳ ಬಾಧೆ: ಇಳುವರಿ ಕುಂಠಿತ

ಬಳ್ಳಾರಿ: ಮಾರುಕಟ್ಟೆಯಲ್ಲಿ ದರ ಕುಸಿತದಿಂದ ಜಿಲ್ಲೆಯ ಭತ್ತ ಬೆಳೆಗಾರರು ಈಗಾಗಲೇ ತತ್ತರಿಸಿದ್ದಾರೆ. ಕಟಾವಿಗೆ ಬಂದುನಿಂತಿರುವ ಭತ್ತದ ಬೆಳೆಗೆ ಇದೀಗ ವಿವಿಧ ರೋಗಗಳ ಬಾಧೆ ಕಾಡುತ್ತಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ಇಳುವರಿ ಬಾರದೇ ಭತ್ತ ಬೆಳೆದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ರಾಜ್ಯ ಸರ್ಕಾರ ಭತ್ತಕ್ಕೆ 1880 ರೂ.ಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದೆ. ಆದರೆ, ಈ ಬಾರಿ ಸರ್ಕಾರ ನಿಗದಿಪಡಿಸಿದ್ದ ಕನಿಷ್ಠ ಬೆಂಬಲ ಬೆಲೆಗಿಂತಲೂ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆ ಇದೆ. ಕ್ವಿಂಟಲ್‌ 1200-1250 ರೂ. ಇದೆ. ಬೆಲೆ ಕುಸಿತದಿಂದಾಗಿ ಈಗಾಗಲೇ ರೈತರು ತತ್ತರಿಸಿದ್ದಾರೆ. ಅಂತಹದ್ದರಲ್ಲಿ ಕಟಾವಿಗೆ ಬಂದು ನಿಂತಿರುವ ಭತ್ತ ಬೆಳೆಗೆ ಇದೀಗ ಸಪ್ಪೆರೋಗ, ಕೊಂಡಿರೋಗ, ಊದಿನಕಡ್ಡಿ ರೋಗಗಳು ಕಾಣಿಸಿಕೊಂಡಿವೆ. ಭತ್ತದ ಸಸಿಗಳ ಬುಡದಲ್ಲಿ ಹುಳುಗಳು ಬಿದ್ದಿವೆ. ಪರಿಣಾಮ ಊದಿನಕಡ್ಡಿಯಂತೆ ಬೆಳೆಯುವ ಸಸಿಗಳು ಭತ್ತದ ತೆನೆ ಬಿಟ್ಟಿಲ್ಲ. ಇನ್ನು ಸಪ್ಪೆ/ಕೊಂಡಿ ರೋಗವೂ ಕಾಣಿಸಿಕೊಂಡಿದ್ದು, ಬೆಳೆಯಲ್ಲಿ ಭತ್ತದ ತೆನೆಗಳು ಕಾಣಿಸುತ್ತವೆಯಾದರೂ, ಅವುಗಳಲ್ಲಿ ಕಾಳು ಇರುವುದಿಲ್ಲ. ಪರಿಣಾಮ ನಿರೀಕ್ಷಿತ ಪ್ರಮಾಣದಲ್ಲಿ ಇಳುವರಿ ಬಂದಿಲ್ಲ.

ಪ್ರತಿವರ್ಷ ಎಕರೆಗೆ 30ರಿಂದ 35 ಕ್ವಿಂಟಲ್‌ ಬೆಳೆಯುತ್ತಿದ್ದ ಭತ್ತ ಈ ಬಾರಿ ರೋಗಬಾಧೆಯಿಂದ ಕೇವಲ 10ರಿಂದ 15 ಕ್ವಿಂಟಲ್‌ನಷ್ಟು ಮಾತ್ರ ಬಂದಿದ್ದು, ಬೆಲೆ ಕುಸಿತದಿಂದ ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವ ಭತ್ತ ಬೆಳೆದ ರೈತರಿಗೆ ಗಾಯದ ಮೇಲೆ ಬರೆ ಎಳೆದಿದೆ.

ಹೆಚ್ಚಿನ ಮಳೆ, ತೇವಾಂಶ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಎಂ.ಸೂಗೂರು, ರುದ್ರಪಾದ, ಮುದ್ದಟನೂರು, ಹಾವಿನಾಳು, ಕಂಪ್ಲಿ ತಾಲೂಕಿನ ಮಣ್ಣೂರು ಸೇರಿ ನೆರೆಯ ಇತರೆ ಗ್ರಾಮಗಳಲ್ಲಿ ಸುಮಾರು 15 ಸಾವಿರ ಎಕರೆಯಲ್ಲಿ ರೈತರು ಭತ್ತ ಬೆಳೆದಿದ್ದಾರೆ. ಪ್ರತಿವರ್ಷ ಎರಡು ಭತ್ತ ಬೆಳೆ ಪಡೆಯುತ್ತಾರೆ. ಆದರೆ, ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾಗಿದೆ. ಇದರಿಂದ ಭೂಮಿಯಲ್ಲಿ ತೇವಾಂಶವೂ ಹೆಚ್ಚಾಗಿದ್ದು, ಹಿಂದೆಂದೂ ಕಾಣದ ಊದಿನಕಡ್ಡಿ, ಕೊಂಡಿ, ಸಪ್ಪೆರೋಗಳು ಈ ಬಾರಿ ಆವರಿಸಲು ಕಾರಣವಾಗಿದೆ. ಇದರಿಂದ ಭತ್ತದ ಬುಡದಲ್ಲಿ ಹುಳುಗಳು ಬಿದ್ದಿದ್ದು, ಭತ್ತದ ಇಳುವರಿ ಕಡಿಮೆಯಾಗಿದೆ ಎಂದು ಭತ್ತ ಬೆಳೆದ ರೈತರು ಅಳಲು ತೋಡಿಕೊಂಡರು.

ಔಷಧ ಬಳಸಿದರೂ ಪ್ರಯೋಜನವಿಲ್ಲ: ಭತ್ತವನ್ನು ಕಾಡುತ್ತಿರುವ ರೋಗವನ್ನು ಹೋಗಲಾಡಿಸಲು ಒಂದು ಲೀಟರ್‌ 13 ಸಾವಿರ ರೂ. ಬೆಲೆಯ ಫೆಕ್ಸ್‌ತಾನ್‌, 16 ಸಾವಿರ ರೂ. ಬೆಲೆಯಫ್ರೇಮ್‌ ಕ್ರಿಮಿನಾಶಕಗಳನ್ನು ಸಿಂಪಡಿಸಲಾಗಿದೆ. ತ್ರಿಜಿ ಗುಳಿಗೆಗಳನ್ನು ಸಹ ಹಾಕಲಾಗಿದೆ. ಬೆಳೆಗೆಸಿಂಪಡಿಸುವ ಕ್ರಿಮಿನಾಶಕ ಬುಡದಲ್ಲಿರುವ ಹುಳುಗಳವರೆಗೆ ಹೋಗಲ್ಲ. ಹೀಗಾಗಿ ಭತ್ತವನ್ನು ಕಾಡುತ್ತಿರುವ ರೋಗ ಕಡಿಮೆಯಾಗುತ್ತಿಲ್ಲ. ಬೆಳೆ ನಷ್ಟದಿಂದ ರೈತರು ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿದ್ದರೂ ಸಂಬಂಧಪಟ್ಟ ಕೃಷಿ ಇಲಾಖೆ ಅಧಿಕಾರಿಗಳು ಮಾತ್ರ ಒಮ್ಮೆಯೂ ಇತ್ತಕಡೆ ತಿರುಗಿ ನೋಡಿಲ್ಲ. ಬೆಳೆಗೆ ರೋಗ ಆವರಿಸಿರುವುದರಿಂದ ಈ ಬಾರಿ ಖರ್ಚು ಸಹಹೆಚ್ಚಾಗಿದ್ದು, ಸರ್ಕಾರ ನೆರವಿಗೆ ಬಾರದಿದ್ದಲ್ಲಿ ರೈತರು ನಿರೀಕ್ಷೆಗೂ ಮೀರಿ ನಷ್ಟ ಎದುರಿಸಲಿದ್ದಾರೆ ಎಂದು ರೈತರಾದ ಸತ್ಯಬಾಬು, ಶ್ರೀನಿವಾಸ್‌ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರವೇ ಖರೀದಿಸಬೇಕು: ರಾಜ್ಯ ಸರ್ಕಾರ ಭತ್ತಕ್ಕೆ ಕನಿಷ್ಠ ಬೆಂಬಲ 1880 ರೂ.ಗಳನ್ನು ನಿಗದಿಪಡಿಸಿದೆ. ಆದರೂ ಮುಕ್ತ ಮಾರುಕಟ್ಟೆಯಲ್ಲಿ ಭತ್ತಕ್ಕೆ ಸೂಕ್ತ ಬೆಲೆಯಿಲ್ಲ. 1200-1250ಕ್ಕೆ ಕುಸಿದಿದೆ. ಹೀಗಾಗಿ ರಾಜ್ಯ ಸರ್ಕಾರವೇ ಎಲ್ಲೆಡೆ ಭತ್ತ ಖರೀದಿ ಕೇಂದ್ರ ತೆರೆಯಬೇಕು. ಯಾವುದೇ ಷರತ್ತು ವಿಧಿ ಸದೆ ರೈತರು ಬೆಳೆದ ಎಲ್ಲ ಭತ್ತವನ್ನು ಸರ್ಕಾರವೇ ಖರೀದಿಸುವ ಮೂಲಕ ರೈತರ ನೆರವಿಗೆ ಧಾವಿಸಬೇಕು ಎಂದು ರೈತರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಬಾರಿ ಮಳೆ ಜಾಸ್ತಿಯಾಗಿದ್ದರಿಂದ ಭೂಮಿಯಲ್ಲಿ ತೇವಾಂಶವೂ ಹೆಚ್ಚಿದ್ದರಿಂದ ಭತ್ತದ ಬೆಳೆಗೆ ಊದಿನಕಡ್ಡಿ, ಸಪ್ಪೆ, ಕೊಂಡಿ ರೋಗಗಳು ಕಾಣಿಸಿಕೊಂಡಿವೆ. ಸಸಿಯ ಬುಡದಲ್ಲಿ ಹುಳು ಬಿದ್ದಿದ್ದು, ದುಬಾರಿ ಬೆಲೆಯ ಕ್ರಿಮಿನಾಶಕ, ಗುಳಿಗೆ ಸಿಂಪಡಿಸಿದರೂ ಯಾವುದೇ ಪರಿಣಾಮ ಬೀರಿಲ್ಲ. ಇದರಿಂದ ರೋಗ ನಿಯಂತ್ರಣಕ್ಕೆ ಬಾರದೇ 30-35 ಕ್ವಿಂಟಲ್‌ ಇದ್ದ ಇಳುವರಿ 10-15ಕ್ಕೆ ಕುಸಿದಿದೆ. ರೋಗ ಹೋಗಲಾಡಿಸುವ ಸಲುವಾಗಿ ಈ ಬಾರಿ  ಖರ್ಚು ಸಹ ಹೆಚ್ಚಾಗಿದೆ. -ಎಂ. ಸತ್ಯಬಾಬು, ರೈತರು ಎಂ. ಸೂಗೂರು ಗ್ರಾಮ

 ಬಳ್ಳಾರಿ ಜಿಲ್ಲೆಯಲ್ಲಿ ಈ ಬಾರಿ ಮಳೆ ಜಾಸ್ತಿಯಾಗಿದ್ದು, ಭತ್ತದ ಬೆಳೆಗೆ ರೋಗಗಳ ಬಾಧೆ ಕಾಡುತ್ತಿರುವುದರಿಂದ ನಿರೀಕ್ಷೆಗೂಮೀರಿ ಬೆಳೆ ನಷ್ಟವಾಗಿದೆ. ಇಳುವರಿ ಕುಂಠಿತವಾಗಿದೆ. ಮುಕ್ತ ಮಾರುಕಟ್ಟೆಯಲ್ಲೂಭತ್ತದ ಬೆಲೆ ಕುಸಿದಿದೆ. ರಾಜ್ಯ ಸರ್ಕಾರ ಈಗಾಗಲೇ ಭತ್ತಕ್ಕೆ 1880 ರೂ. ಬೆಂಬಲ ಬೆಲೆ ನಿಗದಿಪಡಿಸಿದೆ. ಭತ್ತ ಖರೀದಿ ಕೇಂದ್ರ ತೆರೆಯುವಂತೆ ಆದೇಶ ಹೊರಡಿಸಿದೆ.

ಆದರೆ, ಈ ವರೆಗೂ ಎಲ್ಲೂ ಕೇಂದ್ರಗಳನ್ನು ತೆರೆದಿಲ್ಲ. ಹಾಗಾಗಿ ಕೂಡಲೇ ಕೇಂದ್ರಗಳನ್ನು ತೆರೆದು ಯಾವುದೇ ಶರತ್ತು ವಿ ಧಿಸದೆ ನಿಗದಿತ ಬೆಂಬಲ ಬೆಲೆಗೆ ಭತ್ತವನ್ನು ಖರೀದಿಸಬೇಕು. ಶ್ರೀನಿವಾಸ್‌, ರೈತರು, ಎಂ. ಸೂಗೂರು ಗ್ರಾಮ

 

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.