ಜನಾರ್ದನ ರೆಡ್ಡಿಯೇ ನಿಂತರೂ ಬಿಜೆಪಿಯಿಂದ ನಾನು ಸ್ಪರ್ಧಿಸುತ್ತೇನೆ: ಸೋಮಶೇಖರ ರೆಡ್ಡಿ
ಸಹೋದರನ ವಿರುದ್ದ ಬಹಿರಂಗವಾಗಿ ರಣಕಹಳೆ...
Team Udayavani, Jan 15, 2023, 6:43 PM IST
ಬಳ್ಳಾರಿ: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿಯವರೇ ಸ್ವತಃ ಬಂದು ನಿಂತರೂ ನಾನು ಸ್ಪರ್ಧಿಸುವೆ ಎಂದು ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಸವಾಲು ಹಾಕುವ ಮೂಲಕ ಬಹಿರಂಗವಾಗಿ ರಣಕಹಳೆ ಮೊಳಗಿಸಿದರು.
ರಾಜ್ಯ ಸರ್ಕಾರ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಅನುಮತಿ ನೀಡಿರುವ ವಿಷಯಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಸ್ವಲ್ಪ ತಾಳ್ಮೆ ವಹಿಸಿದ್ದರೆ ಜನಾರ್ದನ ರೆಡ್ಡಿ ಪರಿಸ್ಥಿತಿ ಈ ರೀತಿ ಆಗುತ್ತಿರಲಿಲ್ಲ. ಹೊಸ ಪಕ್ಷ ಕಟ್ಟುವ ಅವಶ್ಯಕತೆ ಇರಲಿಲ್ಲ. ಜನಾರ್ದನ ರೆಡ್ಡಿ ದುಡುಕಿದ್ದಾರೆ. ಯಾರ ಮಾತು ಕೇಳುತ್ತಿಲ್ಲ. ಈ ವಿಷಯದಲ್ಲಿ ಜನಾರ್ದನ ರೆಡ್ಡಿ ತಪ್ಪು ಮಾಡಿದ್ದಾರೆ ಎಂದು ಸಹೋದರನ ದುಡುಕಿನ ನಿರ್ಧಾರಗಳ ಬಗ್ಗೆ ಸೋಮಶೇಖರ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.
ಮಾಜಿ ಸಚಿವ ಜನಾರ್ದನ ರೆಡ್ಡಿ ಮನವೊಲಿಸುವ ಕೆಲಸ ಸಚಿವ ಶ್ರೀರಾಮುಲು, ನಾನು ಮಾಡುತ್ತಿದ್ದೇವೆ. ಆದರೂ, ಯಾರ ಮಾತು ಕೇಳದವರಿಗೆ ಏನು ಹೇಳಬೇಕು?, ಬಳ್ಳಾರಿ ನಗರ ಕ್ಷೇತ್ರದಿಂದ ಜನಾರ್ದನ ರೆಡ್ಡಿ ಪತ್ನಿ ಅಲ್ಲ, ಸ್ವತಃ ಜನಾರ್ದನ ರೆಡ್ಡಿ ಬಂದರೂ ನಾನು ಬಿಜೆಪಿಯಿಂದ ಸ್ಪರ್ಧೆ ಮಾಡುವೆ ಎಂದು ಬಹಿರಂಗವಾಗಿ ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ