ದೇವದಾಸಿ ಕುಟುಂಬಕ್ಕೆ ಕಿಟ್ ವಿತರಣೆ
Team Udayavani, May 23, 2020, 6:22 AM IST
ಹರಪನಹಳ್ಳಿ: ಕೋವಿಡ್-19 ಮಹಾಮಾರಿ ಲಾಕ್ಡೌನ್ ಹಿನ್ನಲೆಯಲ್ಲಿ ಸಮಾನ ಮನಸ್ಕರ ವೇದಿಕೆವತಿಯಿಂದ ತಾಲೂಕಿನ ಮೈದೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮೈದೂರು, ಬಳಿಗನೂರು, ಗೌರಿಪುರ, ಗಜಾಪುರ, ಕೆಸರಹಳ್ಳಿ ಗ್ರಾಮಗಳ ದೇವದಾಸಿ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸಲಾಯಿತು.
ಕಿಟ್ ವಿತರಿಸಿದ ಮಾತನಾಡಿದ ನಂದಿಬೇವೂರು ತಾ.ಪಂ ಸದಸ್ಯ ಓ.ರಾಮಪ್ಪ ಅವರು, ಇಡೀ ವಿಶ್ವವನ್ನೇ ತಲ್ಲಣಗೊಳಿಸಿದ ಕೋವಿಡ್ ವೈರಸ್ ತಡೆಗಟ್ಟುವ ಹಿನ್ನಲೆಯಿಂದ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಹಾಗೂ ಸ್ಯಾನೀಟೈಸರ್ ಬಳಸಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೋವಿಡ್ ವೈರಸ್ ತಡೆಗಟ್ಟಲು ಮುಂದಾಗಬೇಕು ಎಂದು ಹೇಳಿದರು.
ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರಾದ ಎಚ್.ದಿವಾಕರ್ ಮಾತನಾಡಿದರು. ತಾ.ಪಂ ಮಾಜಿ ಅಧ್ಯಕ್ಷ ಕೆ.ಕುಬೇರಪ್ಪ, ವಿ.ಎಸ್.ಎನ್ ನಿರ್ದೇಶಕ ಎಂ.ಡಿ.ನಿಂಗನಗೌಡ, ಶಿರಸಾಚಾರಿ, ಬಳಿಗನೂರು ಯೋಗೀಶಗೌಡ, ಪರಶುರಾಮ, ವಿಜಯಕುಮಾರ್, ಗೌರಿಪುರ ನಾರನಗೌಡ, ದುರುಗಪ್ಪ, ಕೆಸರಹಳ್ಳಿ ಬಿ.ನಾಗರಾಜ್, ಜಿ.ಪಿ.ಎಂ. ನಾಗರಾಜ್, ಕೆಂಚಪ್ಪ, ಗಜಾಪುರ ಅಂಜಿನಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ