ಬೃಹತ್ ‌ಮೆಗಾ ಇ-ಲೋಕ ಅದಾಲತ್‌


Team Udayavani, Dec 22, 2020, 6:22 PM IST

Ballary-tdy-1

ಬಳ್ಳಾರಿ: ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಹೈಕೋರ್ಟ್‌ ನಿರ್ದೇಶನದ ಮೇರೆಗೆಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಮೂಲಕ ಬಗೆಹರಿಸಿಕೊಳ್ಳಬಹುದಾದ ಹಾಗೂ ವ್ಯಾಜ್ಯಪೂರ್ವ ದಾವಾ ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಗೊಳಿಸುವ ಬೃಹತ್‌ ಮೆಗಾ ಇ-ಲೋಕ ಅದಾಲತ್‌ ನಡೆಯಿತು.

ಕೋವಿಡ್‌ನ‌ ಈ ಕಾಲಘಟ್ಟದಲ್ಲಿ ನಡೆಯುತ್ತಿರುವ 2ನೇ ಬೃಹತ್‌ ಮೆಗಾ ಇ-ಲೋಕ ಅದಾಲತ್‌ ಇದಾಗಿದೆ. ಈ ಮೆಗಾ ಅದಾಲತ್‌ ಕಾರ್ಯಕ್ರಮದಲ್ಲಿಬ್ಯಾಂಕ್‌ ರಿಕವರಿ, ಕಾರ್ಮಿಕ ವಿವಾದಗಳು, ಎಲೆಕ್ಟ್ರಿಸಿಟಿ ಮತ್ತು ಕುಡಿಯುವ ನೀರಿನ,ವೈವಾಹಿಕ, ಕಂದಾಯ ಪ್ರಕರಣಗಳು, ಭೂಮಿ ವಿವಾದ, ಮೋಟಾರ್‌ ಅಪಘಾತ, ಚೆಕ್‌ಬೌನ್ಸ್‌, ರಾಜಿಯಾಗಬಹುದಾದ ಐಪಿಸಿ ಪ್ರಕರಣಗಳು, ಸಿವಿಲ್‌ ವ್ಯಾಜ್ಯಗಳು ಸೇರಿದಂತೆವಿವಿಧ ರೀತಿಯ ರಾಜಿಯಾಗಬಹುದಾದ10358 ಪ್ರಕರಣಗಳು ಅದಾಲತ್‌ಗೆ ನೋಂದಣಿಯಾಗಿದ್ದವು.

ಜಿಲ್ಲಾ ನ್ಯಾಯಾಲಯದಪ್ರವೇಶದ್ವಾರದಲ್ಲಿ ನಾಲ್ಕು ಕಡೆ ಕೋವಿಡ್‌ ತಪಾಸಣಾ ಕೇಂದ್ರಗಳನ್ನು ತೆರೆದು ವ್ಯಾಜ್ಯಗಳರಾಜಿಗೆ ಆಗಮಿಸಿದ್ದ ಕಕ್ಷಿದಾರರಿಗೆ ಆರ್‌ಟಿಪಿಸಿಆರ್‌ ಮೂಲಕ ತಪಾಸಣೆ ನಡೆಸಿ 15 ನಿಮಿಷಗಳಲ್ಲಿ ವರದಿ ಬರುವ ವ್ಯವಸ್ಥೆಮಾಡಲಾಗಿತ್ತು. ವರದಿ ಪ್ರಮಾಣಪತ್ರ ಪಡೆದುಕೊಂಡ ನಂತರ ಕಕ್ಷಿದಾರರಿಗೆ ಆಯಾ ಸಂಬಂಧಿಸಿದ ಪೀಠಗಳ ಎದುರಿಗೆ ಕಳುಹಿಸಿಕೊಡಲಾಯಿತು.

ಜಿಲ್ಲೆಯಾದ್ಯಂತ ಜಿಲ್ಲಾ ನ್ಯಾಯಾಲಯದ, ತಾಲೂಕು ನ್ಯಾಯಾಲಯ ಸೇರಿದಂತೆ 28 ಪೀಠಗಳಲ್ಲಿ ಈ ಲೋಕ ಅದಾಲತ್‌ಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವ್ಯವಸ್ಥೆ ಮಾಡಿದೆ ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರ್ಜುನ್‌ ಮಲ್ಲೂರು ತಿಳಿಸಿದರು. ಈ ಲೋಕ ಅದಾಲತ್‌ನಲ್ಲಿ ಇಬ್ಬರ ಒಪ್ಪಿಗೆಯಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದ ತೀರ್ಮಾನವಾಗುತ್ತದೆ.ಸಂಧಾನಕಾರರು ಸೂಚಿಸುವ ಪರಿಹಾರ ನಿಮಗೆ ತೃಪ್ತಿಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದಾಗಿರುತ್ತದೆ ಎಂದು ಅವರು ತಿಳಿಸಿದರು.

ಈ ಅದಾಲತ್‌ನಲ್ಲಿ ಕಕ್ಷಿದಾರರು ಕೆಲವರು ವಕೀಲರ ಮುಖಾಂತರ ಹಾಗೂ ಇನ್ನೂ ಕೆಲವರು ತಾವೇ ನೇರವಾಗಿ ಭಾಗವಹಿಸಿ ರಾಜಿ ಮಾಡಿಕೊಂಡಿದ್ದು ಕಂಡುಬಂದಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧಿಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಪುಷ್ಪಾಂಜಲಿದೇವಿ, ನ್ಯಾಯಾಧೀಶ ಕಾಸಿಂಚೂರಿ ಖಾನ್‌ ಸೇರಿದಂತೆ ಇನ್ನಿತರೆ ನ್ಯಾಯಾಧಿಧೀಶರು, ಜಿಲ್ಲಾ ನ್ಯಾಯಾಲಯದ ವ್ಯವಸ್ಥಾಪಕ ಈರೇಶ ಅಂಗಡಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.