ಗರಿಗೆದರಿದ ಕೃಷಿ ಚಟುವಟಿಕೆ


Team Udayavani, May 28, 2018, 5:04 PM IST

bell-1.jpg

ಹೊಸಪೇಟೆ: ತಾಲೂಕಾದ್ಯಂತ ಮುಂಗಾರು ಪೂರ್ವ ಮಳೆ ಆರಂಭವಾಗಿದ್ದು, ರೈತರು ಈಗಾಗಲೇ ಭೂಮಿ ಹದಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ತಾಲ್ಲೂಕಿನ ವಿವಿಧೆಡೆ ಮಂಗಳವಾರ, ಬುಧವಾರ ರಾತ್ರಿ ಸುರಿದ ರೋಹಿಣಿ ಮಳೆಯಿಂದಾಗಿ ಪೂರ್ವ ಮುಂಗಾರು ಬೆಳೆಗಳಾದ ಜೋಳ, ರಾಗಿ, ಹೆಸರು, ತೊಗರಿ, ಹಲಸಂದೆ, ಬೀಜ ಬಿತ್ತಲು ರೈತರು ಹೊಲ, ಗದ್ದೆಗಳ ಕಡೆ ಮುಖ ಮಾಡಿದ್ದಾರೆ.

ಕಳೆದ ನಾಲ್ಕಾರು ದಿನಗಳಿಂದ ಸುರಿದ ಮಳೆ ನಗರ ಸೇರಿದಂತೆ ತಾಲೂಕಿನ ಕಮಲಾಪುರ, ಕಂಪ್ಲಿ, ಮರಿಯಮ್ಮನಹಳ್ಳಿ ಹೋಬಳಿಯಲ್ಲಿ ವಾಡಿಕೆಗಿಂತ ಉತ್ತಮ ಮಳೆಯಾಗಿರುವುದು ಮಳೆ ಮಾಪಕದಲ್ಲಿ ವರದಿಯಾಗಿದೆ.
 
ತಾಲೂಕಿನಲ್ಲಿ ಮೇ 23ರ ವರೆಗೆ 67 ಮಿ.ಮೀ. ವಾಡಿಕೆ ಮಳೆ ಪೈಕಿ ಈ ವರೆಗೂ 101 ಮಿ.ಮೀ. ಮಳೆಯಾಗಿ ಬಿತ್ತನೆಗೆ ಪೂರಕವಾಗಿದೆ. ಜಮೀನು ಹದಗೊಳಿಸುವ ಕೆಲಸ ಆರಂಭಗೊಂಡಿದ್ದು, ಮೇ ಎರಡನೇ ವಾರ ಉತ್ತಮ ಮಳೆಯಾಗಿದೆ.

ಮೇ ತಿಂಗಳ ವಾಡಿಕೆ ಮಳೆ 67 ಮಿ.ಮೀ.ಗೆ 101 ಮಿ.ಮೀ. ಮಳೆಯಾಗಿದೆ. ಹೊಸಪೇಟೆ 77 ವಾಡಿಕೆಗೆ, 107 ಮಿ.ಮೀ. ಆಗಿ ಶೇ. 69 ಹೆಚ್ಚಾಗಿದೆ. ಕಮಲಾಪುರ 68 ವಾಡಿಗೆ 72 ಮಿ.ಮೀ ಆಗಿದ್ದು, ಶೇ. 6 ಹೆಚ್ಚಾಗಿದೆ.ಕಂಪ್ಲಿ 54 ವಾಡಿಕೆಗೆ 59 ಮಿ.ಮೀ. ಆಗಿದ್ದು, ಶೇ. 9 ಅಧಿಕಾವಾಗಿದೆ, ಮರಿಯಮ್ಮನಹಳ್ಳಿ 83 ವಾಡಿಕೆಗೆ 177 ಮಿ.ಮೀ., ಶೇ.116 ಹೆಚ್ಚಾಗಿದೆ. ನೀರಾವರಿ ಸೌಲಭ್ಯ ಇರುವ ಕಡೆ ಭತ್ತದ ಬೀಜ ಹಾಕುವುದು ಆರಂಭವಾಗಿದೆ. 

ಬಿತ್ತನೆ ಗುರಿ: ತಾಲೂಕಿನಲ್ಲಿ 2018ರ ಮುಂಗಾರು ಹಂಗಾಮಿಗೆ ಒಟ್ಟಾರೆ ಸುಮಾರು 33 ಸಾವಿರ ಹೆಕ್ಟೇರ್‌ ಬಿತ್ತನೆ ಗುರಿ ಹೊಂದಲಾಗಿದೆ. ಈ ಪೈಕಿ ಏಕದಳ ಧಾನ್ಯ ಭತ್ತ, ರಾಗಿ, ಜೋಳ, ಸಜ್ಜೆ ಇತರೆ ನೀರಾವರಿ ಪ್ರದೇಶ 16,550, ಮಳೆ ಆಶ್ರಿತ ಪ್ರದೇಶ 6,230 ಹೆಕ್ಟೇರ್‌ನಲ್ಲಿ ಬಿತ್ತನೆ ಮಾಡಲಾಗುವುದು. ಅದರಂತೆ ಬಿತ್ತನೆ ದ್ವಿದಳ ಧಾನ್ಯ, ಎಣ್ಣೆಕಾಳು, ವಾಣಿಜ್ಯ ಬೆಳೆ ಬಿತ್ತನೆ ಕೈಗೊಳ್ಳುತ್ತಿದ್ದಾರೆ.

7 ಕೇಂದ್ರಗಳು: ತಾಲೂಕಿನ ರೈತರಿಗೆ ಅನುಕೂಲಕ್ಕಾಗಿ ನಗರ ಸೇರಿದಂತೆ ಕಂಪ್ಲಿ, ಕಮಲಾಪುರ, ಮರಿಯಮ್ಮನಹಳ್ಳಿ 4 ರೆತ ಸಂಪರ್ಕ ಕೇಂದ್ರ ಹಾಗೂ ಹೊಸದಾಗಿ ಬೈಲುವದ್ದಿಗೆರಿ, ನಾಗಲಾಪುರ, ಚಿಲಕನಹಟ್ಟಿಯಲ್ಲಿ 3 ಉಪ ಬೀಜ ಮಾರಾಟ ಕೇಂದ್ರಗಳ ಮೂಲಕ ಬಿತ್ತನೆ ಬೀಜ ಮಾರಾಟ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 

ರಸೀದಿ ಪಡೆಯಲು ಸೂಚನೆ: ತಾಲೂಕಿನ ಎಲ್ಲ ಪರಿಕರ ಮಾರಾಟಗಾರರು ಪರಿಕರಗಳನ್ನು ನಿಗದಿಪಡಿಸಿದ ದರದಲ್ಲಿ ಮಾರಾಟ ಮಾಡಲು ಸೂಚಿಸುವ ಜತೆಗೆ ಮಾರಾಟ ಮಾಡಿದ ಪರಿಕರಗಳಿಗೆ ರಸೀದಿ ಸಂಖ್ಯೆ ಹಾಗೂ ನಿಗದಿಪಡಿಸಿದ ದರವನ್ನು ರಸೀದಿಯಲ್ಲಿ ನಮೂದಿಸುವಂತೆ ಇಲಾಖೆ ಸೂಚನೆ ನೀಡಿದೆ.

ಮಾರಾಟಗಾರರು ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ, ಅವಧಿ ಮೀರಿರುವ ಪರಿಕರಗಳನ್ನು ಮಾರಾಟ ಮಾಡುವುದಾಗಲಿ, ಯಾವುದೇ ಬಿತ್ತನೆ ಬೀಜ, ರಸಗೊಬ್ಬರದ ದಾಸ್ತಾನು ಮಾಡಿಕೊಂಡು ಕೃತಕ ಅಭಾವ ಸೃಷ್ಟಿಸುವುದಾಗಲಿ ಕಂಡು ಬಂದಲ್ಲಿ ರೆತರು ಕೂಡಲೇ ಸಮೀಪದ ಕೃಷಿ ಅಧಿಕಾರಿಗಳು ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬೇಕೆಂದು ಕೃಷಿ ಇಲಾಖೆಯವರು ತಿಳಿಸಿದ್ದಾರೆ

ಕಳೆದ ಒಂದು ವಾರದಿಂದ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ಇಮ್ಮಡಿಗೊಳಿಸಿದೆ. ತಾಲೂಕಿನ 4 ಹೋಬಳಿಗಳ 35 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಮೇ 29ರಂದು ಕಂಪ್ಲಿಯ ಜಿಲ್ಲಾ ಕೃಷಿ ಕೇಂದ್ರದಲ್ಲಿ ರಸಗೊಬ್ಬರ ವ್ಯಾಪಾರಿಗಳಿಗೆ ಸಭೆ ಕರೆಯಲಾಗಿದೆ.  ಕೆ. ವಾಮದೇವ, ಸಹಾಯಕ ಕೃಷಿ ಇಲಾಖಾ ನಿರ್ದೇಶಕ, ಹೊಸಪೇಟೆ.

ಮಳೆ ಪ್ರಮಾಣ ಉತ್ತಮವಾಗಿದೆ. ಬಿತ್ತನೆಗೆ ಎಲ್ಲ ಸಿದ್ಧತೆ ಮಡಲಾಗುತ್ತಿದೆ. ಭೂಮಿ ಹದಗೊಳಿಸುವ ಕಾರ್ಯ ನಡೆಯುತ್ತಿದೆ. ಮುಂದೆಯೂ ಇದೇ ರೀತಿಯಲ್ಲಿ ಕಾಲಕಾಲಕ್ಕೆ ಮಳೆಯಾದರೆ ರೈತರಿಗೆ ಒಳ್ಳೆಯದಾಗುತ್ತದೆ.
 ವೆಂಕಪ್ಪ ಸೀತರಾಮ ತಾಂಡಾ, ಕಮಲಾಪುರ ಹೋಬಳಿ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.