ವಿಜಯನಗರದಲ್ಲಿ ಖೋಟಾ ನೋಟು ಜಾಲ ಪತ್ತೆ: ಐವರ ಬಂಧನ
Team Udayavani, Aug 21, 2022, 10:09 PM IST
ಹೊಸಪೇಟೆ: ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಐವರು ಆರೋಪಿಗಳನ್ನು ಭಾನುವಾರ ಬಂಧಿಸುವಲ್ಲಿ ಹೊಸಪೇಟೆ ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಈ ವೇಳೆ 500 ರೂ. ಮುಖ ಬೆಲೆಯ 1 ಲಕ್ಷದ 56 ಸಾವಿರದ ಮೌಲ್ಯದ ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.
ಖೋಟಾ ನೋಟು ಚಲಾವಣೆಗೆ ಬಂದಿದ್ದ ದಾವಣಗೆರೆ ಜಿಲ್ಲೆಯ ಕುಬೇರಪ್ಪ( 58) ಶಿವಮೊಗ್ಗ ಜಿಲ್ಲೆಯ ರುದ್ರೇಶ್( 39) ಮಂಡ್ಯ ಜಿಲ್ಲೆಯ ಎಸ್. ರಾಜೇಶ್( 28) ಮೈಸೂರು ಜಿಲ್ಲೆಯ ಪ್ರಶಾಂತ್( 30) ಮಂಡ್ಯ ಜಿಲ್ಲೆಯ ರವಿ( 30) ಬಂಧಿತ ಆರೋಪಿಗಳು.
ನಗರದ ರಾಣಿ ಪೇಟೆಯಲ್ಲಿರುವ ವೆಂಕಟೇಶ್ವರ ಲಾಡ್ಜಲ್ಲಿ ವಾಸವಾಗಿ, ಸ್ಥಳೀಯರಿಗೆ ನೋಟು ಚಲಾವಣೆ ಮಾಡಲು ಹೊಂಚು ಹಾಕಿದ್ದರು.
ಖಚಿತ ಮಾಹಿತಿ ಮೇರೆಗೆ ಹೊಸಪೇಟೆ ಡಿವೈಎಸ್ಪಿ ವಿಶ್ವನಾಥ ರಾವ್ ಕುಲಕರ್ಣಿ ಮಾರ್ಗದರ್ಶನದಲ್ಲಿ ಇಲ್ಲಿನ ಪಟ್ಟಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಜಯಪ್ರಕಾಶ್ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ