ನಿಸರ್ಗದಿಂದ ಮಾತ್ರ ತಾಪಮಾನ ನಿಯಂತ್ರಣ
Team Udayavani, Jun 8, 2020, 7:58 AM IST
ಕಂಪ್ಲಿ: ಜಾಗತಿಕ ತಾಪಮಾನ ತಡೆಗಟ್ಟಬೇಕಾದರೆ ಅದು ಪರಿಸರ ಸಂರಕ್ಷಣೆಯಿಂದ ಮಾತ್ರ ಸಾಧ್ಯ ಎಂದು ಬಳ್ಳಾರಿ ಜಿಲ್ಲಾ ಗ್ರಂಥಾಲಯದ ಸಹಾಯಕ ಗ್ರಂಥಪಾಲಕ ಕೆ.ಬಸವರಾಜ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ 22ನೇ ವಾರ್ಡ್ನ ಶಿರಡಿ ಸಾಯಿಬಾಬಾ ದೇವಸ್ಥಾನ ಬಳಿಯ ಸಿಂಧೋಳ್ ಕಾಲೋನಿಯ ಅಲೆಮಾರಿ ಗ್ರಂಥಾಲಯ ಆವರಣದಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹನಿಹನಿ ಕೂಡಿದರೆ ಹಳ್ಳ ಎಂಬಂತೆ ಪ್ರಕೃತಿಯನ್ನು ಉಳಿಸುವಲ್ಲಿ ನಾವು ಮಾಡುವ ಸಣ್ಣ-ಪುಟ್ಟ ಕಾರ್ಯವೇ ದೊಡ್ಡದಾಗಿ ಪರಿವರ್ತನೆಯಾಗಲಿದೆ ಎಂದರು.
ಅಲೆಮಾರಿ ಗ್ರಂಥಾಲಯದ ಮೇಲ್ವಿಚಾರಕ ಎಚ್.ಪಿ. ಶಿಕಾರಿರಾಮು ಮಾತನಾಡಿ, ಪರಿಸರದಿಂದ ಭೂಮಿ ಮೇಲೆ ಉತ್ತಮ ಮಳೆ, ಬೆಳೆ ಕಾಣಲು ಸಾಧ್ಯ. ಪ್ರತಿಯೊಬ್ಬರು ಮನೆಯ ಮುಂದೆ ಸಸಿಗಳನ್ನು ನೆಡುವ ಮೂಲಕ ಪರಿಸರ ಉಳಿಸಬೇಕಿದೆ ಎಂದರು.
ಎಸ್.ಟಿ. ಪ್ರಭಾಕರ, ಡಿ.ವಿರೇಶ್ಬಾಬು, ಗನಿಸಾಬ್, ಪ್ರಹ್ಲಾದ್, ಶ್ರೀನಿವಾಸ, ಆರ್. ಶಿವು, ಉದಯಕಿರಣ್, ಎಚ್.ಪಿ. ಸುರೇಶ್, ಗೌತಮ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್