ಆಮಿಷಗಳಿಗೆ ಬಲಿಯಾಗಬೇಡಿ
Team Udayavani, May 4, 2018, 12:08 PM IST
ಸಂಡೂರು: “ಓಟು ಹಾಕಿ ನೋಟು ಬೇಡ, ನೋಟಿಗಾಗಿ ಓಟಲ್ಲ, ಕರ್ತವ್ಯಕ್ಕಾಗಿ ಓಟು’ ಎಂಬ ಘೋಷಣೆಯನ್ನು ನಾವು
ಅಳವಡಿಸಿಕೊಳ್ಳಬೇಕೆಂದು ಎಂದು ಡಾನ್ ಬಾಸ್ಕೋ ಸಂಸ್ಥೆಯ ಹಗರಿಬೊಮ್ಮನಹಳ್ಳಿಯ ಸಂಯೋಜಕ ನಾಗರಾಜ್ ಕರೆ ನೀಡಿದರು.
ತಾಲೂಕಿನ ಜೈಸಿಂಗ್ಪುರ ಗ್ರಾಮದಲ್ಲಿ ಡಾನ್ಬಾಸ್ಕೋ ತಾಲೂಕು ವಿಭಾಗದ ವತಿಯಿಂದ ಆಯೋಜಿಸಿದ್ದ ಮತದಾನ
ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ನಾವೆಲ್ಲರೂ ಸಹ ಮತ ಹಾಕುವುದು ಹಣಕ್ಕಾಗಿಯೇ ಎನ್ನುವ
ಭಾವನೆ ಬರುವಂತೆ ರಾಜಕಾರಣಿಗಳು ತೋರಿಸುವ ಆಮಿಷಗಳಿಗೆ ಬಲಿಯಾಗಿ ನಮ್ಮ ಮನಸ್ಥಿತಿಯನ್ನು ಬದಲಿಸಿಕೊಂಡಿದ್ದೇವೆ.
ಆದರೆ ಸಂವಿಧಾನ ಬದ್ಧವಾಗಿ ನಮಗೆ ಮತದಾನದ ಹಕ್ಕು ಹೊಂದಿದ್ದೇವೆ. ಇದು ಬರೀ ಹಕ್ಕಲ್ಲ. ನಮ್ಮ ಕರ್ತವ್ಯವಾಗಿದೆ.
ಆದ್ದರಿಂದ ಪ್ರತಿಯೊಬ್ಬರೂ ಸಹ ನಮ್ಮ ಹಕ್ಕನ್ನು ನಿರ್ಭಿತಿಯಿಂದ ಚಲಾಯಿಸಬೇಕಾದರೆ “ಓಟು ಬೇಕು, ನೋಟು ಬೇಡ’ ಎನ್ನುವ ಅಂಶಗಳನ್ನು ಅಳವಡಿಸಿಕೊಂಡು ನಮ್ಮ ಸಂವಿಧಾನ ಬದ್ಧ ಕರ್ತವ್ಯವನ್ನು ನಿಭಾಯಿಸೋಣ ಎಂದರು.
ತಾಲೂಕು ಡಾನ್ಬಾಸ್ಕೋ ಸಂಸ್ಥೆಯ ಸಂಯೋಜಕಿ ರೇಣುಕಮ್ಮ ಮಾತನಾಡಿ, ಮಹಿಳೆಯರಿಗೆ ಬಂಗಾರ, ಸೀರೆಗಳ ಆಮಿಷ ಒಡ್ಡಲಾಗುತ್ತದೆ. ಈ ಕ್ಷಣಿಕ ಆಮಿಷಗಳಿಗೆ ಬಲಿಯಾಗದೆ, ಶಾಶ್ವತವಾಗಿ ಸಂವಿಧಾನ ನೀಡಿರುವಂತಹ ಹಕ್ಕನ್ನು ಕಳೆದುಕೊಳ್ಳಬೇಡಿ, ಮಾರಬೇಡಿ ಎನ್ನುವ ಸೂತ್ರ ನಮ್ಮದಾಗಬೇಕು. ಆದ್ದರಿಂದ ಪ್ರತಿಯೊಬ್ಬರೂ ಸಹ ಸ್ವತಂತ್ರ್ಯವಾಗಿ ಮತದಾನ ಮಾಡಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಕಿ ಪೂಜಾ, ಗ್ರಾಮದ ಗಣ್ಯರು, ಡಾನ್ಬಾಸ್ಕೋ ಸಂಸ್ಥೆಯ ಸಿಬ್ಬಂದಿಗಳು, ಮಕ್ಕಳು, ಸ್ವ ಸಹಾಯ ಸಂಘದ ಸದಸ್ಯರು ಮತದಾನ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ