ಕೂರಿಗೆ ಬಿತ್ತನೆಯತ್ತ ಮುಖ ಮಾಡಿದ ರೈತ!


Team Udayavani, Jul 21, 2017, 2:45 PM IST

21-BLR-3.gif

ಬಳ್ಳಾರಿ: ಭತ್ತದ ಸಸಿಯನ್ನು ನಾಟಿ ಮಾಡುವ ಸಾಂಪ್ರದಾಯಿಕ ಕ್ರಮವನ್ನು ಅಳವಡಿಸಿಕೊಂಡಿದ್ದ ಜಿಲ್ಲೆಯ ನೀರಾವರಿ ಪ್ರದೇಶಗಳ ರೈತರು ಪ್ರಸ್ತುತ ಮುಂಗಾರು ಹಂಗಾಮಿನಿಂದ ಭತ್ತದ ನೇರ ಬಿತ್ತನೆಯತ್ತ ಪರಿವರ್ತನೆಗೊಳ್ಳುತ್ತಿರುವ ಸಕಾರಾತ್ಮಕ ಬೆಳವಣಿಗೆ ಜಿಲ್ಲೆಯಲ್ಲಿ ಆರಂಭವಾಗಿದೆ.

ತೀವ್ರ ಮಳೆ ಕೊರತೆ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಎರಡು ಅವಧಿಯಲ್ಲಿ ಭತ್ತದ ಬೆಳೆ ಬೆಳೆಯಲಾಗದ ನೀರಾವರಿ ಪ್ರದೇಶಗಳ ರೈತರು ಕಡಿಮೆ ನೀರು ಬೇಡುವ, ಭತ್ತದ ಕೃಷಿಯ ಒಳ ಸುರಿ ವೆಚ್ಚದಲ್ಲಿ ಶೇ.25ರಷ್ಟು ಕಡಿಮೆ ಆಗುವ, ಸಾಂಪ್ರದಾಯಿಕ ನಾಟಿ ಬಿತ್ತನೆಯ ಸರಿಸಮವಾಗಿ ಇಳುವರಿ ನೀಡುವ ನೇರ ಬಿತ್ತನೆ ಪದ್ಧತಿಗೆ ನಿಧಾನವಾದರೂ ರೈತರು ಇತ್ತ ಕಡೆ ವಾಲುತ್ತಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

ಭತ್ತದ ನೇರ ಬಿತ್ತನೆ: ಸಾಂಪ್ರದಾಯಿಕ ನಾಟಿ ಪದ್ಧತಿಗೆ ಹೊರತಾದ ಭತ್ತದ ನೇರ ಬಿತ್ತನೆ ಪದ್ಧತಿ 2013ರಲ್ಲಿ ಆರಂಭವಾಗಿದ್ದರೂ
ಆ ವರ್ಷ ಜಿಲ್ಲೆಯ ಕೆಲವೇ ರೈತರು ಈ ಪದ್ಧತಿ ಅಳವಡಿಸಿಕೊಂಡಿದ್ದರು. ನಂತರದ ವರ್ಷಗಳಲ್ಲಿ ಈ ಪದ್ಧತಿ ಕ್ರಮೇಣ ರೈತರ ಗಮನ ಸೆಳೆಯುವಲ್ಲಿ ಸಫಲವಾದರೂ 2016ನೇ ಸಾಲಿನಲ್ಲಿ ಕೇವಲ 1,100 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ನೇರ ಬಿತ್ತನೆಯಾಗಿತ್ತು. ರೈತರ ಈ ಬಗೆಯ ಪರಿವರ್ತನೆ ಜಿಲ್ಲೆಯ ತುಂಗಭದ್ರಾ ನಾಲೆಗಳು ಹರಿಯುವ ಬಳ್ಳಾರಿ, ಹೊಸಪೇಟೆ, ಸಿರುಗುಪ್ಪ ತಾಲೂಕುಗಳ
ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಹಾಗೂ ಏತ ನೀರಾವರಿ ಯೋಜನಾ ಪ್ರದೇಶಗಳಲ್ಲಿ ಆಗುತ್ತಿರುವುದು ಮಹತ್ವದ್ದಾಗಿದೆ.
ಈಗಾಗಲೇ ನೇರ ಬಿತ್ತನೆ ಪದ್ಧತಿ ಅಳವಡಿಸಿಕೊಂಡು ಅದರ ಲಾಭ ಪಡೆದಿರುವ ರೈತರು ಈ ಪದ್ಧತಿಯನ್ನು ಇನ್ನಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಮುಂದುವರೆದಿದ್ದರೆ, ಮತ್ತೆ ಕೆಲವು ರೈತರು ಈ ಪದ್ಧತಿಯ ಯಶಸ್ವಿ ರೈತರ ಸಲಹೆ ಹಾಗೂ ಪ್ರೇರಣೆಯೊಂದಿಗೆ ತಮ್ಮ ಜಮೀನುಗಳಲ್ಲಿ ಅಳವಡಿಸಿಕೊಳ್ಳುವ ಉತ್ಸಾಹ ತೋರಿದ್ದಾರೆ. 

ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಹೆಚ್ಚು ಜನ ರೈತರು ಭತ್ತದ ನೇರ ಬಿತ್ತನೆ ಪದ್ಧತಿ ಅಳವಡಿಸಿಕೊಳ್ಳಲು ಮುಂದೆ ಬರುತ್ತಿದ್ದಾರೆ. ನೇರ ಬಿತ್ತನೆ ಪದ್ಧತಿ ಉತ್ತೇಜಿಸಲು ಇಲಾಖೆ ಹೆಕ್ಟೇರ್‌ ಗೆ 4 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಈ ಪ್ರೋತ್ಸಾಹ ಧನ
2 ಹೆಕ್ಟೇರ್‌ಗೆ ಸೀಮಿತವಾಗಿದೆ. ನೇರ ಬಿತ್ತನೆ ಅಳವಡಿಸಿಕೊಳ್ಳಲು ಬಯಸುವ ರೈತರಿಗೆ ಕೃಷಿ ಇಲಾಖೆ ಎಲ್ಲ ರೀತಿಯ ಸಹಕಾರ ನೀಡಲಿದೆ.
ಶರಣಗೌಡ ಪಾಟೀಲ್‌, ಉಪ ನಿರ್ದೇಶಕರು, ಕೃಷಿ ಇಲಾಖೆ.

ನಮ್ಮ ಜಮೀನುಗಳಲ್ಲಿ 2016ರವರೆಗೆ ಸಾಂಪ್ರದಾಯಿಕ ಭತ್ತದ ನಾಟಿ ಪದ್ಧತಿ ಅನುಸರಿಸಿಕೊಂಡು ಬಂದಿದ್ದೆವು. 2015ರಲ್ಲಿ ಉಂಟಾದ ಮಳೆಯ ಅಭಾವದಿಂದ ನೀರಿನ ಕೊರತೆ ಅನುಭವಿಸಿದೆವು. ಆದ್ದರಿಂದ 2016ರಲ್ಲಿ ನಮ್ಮ 8 ಹೆಕ್ಟೇರ್‌ ಜಮೀನಿನಲ್ಲಿ ಭತ್ತದ ನೇರ ಬಿತ್ತನೆ ಪದ್ಧತಿ ಅಳವಡಿಸಿಕೊಂಡೆವು. ಆ ವರ್ಷವೂ ಮಳೆ ಕೊರತೆ ಉಂಟಾದ ಕಾರಣ ನಾವು ಅಳವಡಿಸಿಕೊಂಡ ನೇರ ಬಿತ್ತನೆ
ಪದ್ಧತಿ ವರವಾಯಿತು. ಇದರಿಂದ ಈ ವರ್ಷ ನಾನು 16 ಹೆಕ್ಟೇರ್‌ ಜಮೀನಿನಲ್ಲಿ ನೇರ ಬಿತ್ತನೆ ಪದ್ಧತಿ ಅಳವಡಿಸಿಕೊಳ್ಳುತ್ತಿದ್ದೇನೆ.
ಎಸ್‌.ರಾಮಕೃಷ್ಣ, ರೈತ, ಹಚ್ಚೊಳ್ಳಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.