ಹಚ್ಚೊಳ್ಳಿ ನವಗ್ರಾಮಕ್ಕೆ ಜಿಲ್ಲಾಧಿಕಾರಿ ಭೇಟಿ


Team Udayavani, Jul 31, 2021, 11:51 AM IST

ghgddaS

ಸಿರುಗುಪ್ಪ: ತಾಲೂಕಿನ ಹಚ್ಚೊಳ್ಳಿ ನವಗ್ರಾಮಕ್ಕೆ ಜಿಲ್ಲಾ ಧಿಕಾರಿ ಪವನ್‌ಕುಮಾರ ಮಾಲಪಾಟಿ ಭೇಟಿ ನೀಡಿ ನವಗ್ರಾಮದಲ್ಲಿ ನೆರೆ ಸಂತ್ರಸ್ಥರಿಗಾಗಿ ಕಟ್ಟಿರುವ ಆಸರೆ ಮನೆಗಳ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಗ್ರಾಮಸ್ಥರೊಂದಿಗೆ ಚರ್ಚಿಸಿದರು. ಜಿಲ್ಲಾಧಿ ಕಾರಿ ಮಾತನಾಡಿ, ಹಚ್ಚೊಳ್ಳಿ ನವಗ್ರಾಮದಲ್ಲಿ ನೆರೆ ಸಂತ್ರಸ್ಥರಿಗಾಗಿ ಕೋಟ್ಯಾಂತರ ರೂಗಳನ್ನು ವೆಚ್ಚಮಾಡಿ ಜಾಗ ಖರೀದಿಸಿ ಮನೆಗಳನ್ನು ಕಟ್ಟಲಾಗಿದೆ.

ಆದರೆ ನವಗ್ರಾಮದಲ್ಲಿ ಯಾರು ವಾಸ ಮಾಡುತ್ತಿಲ್ಲ. ಗ್ರಾಮಸ್ಥರಿಗೆ ನವಗ್ರಾಮಕ್ಕೆ ಬರಲು ಮನಸ್ಸಿಲ್ಲವೇ ಅಥವಾ ಬೇರೇನಾದರೂ ಸಮಸ್ಯೆಗಳಿವೆಯೇ ಎಂದು ಗ್ರಾಮಸ್ಥರನ್ನು ಪ್ರಶ್ನಿಸಿದರು. ಮಾಜಿ ತಾಪಂ ಉಪಾಧ್ಯಕ್ಷ ಶರಣಬಸವ ಮಾತನಾಡಿ, ನವಗ್ರಾಮದಲ್ಲಿ 10 ವರ್ಷಗಳ ಹಿಂದೆ ನಿರ್ಮಾಣವಾಗಿರುವ ಮನೆಗಳು ಯಾರು ವಾಸಮಾಡದ ಕಾರಣ ರಿಪೇರಿಗೆ ಬಂದಿವೆ.

ಈ ನವಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ವಿದ್ಯುತ್‌ ಪೂರೈಕೆ ಸಮರ್ಪಕವಾಗಿ ಮಾಡದ ಕಾರಣ ನಮ್ಮ ಗ್ರಾಮದ ಜನರು ನವಗ್ರಾಮಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಈಗ ಮನೆಗಳನ್ನು ರಿಪೇರಿ ಮಾಡಿಸಿ ಮೂಲಸೌಕರ್ಯಗಳನ್ನು ಒದಗಿಸಿದರೆ ಜನರು ಬರುತ್ತಾರೆ.

ಆದರೆ ನೀವು ಸೇರಿದಂತೆ ನಾಲ್ಕು ಜನ ಜಿಲ್ಲಾ  ಧಿಕಾರಿಗಳು ನವಗ್ರಾಮಕ್ಕೆ ಭೇಟಿನೀಡಿ ಹೋಗಿದ್ದು, ಇದರಿಂದ ಯಾವುದೇ ಪ್ರಯೋಜನವಾಗಿಲ್ಲ, ಇನ್ನಾದರೂ ನವಗ್ರಾಮದಲ್ಲಿರುವ ಮನೆಗಳನ್ನು ದುರಸ್ತಿಮಾಡಿಸಿ ಮೂಲಸೌಕರ್ಯಗಳನ್ನು ಒದಗಿಸಿದರೆ ತಕ್ಷಣವೇ ಗ್ರಾಮಸ್ಥರು ನವಗ್ರಾಮಕ್ಕೆ ಬಂದು ವಾಸಿಸುತ್ತಾರೆ ಎಂದು ತಿಳಿಸಿದರು. ಜಿಲ್ಲಾ ಧಿಕಾರಿ ಮಾತನಾಡಿ, ನಿಮ್ಮ ಗ್ರಾಮದಲ್ಲಿ ಜನರು ಮಾಸ್ಕ್ ಧರಿಸುವುದಿಲ್ಲವೆ. ನೀವು ಕೂಡ ಮಾಸ್ಕ್ ಧರಿಸಿಲ್ಲ.

ನಿಮಗೆ ದಂಡ ವಿಧಿಸಬೇಕಾಗುತ್ತದೆಂದು ಜಿಲ್ಲಾಧಿ  ಕಾರಿಗಳು ಮಾಸ್ಕ್ ಧರಿಸದೇ ಬಂದಿದ್ದ ತಾಪಂ ಮಾಜಿ ಉಪಾಧ್ಯಕ್ಷರಿಗೆ ಪ್ರಶ್ನಿಸಿದರು. ನಾನು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೆ, ನೀವು ಬಂದಿದ್ದೀರೆಂದು ತಿಳಿದು ಇಲ್ಲಿಗೆ ಬಂದಿದ್ದೇನೆ, ನೀವು ಬರುವ ಸುದ್ದಿಯು ನಮಗೆ ಮೊದಲೇ ಗೊತ್ತಾಗಿದ್ದರೆ ನಮ್ಮ ಗ್ರಾಮಸ್ಥರನ್ನು ಕರೆದುಕೊಂಡು ಬರುತ್ತಿದ್ದೆ. ಕೃಷಿ ಕೆಲಸ ಮಾಡುತ್ತಿದ್ದರಿಂದ ನಾನು ಮಾಸ್ಕ್ ಧರಿಸಿರಲಿಲ್ಲವೆಂದು ಮಾಜಿ ಉಪಾಧ್ಯಕ್ಷರು ತಿಳಿಸಿದರು.

ನಮ್ಮ ನವಗ್ರಾಮದಲ್ಲಿ ಮೂಲಸೌಕರ್ಯ ಗಳಲ್ಲಿ ಒಂದಾದ ಕುಡಿಯುವ ನೀರಿನ ಕೆರೆಗೆ ಕಾಲುವೆಯಿಂದ ನೀರು ಹರಿಸಲು ಸಾಧ್ಯವಾಗುತ್ತದೆ ಎಂದು ಗ್ರಾಮಸ್ಥ ಗಂಗಾರಾಂ ಸಿಂಗ್‌ ಜಿಲ್ಲಾಧಿ ಕಾರಿಗಳಿಗೆ ತಿಳಿಸಿದರು. ಸಹಾಯಕ ಆಯುಕ್ತ ಆಕಾಶ್‌, ತಹಶೀಲ್ದಾರ್‌ ಮಂಜುನಾಥ, ಕಂದಾಯ ನಿರೀಕ್ಷಕ ಬಸವರಾಜ್‌, ಎ.ಇ.ಇ. ವೀರೇಶನಾಯ್ಕ, ಗ್ರಾಮಲೆಕ್ಕಾ ಧಿಕಾರಿ ಮಲ್ಲಪ್ಪ ಗುಡಿಹಿಂದಲ ಇದ್ದರು.

 

 

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.