ಆರೋಗ್ಯ ಕ್ಷೇತ್ರಕ್ಕೆ ವಿಮ್ಸ್‌ ಕೊಡುಗೆ ಅಪಾರ : ಸಚಿವ ಡಾ| ಸುಧಾಕರ್‌


Team Udayavani, Mar 31, 2021, 8:31 PM IST

eytyutgyugh

ಬಳ್ಳಾರಿ: ಬ್ರಿಟಿಷರ ಕಾಲದಲ್ಲಿ ಸೆರೆಮನೆಯಾಗಿದ್ದ ವಿಮ್ಸ್‌ (ಕಟ್ಟಡಗಳು) ರಾಜ್ಯ ಸೇರಿ ನೆರೆಯ ಆಂಧ್ರದ ಜನರಿಗೂ ಆರೋಗ್ಯ ಸೇವೆ ನೀಡುವಲ್ಲಿ ತನ್ನದೇ ಆದ ಕೊಡುಗೆ ನೀಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ವಿಜ್ಞಾನ ಸಚಿವ ಡಾ. ಕೆ.ಸುಧಾಕರ್‌ ಹೇಳಿದರು.

ನಗರದ ವಿಮ್ಸ್‌ ಆವರಣದಲ್ಲಿ ವಿವಿಧ ಕಾಮಗಾರಿಗಳಿಗೆ ಮಂಗಳವಾರ ಆನ್‌ ಲೈನ್‌ ಮೂಲಕ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. 173 ಎಕರೆ ಜಾಗವನ್ನು ಮೀಸಲಿಟ್ಟಿದ್ದ ಬ್ರಿಟಿಷರು ಇಲ್ಲಿ ಸೆರೆಮನೆಯನ್ನು ನಿರ್ಮಿಸಿದ್ದು, ಪ್ರಮುಖರಾದ ವಿ.ವಿ. ಗಿರಿ, ರಾಜಾಜಿ, ನೀಲಂ ಸಂಜೀವರೆಡ್ಡಿ ಸೇರಿ ಹಲವರನ್ನು ಈ ಸೆರೆಮನೆಯಲ್ಲಿ ಇರಿಸಿದ್ದು ಇತಿಹಾಸದಲ್ಲಿ ದಾಖಲಾಗಿದೆ. 173 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಿರುವ ವಿಮ್ಸ್‌ ಸಂಸ್ಥೆ ಆರೋಗ್ಯ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿದೆ.

ಕೇವಲ ರಾಜ್ಯದ ಜನರಿಗೆ ಮಾತ್ರವಲ್ಲದೆ, ನೆರೆಯ ಆಂಧ್ರ, ತೆಲಂಗಾಣ ರಾಜ್ಯಗಳ ಜನರಿಗೂ ಚಿಕಿತ್ಸೆ ನೀಡುವ ಸಂಜೀವಿನಿಯಾಗಿದೆ ಎಂದು ವಿವರಿಸಿದರು. ವಿಮ್ಸ್‌ ಸಂಸ್ಥೆಯನ್ನು ಏಮ್ಸ್‌ ಮಾದರಿಯನ್ನಾಗಿ ಪರಿವರ್ತಿಸಲು ಹಾಗೂ ಎಂಬಿಬಿಎಸ್‌ ವಿದ್ಯಾರ್ಥಿಗಳ ಪ್ರವೇಶಾತಿಯನ್ನು 150ರಿಂದ 250ಕ್ಕೆ ಹೆಚ್ಚಿಸಿ ಉನ್ನತೀಕರಣಕ್ಕಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ.

ಈ ಪ್ರಸ್ತಾವನೆಗೆ ಸರ್ಕಾರ ಸ್ಪಂದಿಸಿ ವಿಮ್ಸ್‌ ಸಂಸ್ಥೆಗೆ ಅವಶ್ಯವಿರುವ ಮೂಲಸೌಕರ್ಯಗಳನ್ನು ಒದಗಿಸಲು ಕಟ್ಟಡ ಕಾಮಗಾರಿಗಳು ಮತ್ತು ಉಪಕರಣಗಳನ್ನು ಅಳವಡಿಸಲು ಅನುಮೋದನೆ ನೀಡಲಾಗಿದೆ ಎಂದರು. ಪ್ರಸ್ತುತ ವಿಮ್ಸ್‌ ಸಂಸ್ಥೆಯ ಅ ಧೀನದಲ್ಲಿರುವ ಆಸ್ಪತ್ರೆಗೆ ಪ್ರತಿದಿನ 2 ಸಾವಿರ ಹೊರರೋಗಿಗಳು ಮತ್ತು 500ರಿಂದ 800ರವರೆಗೆ ಒಳರೋಗಿಗಳಾಗಿ ಚಿಕಿತ್ಸೆಗೆ ಬರುತ್ತಿರುತ್ತಾರೆ ಹಾಗೂ ಎಂಬಿಬಿಎಸ್‌ 150, ಬಿಡಿಎಸ್‌-50, ಪಿಜಿ-120, ಸೂಪರ್‌ ಸ್ಪೆಶಾಲಿಟಿ-5, ಪ್ಯಾರಾಮೆಡಿಕಲ್‌-150, ಬಿಎಸ್‌ಸಿ ನರ್ಸಿಂಗ್‌-100+30 ವಿದ್ಯಾರ್ಥಿಗಳ ಪ್ರವೇಶಾತಿ ಸಾಮರ್ಥ್ಯ ಹೊಂದಿದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರು ವಿಮ್ಸ್‌ನ ಪ್ರಗತಿ ಪರಿಶೀಲನೆ ಸದಾ ನಡೆಸಲಿ ಎಂದ ಸಚಿವ ಡಾ| ಸುಧಾಕರ್‌, ಸ್ವಾಯತ್ತ ಸಂಸ್ಥೆಯಾಗಿರುವ  ವಿಮ್ಸ್ ನಲ್ಲಿ ಇದುವರೆಗೆ ಜಿಲ್ಲಾಧಿಕಾರಿಗಳು ಪ್ರಗತಿ ಪರಿಶೀಲನೆ ನಡೆಸುತ್ತಿರಲಿಲ್ಲ. ಅವರನ್ನು ಸಹ ಕೋ-ಚೇರ್ಮನ್‌ ಆಗಿ ಆದೇಶಿಸಲಾಗಿದ್ದು, ಅವರು ಸಹ ಇನ್ನುಮುಂದೆ ಪ್ರಗತಿ ಪರಿಶೀಲಿಸಲಿದ್ದಾರೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್‌ ಮಾತನಾಡಿ, ವಿಮ್ಸ್‌ನಲ್ಲಿ ಅಪರೇಶನ್‌ ಥಿಯಟೇರ್‌ಗೆ ಅವಶ್ಯಕತೆ ಇರುವುದರಿಂದ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಕ್ಯಾಬಿನೆಟ್‌ನಲ್ಲಿ ಅನುಮೋದನೆ ದೊರಕಿದೆ. ಇದಕ್ಕೆ ವಿಶೇಷ ಜವಾಬ್ದಾರಿ ವಹಿಸಿ ಮಾಡುವಂತೆ ಅವರು ಸಚಿವ ಡಾ| ಸುಧಾಕರ್‌ ಅವರಲ್ಲಿ ಇದೇವೇಳೆ ಕೇಳಿಕೊಂಡರು. ಹರಪನಳ್ಳಿ ಶಾಸಕ ಕರುಣಾಕರರೆಡ್ಡಿ ಮಾತನಾಡಿದರು. ವಿಮ್ಸ್‌ ನಿರ್ದೇಶಕ ಡಾ| ಗಂಗಾಧರಗೌಡ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ ಕೆ.ಸಿ.ಕೊಂಡಯ್ಯ, ಅಲ್ಲಂ ವೀರಭದ್ರಪ್ಪ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್‌.ಹನುಮಂತಪ್ಪ, ಬಳ್ಳಾರಿ ಜಿಲ್ಲಾ ಧಿಕಾರಿ ಪವನ್‌ ಕುಮಾರ್‌ ಮಾಲಪಾಟಿ, ಅಪರ ಜಿಲ್ಲಾಧಿ ಕಾರಿ ಪಿ.ಎಸ್‌. ಮಂಜುನಾಥ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.