ಡಾ| ಸುಭದ್ರಮ್ಮ ಅನುಪಮ ಅಭಿನೇತ್ರಿ


Team Udayavani, May 29, 2018, 12:15 PM IST

bell-2.jpg

ಬಳ್ಳಾರಿ: ಸುಮಧುರ ಕಂಠಸಿರಿಯಿಂದ ಗ್ರಾಮೀಣ ಪ್ರದೇಶಗಳ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಅನುಪಮ ಅಭಿನೇತ್ರಿ ನಾಡೋಜ ಡಾ. ಸುಭದ್ರಮ್ಮ ಮನ್ಸೂರ್‌ ಅವರು, ಖ್ಯಾತ ಗಾಯಕರಾದ ಲತಾ ಮಂಗೇಶ್ಕರ್‌, ಆಶಾ ಭೋಂಸ್ಲೆ ಅವರಿಗೆ ಸರಿ ಸಮಾನರು ಎಂದು ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್‌ ಅಭಿಪ್ರಾಯಪಟ್ಟರು.

ನಗರದ ರಾಘವ ಕಲಾಮಂದಿರದಲ್ಲಿ ಗಾನಕೋಗಿಲೆ, ಅನುಪಮ ಅಭಿನೇತ್ರಿ ಸುಭದ್ರಮ್ಮ ಮನ್ಸೂರು ಅವರು 80ರ ವಸಂತಕ್ಕೆ ಕಾಲಿಟ್ಟ ಸಂದರ್ಭದಲ್ಲಿ ನಾಗರಿಕ ಅಭಿನಂದನಾ ಸಮಿತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಅಮೃತಾಭಿನಂದನೆ ಕಾರ್ಯಕ್ರಮದಲ್ಲಿ ಸುಭದ್ರಮ್ಮರ ಕುರಿತು ಅವರು ಗುಣಗಾನ ಮಾಡಿದರು.

ಗ್ರಾಮೀಣ ಪ್ರದೇಶದ ಅತ್ಯಂತ ಬೇಡಿಕೆಯ ಕಲಾವಿದೆಯಾಗಿದ್ದ ಸುಭದ್ರಮ್ಮ ಮನ್ಸೂರ್‌ ಅವರು, ಅಪ್ರತಿಮ ಗಾಯಕಿಯೂ ಆಗಿದ್ದರು. ಆದರೆ ಅವರಿಗೆ ದೊರೆಯಬೇಕಾದ ಮನ್ನಣೆ ದೊರೆಯಲಿಲ್ಲ. ವೃತ್ತಿ ರಂಗಭೂಮಿಯ ಹಿರಿಯ ಕಲಾವಿದರ ಕುರಿತು ನಮ್ಮ ಬಳಿ ಸಾಕಷ್ಟು ದಾಖಲೆಗಳಿಲ್ಲ. ಇದು ನಿಜಕ್ಕೂ ವಿಷಾದನೀಯ. ನಮ್ಮ ಗ್ರಾಮೀಣ ಹಿನ್ನೆಲೆಯ ಕಲಾವಿದರು ಪ್ರಚಾರಕ್ಕೆ ಬಾರದ ಪ್ರತಿಭೆಗಳು ಎಂದರು.

ಸಾಕಷ್ಟು ವೃತ್ತಿ ರಂಗಭೂಮಿಯ ಕಲಾವಿದರು ನಿರ್ಲಕ್ಷಿತ ಕಲಾವಿದರು. ನಮ್ಮ ಪತ್ರಿಕಾ ಮಾಧ್ಯಮಗಳು ಇಂತಹ ಮಹಾನ್‌ ಕಲಾವಿದರ ಕುರಿತು ಲೇಖನಗಳನ್ನು ಪ್ರಕಟಿಸಿಲ್ಲ. ಇದೊಂದು ನ್ಯೂನತೆ. ಸುಭದ್ರಮ್ಮನವರ ಸಾಧನೆಯ ಹಿಂದೆ ಸುದೀರ್ಘ‌ ತಪಸ್ಸಿದೆ. ಕಲಿಯುವ ತುಡಿತವಿದೆ. ಅವರು, ಸಾಕಷ್ಟು ಘನತೆ, ಗಾಂಭೀರ್ಯದಿಂದ ಜೀವಿಸಿದ್ದಾರೆ. ಅವರ ನಡೆ-ನುಡಿಗಳು ರಂಗಭೂಮಿಯ ಇತರ ನಟಿಯರಿಗೆ ಅನುಕರಣೀಯವಾಗಿದ್ದವು. ಚಂದ್ರಶೇಖರ ಗವಾಯಿಗಳ ಬಳಿ ತಡವಾಗಿಯಾದರೂ ಶಾಸ್ತ್ರೀಯ ಸಂಗೀತವನ್ನು ಕಲಿತು, ರಂಗಭೂಮಿಯಲ್ಲಿ ಮೇರು ವ್ಯಕ್ತಿತ್ವದ ವೃತ್ತಿ ಕಲಾವಿದೆಯಾಗಿ ಮೆರೆದರು ಎಂದರು.

ಹಿರಿಯ ಪತ್ರಕರ್ತೆ ಡಾ| ಆರ್‌.ಪೂರ್ಣಿಮಾ ಮಾತನಾಡಿ, ಡಾ| ಸುಭದ್ರಮ್ಮನವರು ಸಾಂಸ್ಕೃತಿಕ ಲೋಕದ ಐಕಾನ್‌ ಆಗಿದ್ದಾರೆ. ಅವರು ವೃತ್ತಿ ರಂಗಭೂಮಿ ನಟಿಯಾಗಿ 21 ಕಂಪನಿಗಳಲ್ಲಿ ಆಹ್ವಾನದ ಮೇರೆಗೆ ನಾಟಕಗಳಲ್ಲಿ ಅಭಿನಯಿಸಿ ಕಲಾ ರಸಿಕರ ಮಾನಸದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಬಣ್ಣಿಸಿದರು. 

ಮಹಿಳಾ ಸಾಧಕಿಯರನ್ನು ದಾಖಲೀಕರಿಸುವ ಪ್ರಯತ್ನ ಅತ್ಯಂತ ಕಡಿಮೆಯಿದ್ದು, ಅದು ವ್ಯವಸ್ಥಿತವಾಗಿ ನಡೆಯಬೇಕಿದೆ. ತಂತ್ರಜ್ಞಾನ ಯುಗದಲ್ಲಿರುವ ನಾವು, ಸುಭದ್ರಮ್ಮ ಅವರ ನಾಟಕಗಳ ದೃಶ್ಯ, ಗೀತ ಗಾಯನಗಳನ್ನು ಧ್ವನಿ ಮುದ್ರಿಸಿ ಚಿತ್ರೀಕರಣ ಮಾಡಬಹುದಾಗಿತ್ತು. ಅದು ಆಗಲಿಲ್ಲ. ಆದರೆ, ಈ ನಿಟ್ಟಿನಲ್ಲಿ ಸುಭದ್ರಮ್ಮನವರ ಧ್ವನಿಯಲ್ಲಿ ರಂಗ ಗೀತೆಗಳನ್ನು ದಾಖಲಿಸಿರುವುದು ಶ್ಲಾಘನೀಯ ಎಂದರು.

ನಾಗರಿಕ ಸನ್ಮಾನ ಸ್ವೀಕರಿಸುವ ಮುನ್ನ ಸುಭದ್ರಮ್ಮ ಮನ್ಸೂರು ಮಾತನಾಡಿ, ಗ್ರಾಮೀಣ ಕ್ಷೇತ್ರದ ಪ್ರೇಕ್ಷಕರಿಂದ ನಾನು ಗುರುತಿಸಿಕೊಂಡು ಇಷ್ಟು ಬೆಳೆಯುವಂತಾಯಿತು. ನನ್ನ ಜೀವನದ ಸಾಧನೆಯಲ್ಲಿ ಅನೇಕ ಮಹನೀಯರ ಕಾಣಿಕೆ ಇದೆ ಎಂದರು. 

ಸಮಿತಿಯ ಗೌರವಾಧ್ಯಕ್ಷ ಬಿ.ಸಿದ್ಧನಗೌಡ ಅಧ್ಯಕ್ಷತೆ ವಹಿಸಿದ್ದರು. ಕೊನೆಯಲ್ಲಿ ಸುಭದ್ರಮ್ಮ ಮನ್ಸೂರು ಅವರನ್ನು ಸನ್ಮಾನಿಸಲಾಯಿತು. ಕಲ್ಯಾಣಿ ಪ್ರಾರ್ಥಿಸಿದರು. ಕಪ್ಪಗಲ್ಲು ಪ್ರಭುದೇವ ಪ್ರಾಸ್ತಾವಿಕ ಮಾತನಾಡಿದರು. ಅಡವಿ ಸ್ವಾಮಿ ನಿರ್ವಹಿಸಿದರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.