ಬಿಸಿಲುನಾಡಲ್ಲಿ ಚುನಾವಣೆ ಬಿಸಿಯೇ ಇಲ್ಲ!


Team Udayavani, Apr 16, 2019, 3:40 PM IST

bell-1
ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿ ಲೋಕಸಭೆ ಕ್ಷೇತ್ರದ ಚುನಾವಣಾ ಖದರ್ರೆ ಬೇರೆ. ಸೋನಿಯಾಗಾಂಧಿ -ಸುಷ್ಮಾ ಸ್ವರಾಜ್‌ ಸ್ಪರ್ಧೆಯಿಂದಾಗಿ ಬಳ್ಳಾರಿ ಲೋಕಸಭೆ ಕ್ಷೇತ್ರ ರಾಷ್ಟ್ರದ ಗಮನ ಸೆಳೆದಿದ್ದರೆ, ರೆಡ್ಡಿ ಸಹೋದರರು ಪ್ರತಿನಿಧಿಸುವ ಬಳ್ಳಾರಿ ನಗರ ವಿಧಾನಸಭೆ ಕ್ಷೇತ್ರ ತನ್ನದೇ ಆದ ಖದರ್ರು ಹೊಂದಿದೆ.
ಕಳೆದ 2008ರಲ್ಲಿ ಕ್ಷೇತ್ರ ಮರು ವಿಂಗಡೆಯಿಂದಾಗಿ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರ ಹೊಸದಾಗಿ ರಚನೆಯಾಗಿದ್ದು, ಎರಡು ಬಾರಿ ಬಿಜೆಪಿಯ ಹಾಲಿ ಶಾಸಕ ಜಿ.ಸೋಮಶೇಖರರೆಡ್ಡಿ, ಕಾಂಗ್ರೆಸ್‌ನ ಮಾಜಿ ಶಾಸಕ ಅನಿಲ್‌ ಲಾಡ್‌ ಒಮೆ ಜಯಗಳಿಸಿದ್ದಾರೆ. ರೆಡ್ಡಿ ಸಹೋದರರು ಪ್ರತಿನಿಧಿ ಸುವ ಬಳ್ಳಾರಿ ನಗರ ಕ್ಷೇತ್ರ ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯದಲ್ಲೇ ಗಮನ ಸೆಳೆದಿದೆ. ಹಾಲಿ ಶಾಸಕ ಜಿ.ಸೋಮಶೇಖರರೆಡ್ಡಿ ಕ್ಷೇತ್ರದ ಕೆಲ ಬಡಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿ ವೈ.ದೇವೇಂದ್ರಪ್ಪ ಪರ ಈಗಾಗಲೇ ಪ್ರಚಾರದಲ್ಲಿ ತೊಡಗಿದ್ದಾರೆ. ಇತ್ತ ಮಾಜಿ ಶಾಸಕ ಅನಿಲ್‌ಲಾಡ್‌ ಸಹ ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌.ಉಗ್ರಪ್ಪ ಪರ ಮತಯಾಚನೆ ಮಾಡುತ್ತಿದ್ದು, ಗಣಿನಗರಿಯಲ್ಲಿ ಲೋಕಸಭೆ ಚುನಾವಣಾ ಖದರ್‌ ನಿಧಾನವಾಗಿ ರಂಗೇರುತ್ತಿದೆ.
ಸಮಸ್ಯೆಗಳ ಗಣಿ: ಅಕ್ರಮ ಗಣಿಗಾರಿಕೆಯಿಂದಾಗಿ ಗಣಿಗಾರಿಕೆಗೆ ಬ್ರೇಕ್‌ ಬಿದ್ದ ಹಿನ್ನೆಲೆಯಲ್ಲಿ ನಗರದಲ್ಲಿನ ಗಣಿ ಕಾರ್ಮಿಕರು ನಿರುದ್ಯೋಗ ಸಮಸ್ಯೆ ಎದುರಿಸುವಂತಾಗಿದ್ದು, ಪರ್ಯಾಯ ವ್ಯವಸ್ಥೆ ಇಲ್ಲವಾಗಿದೆ. ಈ ಕುರಿತು ಹಲವು ಜನಪ್ರತಿನಿಧಿಗಳು ಭರವಸೆ ನೀಡಿದ್ದಾರೆ ಹೊರತು, ಯಾವುದೇ ಪ್ರಯೋಜನವಾಗಿಲ್ಲ. ಇನ್ನು ತಾಲೂಕಿನ ಕುಡಿತಿನಿ ಬಳಿ ಕೈಗಾರಿಕೆ ಸ್ಥಾಪಿಸುವುದಾಗಿ ರೈತರಿಂದ ವಶಕ್ಕೆ ಪಡೆದ ಜಮೀನುಗಳಲ್ಲಿ ದಶಕ ಕಳೆದರೂ ಏನೂ ಸ್ಥಾಪನೆಯಾಗಿಲ್ಲ.
ಫಲಾನುಭವಿಗಳಿಗೆ, ಸ್ಥಳೀಯರಿಗೆ ಉದ್ಯೋಗ ದೊರೆತಿಲ್ಲ. ನಗರಕ್ಕೆ ಕುಡಿವ ನೀರು ಪೂರೈಸಲು ಎಚ್‌ಎಲ್‌ಸಿ, ಎಲ್‌ಎಲ್‌ಸಿ ಕಾಲುವೆ ಸಂಪರ್ಕವುಳ್ಳ ಎರಡು ಕೆರೆಗಳು ಇದ್ದರೂ, 10 ರಿಂದ 15 ದಿನಕ್ಕೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ದಿನದ 24 ಗಂಟೆ (24×7) ಕುಡಿವ ನೀರು ಯೋಜನೆಯೂ ಹಳ್ಳ ಹಿಡಿದಿದ್ದು, ಕ್ಷೇತ್ರದ ಪ್ರಜ್ಞಾವಂತ ನಾಗರಿಕರಲ್ಲಿ ಅಸಮಾಧಾನ ಮೂಡಿಸಿದೆ. ಈ ಹಿಂದಿನ ಜಿಲ್ಲೆಯ ಯಾವೊಬ್ಬ ಜನಪ್ರತಿನಿಧಿ ಗಳು ಸಹ ಈ ಬಗ್ಗೆ ಹೆಚ್ಚು ಗಮನ ಹರಿಸಿಲ್ಲ. ಹಾಲಿ ಸಂಸದ, ಕಾಂಗ್ರೆಸ್‌ ಅಭ್ಯರ್ಥಿ ವಿ.ಎಸ್‌. ಉಗ್ರಪ್ಪನವರು ಇತ್ತೀಚಿನ ದಿನಗಳಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಫಲಾನುಭವಿಗಳಿಗೆ ಭರವಸೆ ನೀಡಿದ್ದಾರೆ. ಆದರೆ, ಇದು ಚುನಾವಣಾ ಗಿಮಿಕ್ಕೋ ಅಥವಾ ಮುಂದೆಯೂ ಕ್ರಮ ಕೈಗೊಳ್ಳಲಿದ್ದಾರೆಯೇ? ಕಾದು ನೋಡಬೇಕು ಎನ್ನುತ್ತಾರೆ ರೈತರು.
ಚುನಾವಣೆ ಬಗ್ಗೆ ಸ್ಲಂ ಜನರಿಗಿಲ್ಲ ಮಾಹಿತಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾಗಿ ತಿಂಗಳು ಕಳೆದರೂ, ಕೆಲ ಪ್ರತಿಷ್ಠಿತ ಬಡಾವಣೆ ಹೊರತುಪಡಿಸಿ, ಸ್ಲಂ ಪ್ರದೇಶಗಳಲ್ಲಿರುವ ನಿವಾಸಿಗಳಿಗೆ ಚುನಾವಣೆ ನಡೆಯುತ್ತಿದೆ ಎಂಬ ಬಗ್ಗೆ ಅರಿವೆಯೇ ಇಲ್ಲ. ಯುವಕರು, ಮೊದಲ ಬಾರಿಗೆ ಹಕ್ಕು ಚಲಾಯಿಸುತ್ತಿರುವ ಮತದಾರರಲ್ಲಿ ಚುನಾವಣೆ ಬಗ್ಗೆ ಒಂದಷ್ಟು ಮಾಹಿತಿಯಿದೆ ಹೊರತು, ಇನ್ನುಳಿದ ಹಿರಿಯರಿಗೆ ಈ ಬಗ್ಗೆ ಮಾಹಿತಿಯಿಲ್ಲ. ರಾಜಕೀಯ ಪಕ್ಷಗಳ ಅಬ್ಬರದ ಕೊರತೆಯೂ ಇದಕ್ಕೆ ಕಾರಣವಾಗಿದ್ದು, ಚುನಾವಣೆ ಬಗ್ಗೆ ಜನರಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ರಾಜ್ಯ, ರಾಷ್ಟ್ರ ನಾಯಕರು ಆಗಮನ: ಲೋಕಸಭೆ ಚುನಾವಣೆ ನಿಮಿತ್ತ ಪ್ರಚಾರಕ್ಕೆಂದು ಕಾಂಗ್ರೆಸ್‌ನಿಂದ ಡಿ.ಕೆ.ಶಿವಕುಮಾರ್‌, ಬಿಜೆಪಿ ಪಕ್ಷದಿಂದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಆಗಮಿಸಿದ್ದು ಹೊರತುಪಡಿಸಿದರೆ, ಉಳಿದ ಯಾವುದೇ ರಾಜ್ಯ, ರಾಷ್ಟ್ರ ನಾಯಕರು ಈವರೆಗೂ ಆಗಮಿಸಿಲ್ಲ. ಏ.19ಕ್ಕೆ ಕಾಂಗ್ರೆಸ್‌ನ ಮಾಜಿ ಸಿಎಂ ಸಿದ್ದರಾಮಯ್ಯ, ಏ.21ಕ್ಕೆ ಬಿಜೆಪಿಯ ಸ್ಮೃತಿ ಇರಾನಿ ಆಗಮಿಸುವ ಸಾಧ್ಯತೆಯಿದೆ.
ಇನ್ನು ಚುನಾವಣೆ ನಡೆಯುತ್ತಿದ್ದರೂ, ಯುವಕರು, ಮೊದಲ ಬಾರಿ ಹಕ್ಕು ಚಲಾಯಿಸುತ್ತಿರುವ ಮತದಾರರು ಸರ್ಜಿಕಲ್‌ ಸ್ಟ್ರೈಕ್‌, ಬಾಲಾಕೋಟ್‌ ದಾಳಿ, ರಫೇಲ್‌ ಹಗರಣ ಬಗ್ಗೆ ಅರಿವಿದೆ. ಆದರೆ, ಹಿರಿಯ ಮತದಾರರು, ಕಾರ್ಮಿಕ ಮಹಿಳೆಯರು, ಕಾರ್ಮಿಕರಲ್ಲಿ ಈ ಬಗ್ಗೆ ಯಾವುದೇ ಮಾಹಿತಿಯಿಲ್ಲ. ಆದರೂ, ಜಿಲ್ಲೆಯ ಮತದಾರರು ಯಾರ ಭವಿಷ್ಯ ನಿರ್ಧರಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.