ಕುರುಗೋಡು: ಕೇಂದ್ರ ಸರ್ಕಾರ ಮಂಡಿಸಲಿರುವ ವಿದ್ಯುತ್ ಕಾಯ್ದೆ ಪ್ರತಿಗಳು ಸುಟ್ಟು ಆಕ್ರೋಶ
Team Udayavani, Aug 9, 2022, 4:34 PM IST
ಕುರುಗೋಡು: ಸಮೀಪದ ಶ್ರೀಧರಗಡ್ಡೆ ಗ್ರಾಮದಲ್ಲಿ ಎ. ಐ. ಕೆ.ಕೆ.ಎಂ.ಎಸ್ ರೈತ ಸಂಘಟನೆ ವತಿಯಿಂದ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಲಿರುವ ವಿದ್ಯುತ್ (ತಿದ್ದುಪಡಿ) ಕಾಯ್ದೆ 2022 ರ ಪ್ರತಿಗಳನ್ನು ಸುಟ್ಟು ಹಾಕಿ ಅದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡಿ, ವಿದ್ಯುತ್ ತಿದ್ದುಪಡಿ ಕಾಯ್ದೆ 2022 ಇದು ಖಾಸಗೀಕರಣ ನೀತಿಯಾಗಿದೆ. ಈ ಹಿಂದೆ ಬಡವರಿಗೆ ಸಿಗುತ್ತಿದ್ದ ಭಾಗ್ಯಜೋತಿ, ಕುಟೀರ ಜ್ಯೋತಿ ಸೇರಿದಂತೆ ಹಲವಾರು ಯೋಜನೆಗಳು ಈ ನೀತಿಯಿಂದ ನಾಶವಾಗಲಿವೆ. ಇಂದು ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸಿಗದೆ ನಷ್ಟದಲ್ಲಿರುವಾಗ, ಕೇಂದ್ರ ಸರ್ಕಾರ ಅವರ ಕಷ್ಟಗಳಿಗೆ ಹೆಗಲು ಕೋಡಬೇಕಾಗಿತ್ತು ಅದರ ಬದಲು ರೈತರ ಪಂಪ್ ಸೆಟ್ ಗಳಿಗೆ ಉಚಿತವಾಗಿ ನೀಡುತ್ತಿದ್ದ 10 ಹೆಚ್. ಪಿ. ವಿದ್ಯುತ್ ಕೂಡಾ ರೈತರಿಂದ ಕಿತ್ತುಕೊಳ್ಳುತ್ತಿರುವುದು ನೊಂದ ಜೀವಗಳಿಗೆ ಸಿಡಿಲು ಬಡಿದಂತಾಗಿದೆ ಎಂದು ಹೇಳಿದರು.
ಜಿಲ್ಲಾ ಉಪಾಧ್ಯಕ್ಷ ಬಸಣ್ಣ ಮಾತನಾಡಿ, ವಿದ್ಯುತ್ ಖಾಸಗೀಕರಣದಿಂದ ಇನ್ನು ಮುಂದೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಶುದ್ಧಿಕರಿಸಿದ ಕುಡಿಯುವ ನೀರು ಸೇರಿದಂತೆ ವಿದ್ಯುತ್ ಬಳಸಿಕೊಂಡು ಉಚಿತವಾಗಿ ಸಿಗುತ್ತಿದ್ದ ಹಲವಾರು ಯೋಜನೆಗಳು ದುಬಾರಿಯಾಗಲಿವೆ. ಇನ್ನು ಮುಂದೆ ಸಾರ್ವಜನಿಕ ಸ್ವತ್ತಾಗಿದ್ದ ವಿದ್ಯುತ್ ಹಂತ ಹಂತವಾಗಿ ಏಕಸೌಮ್ಯ ಬಂಡವಳಿಗಾರರ ಪಾಲಾಗಲಿದೆ. ಈ ಬಂಡವಾಳಿಗರು ಇದರ ಸಂಪೂರ್ಣ ಲಾಭ ಪಡೆಯಲು ಜನರ ರಕ್ತ ಹೀರುವುದು ಖಚಿತ. ಕೇಂದ್ರ ಸರ್ಕಾರದ ಬಂಡವಾಳಿಗರ ಪರವಾದ ಇಂತ ನೀತಿಗಳ ವಿರುದ್ಧ ದೇಶದ ಜನಸಾಮಾನ್ಯರು ಸಿಡಿದೇಳಬೇಕು ಮತ್ತು ಬಲಿಷ್ಠ ಹೋರಾಟಗಳನ್ನು ಕಟ್ಟಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಈ.ಹನುಮಂತಪ್ಪ, ಜಿಲ್ಲಾ ಸಮಿತಿ ಸದಸ್ಯರಾದ ಲಿಂಗಪ್ಪ, ಗ್ರಾಮಸ್ತರಾದ ಚಿದಾನಂದ, ಗಾದಿಲಿಂಗಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
ರಾಮೇಶ್ವರಂ ಕೆಫೆ ಪ್ರಕರಣ: ಬಳ್ಳಾರಿಯಲ್ಲಿ NIA ಅಧಿಕಾರಿಗಳ ಶೋಧ, ಓರ್ವ ವಶಕ್ಕೆ
Bellary; “ಬ್ರದರ್ಸ್’ ವಿಧಾನಸೌಧಕ್ಕೇ ಬಾಂಬ್ ಇಡ್ತಾರೆ: ಶ್ರೀರಾಮುಲು
Bellary; ಕಾಂಗ್ರೆಸ್ ಗ್ಯಾರಂಟಿ ಬಳಿಕ ಮೋದಿ ಗ್ಯಾರಂಟಿ ಬಂದಿದೆ: ಸಚಿವ ನಾಗೇಂದ್ರ ವಾಗ್ದಾಳಿ
Rameshwaram Cafe Case; ಬಾಂಬರ್ ವೇಷ ತೊಡಿಸಿ ಪತ್ತೆ ಹಚ್ಚಲು ಶತಪ್ರಯತ್ನ
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ