ಬಸವ ತತ್ವದಿಂದ ಮಾತ್ರ ಸಮಾನತೆ ಸಾಧ್ಯ


Team Udayavani, Aug 18, 2017, 1:15 PM IST

18-BLR-2.jpg

ಕಂಪ್ಲಿ: ಬಸವ ತತ್ವಗಳನ್ನು ಅರ್ಥೈಸಿಕೊಳ್ಳಬೇಕಾಗಿದೆ. ಬಸವ ತತ್ವದಿಂದ ಮಾತ್ರ ಸಮಾನತೆ, ಜಾತ್ಯತೀತ ಮನೋಭಾವನೆ ರೂಪಿಸಿಕೊಳ್ಳಲು ಸಾಧ್ಯ. ಬಸವ ತತ್ವನ್ನು ಯಾರೇ ಪ್ರತಿನಿತ್ಯ ಜೀವನದಲ್ಲಿ ಅನುಷ್ಠಾನಕ್ಕೆ ತಂದುಕೊಂಡರೆ ಬಸವ ಅನುಯಾಯಿಗಳು ಆಗಬಹುದು ಎಂದು ಗಂಗಾವತಿ ರಾಷ್ಟ್ರೀಯ ಬಸವ ದಳದ ಅಧ್ಯಕ್ಷ ಕೆ.ಪಂಪಣ್ಣ ಅಭಿಪ್ರಾಯಪಟ್ಟರು.

ಪಟ್ಟಣದ ಅಖೀಲ ಭಾರತ ಶರಣ ಸಾಹಿತ್ಯ ಪರಿಷತ್‌ ಕಂಪ್ಲಿ ಹೋಬಳಿ ಘಟಕದ ವತಿಯಿಂದ ಮಡಿವಾಳರ ಓಣಿಯ ಈರಣ್ಣ ದೇವಸ್ಥಾನ ಬಳಿ ಆಯೋಜಿಸಿದ್ದ 85ನೇ ಮಹಾಮನೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು, ಬಸವ ತತ್ವ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲು ಯಾವುದೇ ಶ್ರೇಷ್ಠತೆಯ ಅಗತ್ಯತೆಯಿಲ್ಲ. ಆದರೆ, ಬಸವ ತತ್ವದ ಮೇಲೆ ಸಂಪೂರ್ಣ ನಂಬಿಕೆ, ವಿಶ್ವಾಸಗಳ ಅಗತ್ಯತೆಯಿದೆ. ಬಸವ ತತ್ವಗಳ ಅಳವಡಿಕೆಯಿಂದ ಮಾತ್ರ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯ. ಬಸವ ತತ್ವಗಳನ್ನು ಪ್ರಚಾರದ ಸರಕಾಗದೆ ನಿತ್ಯ ಜೀವನದಲ್ಲಿ ಹಾಸು ಹೊಕ್ಕಾಗಬೇಕೆಂದು ಕಿವಿಮಾತು ಹೇಳಿದರು.

ಗಂಗಾವತಿಯ ರಾಷ್ಟ್ರೀಯ ಬಸವ ದಳದ ಗೌರವಾಧ್ಯಕ್ಷ ಮಾಟೂರು ಮ.ಮಲ್ಲಪ್ಪ ಮಾತನಾಡಿ, ಕುವೆಂಪು ದೃಷ್ಟಿಯಲ್ಲಿ ಜಗಜ್ಯೋತಿ ಬಸವಣ್ಣ ಅಸಾಮಾನ್ಯ ವ್ಯಕ್ತಿಯಾಗಿ ತೋರಿದ್ದಾನೆ. ಆತನ ತತ್ವ ಆದರ್ಶಗಳನ್ನು ಕುವೆಂಪು ಜಗದ ಬೆಳಕೆಂದು ಕೊಂಡಾಡಿದ್ದಾರೆ. ಜಗತ್ತಿಗೆ ಗುರು ಬಸವಣ್ಣ ಎಂದು ಕುವೆಂಪು ಸಾರಿರುವುದರಲ್ಲಿ ಔಚಿತ್ಯವಿದೆ. ಅಕ್ಕ ಮಹಾದೇವಿಯು ಸಹ ಬಸವಣ್ಣನನ್ನು 52ಗುಣಗಳಿಂದ ಶ್ಲಾಘಿಸಿ ಬಸವಣ್ಣನ ವ್ಯಕ್ತಿತ್ವ ಕೊಂಡಾಡಿದ್ದಾಳೆ. ವಿಶ್ವಗುರುವಾಗುವ ಎಲ್ಲಾ ಅರ್ಹತೆ ಹೊಂದಿದ ಬಸವಣ್ಣನ ತತ್ವಾದರ್ಶಗಳನ್ನು ಮಾತನಾಡುವ ಬದಲಿಗೆ ಆಚರಣೆಗೆ ತರಬೇಕು ಎಂದರು.

ಶರಣ ಸಾಹಿತ್ಯ ಪರಿಷತ್‌ ಕಂಪ್ಲಿ ಹೋಬಳಿ ಘಟಕದ ಅಧ್ಯಕ್ಷ ಜಿ.ಪ್ರಕಾಶ್‌ ಮಾತನಾಡಿ, ಶಿವಶರಣರ ವಿಚಾರಧಾರೆಗಳನ್ನು ಅರ್ಥೈಸಿಕೊಂಡು ಪರಿಪಾಲಿಸಬೇಕಾಗಿದೆ. ಪ್ರಸ್ತುತ ದಿನಗಳಲ್ಲಿನ ಭ್ರಷ್ಟಾಚಾರ, ಭಯೋತ್ಪಾದನೆ, ಅಸ್ಪೃಶ್ಯತೆ, ಜಾತೀಯತೆ, ಅಹಿಂಸೆ, ಮೇಲು ಕೀಳಿನಂಥ ಅಸಮಾನತೆಗಳನ್ನು ಬಸವ ತತ್ವಗಳಿಂದ ಒಡೆದೊಡಿಸಬಹುದು ಎಂದು ಅಭಿಪ್ರಾಯಪಟ್ಟರು. 

ಮಡಿವಾಳ ಸಮಾಜದ ಮುಖಂಡ ಎಂ.ರಮೇಶ್‌ ಅಧ್ಯಕ್ಷತೆ ವಹಿಸಿದ್ದರು. ಅಗಳಿ ಪಂಪಾಪತಿ, ಮಿಟ್ಟಿ ಶಂಕರ್‌, ಎಂ.ಹುಲುಗಪ್ಪ, ಎಲ್‌ಐಸಿ ಈರಣ್ಣ, ರಂಗಪ್ಪ, ಎಂ.ಯಲ್ಲಪ್ಪ, ಕೃಷ್ಣ, ಕೆ.ರಾಜಪ್ಪ, ಕೆ.ಯಲ್ಲಪ್ಪ, ಗಣೇಶ್‌, ಶಿವರುದ್ರಪ್ಪ, ವೆಂಕಟೇಶ್‌, ವಿರೂಪಾಕ್ಷ ಇತರರು ಉಪಸ್ಥಿತರಿದ್ದರು. 
ಎಂ.ಮಡಿವಾಳರ ಹುಲುಗಪ್ಪ ಪ್ರಾರ್ಥಿಸಿದರು. ಶರಣ ಸಾಹಿತ್ಯ ಪರಿಷತ್ತಿನ ಕಾರ್ಯಾಧ್ಯಕ್ಷ ಬಂಗಿ ದೊಡ್ಡ ಮಂಜುನಾಥ ಸ್ವಾಗತಿಸಿ, ವಂದಿಸಿದರು. ಎಂ. ಸೌಮ್ಯ ನಿರೂಪಿಸಿದರು.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.