ಪ್ರತಿಭಟನೆಗೆ ತೆರಳಿದ್ದ ರೈತರ ಪರದಾಟ
Team Udayavani, Dec 4, 2018, 6:00 AM IST
ಬಳ್ಳಾರಿ: ಸಾಲ ಮನ್ನಾ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸಲು ದಿಲ್ಲಿಗೆ ತೆರಳಿದ್ದ ಜಿಲ್ಲೆಯ ರೈತರು ರೈಲು ತಪ್ಪಿಸಿಕೊಂಡು ವಾಪಸ್ ಬರಲು ಹಣವಿಲ್ಲದೆ ಕಾಶಿ (ವಾರಾಣಸಿ) ರೈಲು ನಿಲ್ದಾಣದಲ್ಲಿ ಅತಂತ್ರರಾಗಿ ಪರದಾಡುತ್ತಿದ್ದಾರೆ. ನ. 29, 30ರಂದು ನಡೆದ ಪ್ರತಿಭಟನೆಗಾಗಿ ಜಿಲ್ಲೆಯಿಂದ 30ಕ್ಕೂ ಹೆಚ್ಚು ರೈತರು ತೆರಳಿದ್ದರು. ಇದಕ್ಕಾಗಿ ಗದಗ-ಕಾಶಿ-ದಿಲ್ಲಿ ಮತ್ತು ದಿಲ್ಲಿ-ಕಾಶಿ-ಗದಗ ನಡುವೆ ಸಂಚರಿಸುವ ರೈಲಿನಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಲಾಗಿತ್ತು. ಪ್ರತಿಭಟನೆ ಮುಗಿದ ಬಳಿಕ ರೈಲು ಹತ್ತಿ ಕಾಶಿಯಲ್ಲಿ ಬಂದಿಳಿದಿದ್ದರು. ಅಲ್ಲಿಂದ ಗದಗಕ್ಕೆ ತೆರಳಲು ಡಿ.1ರಂದು ಸಂಜೆ 6 ಗಂಟೆಗೆ ಆಗಮಿಸಬೇಕಿದ್ದ ರೈಲು ತಡವಾಗಲಿದೆ ಎಂಬ ಮಾಹಿತಿ ಪಡೆದ ರೈತರೆಲ್ಲರೂ ನಿಲ್ದಾಣದಿಂದ ಹೊರಬಂದು ಕಾಶಿ ವೀಕ್ಷಣೆಗೆ ತೆರಳಿದ್ದರು.
ಡಿ. 1ರಂದು ಸಂಜೆ 6 ಗಂಟೆಗೆ ಆಗಮಿಸಬೇಕಿದ್ದ ರೈಲು ಡಿ. 2ರಂದು ಬೆಳಗ್ಗಿನ ಜಾವ ಆಗಮಿಸಿದೆ. ಈ ವೇಳೆ ರೈತರು ರೈಲು ನಿಲ್ದಾಣಕ್ಕೆ ಆಗಮಿಸಿಲ್ಲದ ಕಾರಣ ಈ ರೈಲನ್ನೂ ತಪ್ಪಿಸಿಕೊಂಡಿದ್ದಾರೆ. ಹುಬ್ಬಳ್ಳಿಗೆ ಆಗಮಿಸುವ ಶತಾಬ್ದಿ ಎಕ್ಸ್ ಪ್ರಸ್ ರೈಲನ್ನು ಸಹ ರೈತರು ತಪ್ಪಿಸಿಕೊಂಡಿದ್ದು, ಈಗ ಗದಗಕ್ಕೆ ಆಗಮಿಸುವ ರೈಲಿಗಾಗಿ ನಿಲ್ದಾಣದಲ್ಲೇ ಕಾದು ಕುಳಿತಿದ್ದಾರೆ. ಕಾಶಿಯಿಂದ ಬಸ್ ಅಥವಾ ಬೇರೆ ರೈಲಿನಲ್ಲಿ ಸಂಚರಿಸಲು ರೈತರ ಕೈಯಲ್ಲಿ ಹಣವಿಲ್ಲ. ಇದರಿಂದ ಕಾಶಿ ನಿಲ್ದಾಣದಲ್ಲಿರುವ ರೈತರಿಗೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ