ಕುರುಗೋಡು: ಕೇಂದ್ರ ಸರ್ಕಾರ ಮಂಡಿಸಲಿರುವ ವಿದ್ಯುತ್ ಕಾಯ್ದೆ ಪ್ರತಿಗಳು ಸುಟ್ಟು ಆಕ್ರೋಶ
Team Udayavani, Aug 9, 2022, 4:34 PM IST
ಕುರುಗೋಡು: ಸಮೀಪದ ಶ್ರೀಧರಗಡ್ಡೆ ಗ್ರಾಮದಲ್ಲಿ ಎ. ಐ. ಕೆ.ಕೆ.ಎಂ.ಎಸ್ ರೈತ ಸಂಘಟನೆ ವತಿಯಿಂದ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಲಿರುವ ವಿದ್ಯುತ್ (ತಿದ್ದುಪಡಿ) ಕಾಯ್ದೆ 2022 ರ ಪ್ರತಿಗಳನ್ನು ಸುಟ್ಟು ಹಾಕಿ ಅದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡಿ, ವಿದ್ಯುತ್ ತಿದ್ದುಪಡಿ ಕಾಯ್ದೆ 2022 ಇದು ಖಾಸಗೀಕರಣ ನೀತಿಯಾಗಿದೆ. ಈ ಹಿಂದೆ ಬಡವರಿಗೆ ಸಿಗುತ್ತಿದ್ದ ಭಾಗ್ಯಜೋತಿ, ಕುಟೀರ ಜ್ಯೋತಿ ಸೇರಿದಂತೆ ಹಲವಾರು ಯೋಜನೆಗಳು ಈ ನೀತಿಯಿಂದ ನಾಶವಾಗಲಿವೆ. ಇಂದು ರೈತರ ಬೆಳೆಗಳಿಗೆ ಬೆಂಬಲ ಬೆಲೆ ಸಿಗದೆ ನಷ್ಟದಲ್ಲಿರುವಾಗ, ಕೇಂದ್ರ ಸರ್ಕಾರ ಅವರ ಕಷ್ಟಗಳಿಗೆ ಹೆಗಲು ಕೋಡಬೇಕಾಗಿತ್ತು ಅದರ ಬದಲು ರೈತರ ಪಂಪ್ ಸೆಟ್ ಗಳಿಗೆ ಉಚಿತವಾಗಿ ನೀಡುತ್ತಿದ್ದ 10 ಹೆಚ್. ಪಿ. ವಿದ್ಯುತ್ ಕೂಡಾ ರೈತರಿಂದ ಕಿತ್ತುಕೊಳ್ಳುತ್ತಿರುವುದು ನೊಂದ ಜೀವಗಳಿಗೆ ಸಿಡಿಲು ಬಡಿದಂತಾಗಿದೆ ಎಂದು ಹೇಳಿದರು.
ಜಿಲ್ಲಾ ಉಪಾಧ್ಯಕ್ಷ ಬಸಣ್ಣ ಮಾತನಾಡಿ, ವಿದ್ಯುತ್ ಖಾಸಗೀಕರಣದಿಂದ ಇನ್ನು ಮುಂದೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಶುದ್ಧಿಕರಿಸಿದ ಕುಡಿಯುವ ನೀರು ಸೇರಿದಂತೆ ವಿದ್ಯುತ್ ಬಳಸಿಕೊಂಡು ಉಚಿತವಾಗಿ ಸಿಗುತ್ತಿದ್ದ ಹಲವಾರು ಯೋಜನೆಗಳು ದುಬಾರಿಯಾಗಲಿವೆ. ಇನ್ನು ಮುಂದೆ ಸಾರ್ವಜನಿಕ ಸ್ವತ್ತಾಗಿದ್ದ ವಿದ್ಯುತ್ ಹಂತ ಹಂತವಾಗಿ ಏಕಸೌಮ್ಯ ಬಂಡವಳಿಗಾರರ ಪಾಲಾಗಲಿದೆ. ಈ ಬಂಡವಾಳಿಗರು ಇದರ ಸಂಪೂರ್ಣ ಲಾಭ ಪಡೆಯಲು ಜನರ ರಕ್ತ ಹೀರುವುದು ಖಚಿತ. ಕೇಂದ್ರ ಸರ್ಕಾರದ ಬಂಡವಾಳಿಗರ ಪರವಾದ ಇಂತ ನೀತಿಗಳ ವಿರುದ್ಧ ದೇಶದ ಜನಸಾಮಾನ್ಯರು ಸಿಡಿದೇಳಬೇಕು ಮತ್ತು ಬಲಿಷ್ಠ ಹೋರಾಟಗಳನ್ನು ಕಟ್ಟಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಈ.ಹನುಮಂತಪ್ಪ, ಜಿಲ್ಲಾ ಸಮಿತಿ ಸದಸ್ಯರಾದ ಲಿಂಗಪ್ಪ, ಗ್ರಾಮಸ್ತರಾದ ಚಿದಾನಂದ, ಗಾದಿಲಿಂಗಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?