ಬಂಪರ್ ಬೆಲೆ ನಿರೀಕ್ಷೆಯಲ್ಲಿ ರೈತರು
Team Udayavani, Mar 10, 2020, 2:30 PM IST
ಸಾಂದರ್ಭಿಕ ಚಿತ್ರ
ಸಿರುಗುಪ್ಪ: ತಾಲೂಕಿನಲ್ಲಿ ಸುಮಾರು ಆರುವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಈ ಬಾರಿ ಒಣ ಮೆಣಸಿನಕಾಯಿ ಬೆಳೆದಿರುವ ರೈತರಿಗೆ ಸಂತಸದ ಇಮ್ಮುಡಿಯಾಗಿದೆ. ಇಳುವರಿಯೂ ಉತ್ತಮವಾಗಿದ್ದು, ದರವೂ ಅಧಿಕವಿದ್ದು,ಬಂಪರ್ ಬೆಲೆ ನಿರೀಕ್ಷೆಯಲ್ಲಿ ಅನ್ನದಾತರಿದ್ದಾರೆ.
ಹೆಚ್ಚಿನ ಮಳೆಯಿಂದ ತಾಲೂಕಿನಲ್ಲಿ ಒಣ ಮೆಣಸಿನಕಾಯಿ ಬೆಳೆದ ರೈತರಿಗೆ ಆರಂಭದಲ್ಲಿ ಹಿನ್ನಡೆ ಉಂಟಾಗಿತ್ತು. ಅಲ್ಲಲ್ಲಿ ಗಿಡಗಳು ಒಣಗಿ ಬೆಳೆಗೆ ವಿವಿಧ ರೀತಿಯ ರೋಗಗಳು ಕಾಣಿಸಿಕೊಂಡಿದ್ದವು. ಬೆಳವಣಿಗೆಯೂ ಸಹ ಸರಿಯಾಗಿ ಆಗಿರಲಿಲ್ಲ, ಆದರೂ ಮೆಣಸಿನಕಾಯಿ ಬೆಳೆಯ ಬೆಳವಣಿಗೆಗೆ ವಾತಾವರಣ ಈ ಬಾರಿ ಅನುಕೂಲ ಮಾಡಿಕೊಟ್ಟಿತ್ತು. ತುಂಗಭದ್ರಾ ಜಲಾಶಯ ವ್ಯಾಪ್ತಿಯ ಅಚ್ಚುಕಟ್ಟು ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಿದ್ದರಿಂದ ರೈತರು ಹೊಲದಲ್ಲಿ ಮೆಣಸಿನಕಾಯಿ ಬೆಳೆಯು ನಳನಳಿಸಿತು. ಇದರಿಂದಾಗಿ ಬ್ಯಾಡಗಿ ಮೆಣಸಿನಕಾಯಿ ಬೆಲೆಯು 25ರಿಂದ 27ಸಾವಿರ ರೂ.ದವರೆಗೆ, ಸಿಜೆಂಟಾ ಮತ್ತು ಗುಂಟೂರು ಮೆಣಸಿನಕಾಯಿ 10ರಿಂದ 17ಸಾವಿರದ ರೂ.ವರೆಗೆ ಮಾರಾಟವಾಗುತ್ತಿತ್ತು.
ಆದರೆ ಒಂದು ತಿಂಗಳ ಹಿಂದೆ ಚೀನಾದಲ್ಲಿ ಕಾಣಿಸಿಕೊಂಡ ಕೊರೋನಾ ವೈರಸ್ ಸೊಂಕಿನಿಂದ ವಿದೇಶಗಳಿಗೆ ರಫ್ತಾಗುತ್ತಿದ್ದ ಒಣ ಮೆಣಸಿನಕಾಯಿ ವಹಿವಾಟು ಸ್ಥಗಿತಗೊಂಡಿತ್ತು.ಇದರಿಂದಾಗಿ ಮಾರುಕಟ್ಟೆಯಲ್ಲಿ ಒಣ ಮೆಣಸಿನಕಾಯಿಗೆ ದರ ಕುಸಿದಿದ್ದಲ್ಲದೆ, ಬೇಡಿಕೆ ಕಡಿಮೆಯಾಗಿತ್ತು, ಇದರಿಂದಾಗಿ ಮೆಣಸಿನ ಕಾಯಿ ಬೆಳೆ ಬೆಳೆದ ರೈತರು ಕಂಗಾಲಾಗಿದ್ದರು.
ಆದರೆ ಕಳೆದ 15ದಿನಗಳಿಂದ ಒಣ ಮೆಣಸಿನಕಾಯಿಗೆ ಮಾರುಕಟ್ಟೆಯಲ್ಲಿ ಉತ್ತಮ ದರ ದೊರಕುತ್ತಿದ್ದು, ಸದ್ಯ ಬ್ಯಾಡಗಿ ಮೆಣಸಿನಕಾಯಿ ಒಂದು ಕ್ವಿಂಟಲ್ಗೆ 28ರಿಂದ 30ಸಾವಿರದ ವರೆಗೆ ಮತ್ತು ಸಿಜೆಂಟಾ, ಗುಂಟೂರು ಮೆಣಸಿನಕಾಯಿಗೆ ಕ್ವಿಂಟಲ್ಗೆ 13ಸಾವಿರದಿಂದ 18ಸಾವಿರದ ವರೆಗೆ ಮಾರಾಟವಾಗುತ್ತಿದ್ದು, ಒಂದು ಎಕರೆಗೆ ಬ್ಯಾಡಗಿ ತಳಿಯ ಮೆಣಸಿನಕಾಯಿ 10ರಿಂದ 12ಕ್ವಿಂಟಲ್, ಸೀಜೆಂಟಾ, ಗುಂಟೂರು ಮೆಣಸಿನಕಾಯಿ 18ರಿಂದ 23ಕ್ವಿಂಟಲ್ ವರೆಗೆ ಇಳುವರಿ ಬರುತ್ತಿರುವುದು ರೈತರಲ್ಲಿ ಸಂತಸ ಹೆಚ್ಚಿಸಿದೆ.
ತಾಲೂಕಿನಲ್ಲಿ ಮೆಣಸಿನಕಾಯಿ ಬೆಳೆ ಬೆಳೆದ ರೈತರಿಗೆ ಬ್ಯಾಡಗಿ ಮಾರುಕಟ್ಟೆಯೇ ಮುಖ್ಯ ವ್ಯಾಪಾರ ಕೇಂದ್ರವಾಗಿದ್ದು, ಹೆಚ್ಚಿನ ಸಂಖ್ಯೆಯ ರೈತರು ತಾವು ಬೆಳೆದ ಮೆಣಸಿನಕಾಯಿ ಬೆಳೆಯನ್ನು ಬ್ಯಾಡಗಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಬ್ಯಾಡಗಿ ಮಾರುಕಟ್ಟೆಯಲ್ಲಿ ವ್ಯಾಪಾರಮುಗಿಯುತ್ತಿದ್ದಂತೆ ರೈತರ ಕೈಗೆ ಹಣ ನೀಡಲಾಗುತ್ತದೆ ಎನ್ನುವ ಕಾರಣಕ್ಕೆ ಹೆಚ್ಚಿನ ರೈತರು ಬ್ಯಾಡಗಿ ಮಾರುಕಟ್ಟೆಗೆ ಬರುತ್ತಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಾಶ್ರಿತ, ಎಲ್ಎಲ್ಸಿ ಕಾಲುವೆ,ಬೋರ್ವೆಲ್, ಹಳ್ಳ, ಹಗರಿ, ನದಿಯ ನೀರಿನ ಮೂಲ ಬಳಸಿಕೊಂಡು ಆರುವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬ್ಯಾಡಗಿ ಮತ್ತು ಸಿಜೆಂಟಾ, ಗುಂಟೂರು ಮೆಣಸಿನಕಾಯಿಯನ್ನು ಬೆಳೆದಿದ್ದಾರೆ. –ವಿಶ್ವನಾಥ್, ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ
-ಆರ್.ಬಸವರೆಡ್ಡಿ ಕರೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ