ಅಂಗನವಾಡಿ ಕೇಂದ್ರದಲ್ಲಿ ಎಸ್ಸಿ, ಎಸ್ಟಿ ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಿತರಣೆ
Team Udayavani, Jan 22, 2022, 12:22 PM IST
ಕುರುಗೋಡು: ಮಕ್ಕಳಲ್ಲಿ ಹೆಚ್ಚುತ್ತಿರುವ ಅಪೌಷ್ಠಿಕತೆಯನ್ನು ನಿವಾರಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲಿ ಮೊಟ್ಟೆ ವಿತರಿಸಲು ಮುಂದಾಗಿದೆ ಆದ್ದರಿಂದ 6 ತಿಂಗಳಿಂದ 3 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಂಗನವಾಡಿ ಮಕ್ಕಳಿಗೆ ಎರಡು ತಿಂಗಳದ ತಲಾ ಒಬ್ಬ ಮಕ್ಕಳಿಗೆ 24 ಮೊಟ್ಟೆ ಗಳನ್ನು ಸಮೀಪದ ರಾಮಚಂದ್ರಪುರ ಕ್ಯಾಂಪ್ 15ನೇ ಅಂಗನವಾಡಿ ಕೇಂದ್ರದಲ್ಲಿ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಅಂಬಮ್ಮ ಮಾತನಾಡಿ, ಮಕ್ಕಳಲ್ಲಿ ಅಪೌಷ್ಠಿಕತೆ ಹೆಚ್ಚಾಗುತ್ತಿದೆ. ಮಕ್ಕಳ ಬೆಳವಣಿಗೆ ನಿರೀಕ್ಷಿತ ಪ್ರಮಾಣದಲ್ಲಿ ಆಗುತ್ತಿಲ್ಲ. ಅಂಗವೈಕಲ್ಯತೆ, ಉಸಿರಾಟದ ತೊಂದರೆ, ಉಬ್ಬಸ, ಹೃದಯ ಸಂಬಂಧಿಕಾಯಿಲೆಗಳು ಬರುತ್ತಿರುವುದರಿಂದ ಮೊ ಟ್ಟೆ ನೀಡುವಂತೆ ಸಲಹೆ ನೀಡಲಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಅಂಗನವಾಡಿಗಳಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಮಕ್ಕಳಿಗೆ ಮೊಟ್ಟೆ ವಿತರಿಸಲು ಮುಂದಾಗಿದೆ ಎಂದರು.
ಅಲ್ಲದೆ ಸರ್ಕಾರವು ಅಂಗನವಾಡಿ ಕೇಂದ್ರಗಳ ಮೂಲಕ ಕೋಳಿಮೊಟ್ಟೆ ವಿತರಿಸುವ ಕಾರ್ಯ ಹಲವೆಡೆ ಸ್ಥಗಿತಗೊಂಡಿತ್ತು. ಲಾಕ್ಡೌನ್ನಿಂದಾಗಿ ಬಡ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಅಪೌಷ್ಟಿಕತೆಗೆ ಈಡಾಗುವ ಆತಂಕವೂ ಎದುರಾಗಿತ್ತು. ಇದನ್ನು ಅರಿತ ಸರಕಾರ 2021 ಡಿಸಂಬರ್ ಮತ್ತು 2022 ಜನವರಿ ತಿಂಗಳ ಒಟ್ಟು 42 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಕ್ಕಳಿಗೆ ತಲಾ ಒಬ್ಬ ಮಕ್ಕಳಿಗೆ 24 ಮೊಟ್ಟೆ ವಿತರಣೆ ಮಾಡಲಾಗಿದೆ ಎಂದರು.
ಸರಕಾರ ನೀಡಿರುವ ಈ ಒಂದು ಯೋಜನೆ ಯಿಂದ ಕಡಿಮೆ ತೂಕದ ಮಕ್ಕಳ ಜನನ ಪ್ರಮಾಣ ತಗ್ಗಿಸುವುದು, 6 ವರ್ಷದೊಳಗಿನ ಮಕ್ಕಳಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಮಟ್ಟ ಹೆಚ್ಚಿಸುವುದು, ಗರ್ಭಿಣಿಯರು, ಬಾಣಂತಿಯರಲ್ಲಿ ಅಪೌಷ್ಟಿಕತೆ ನಿರ್ಮೂಲನೆ ಮಾಡುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅಂಗನವಾಡಿ ಕೇಂದ್ರಗಳ ಮೂಲಕ ಮೊಟ್ಟೆ, ಹಾಲಿನ ಪುಡಿ ಮೊದಲಾದ ಆಹಾರ ವಿತರಿಸಲಾಗುತ್ತಿದೆ ಎಂದು ಹೇಳಿದರು.
ಆದರೆ, 2 ತಿಂಗಳುಗಳಿಂದ ಹಲವೆಡೆ ಮಕ್ಕಳಿಗೆ ಮೊಟ್ಟೆ ನೀಡುವುದು ಸ್ಥಗಿತ ವಾಗಿತ್ತು, ಇದರಿಂದ ಬಡ ಕುಟುಂಬಗಳು ಕಷ್ಟದಲ್ಲಿ ಸಿಲುಕುವುದನ್ನು ಕಂಡ ಸರಕಾರ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವ ಉದ್ದೇಶ ಕೈಗೊಂಡಿದೆ ಇದನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಾಲ ವಿಕಾಶ ಸಮಿತಿಯ ಹಿರಿಯ ಮುಖಂಡರಾದ ಎ. ಉಮಾ ಮಹೇಶ್ವರ್, ಗ್ರಾಪಂ ಸದಸ್ಯರಾದ ಲಲಿತಮ್ಮ ಜಡೆಪ್ಪ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ