ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆ


Team Udayavani, Nov 27, 2021, 12:39 PM IST

ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆ

ಹೊಸಪೇಟೆ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಮೂರು ಕೃಷಿ ಕಾಯ್ದೆಗಳನ್ನು ಸಾಂವಿಧಾನಾತ್ಮಕವಾಗಿ ವಾಪಾಸ್‌ ಪಡೆಯಬೇಕು ಹಾಗೂ ರಾಜ್ಯ ಸರ್ಕಾರ ಕೂಡ ಈ ಕಾಯ್ದೆಗಳನ್ನು ಮತ್ತು ಜಾನುವಾರು ಹತ್ಯೆ ಕಾಯ್ದೆಯನ್ನು ವಾಪಾಸ್‌ ಪಡೆಯಬೇಕು ಎಂದು ಆಗ್ರಹಿಸಿ ಸಂಯುಕ್ತ ರೈತ ಹೋರಾಟ ಸಮಿತಿ ಕರ್ನಾಟಕದ ವತಿಯಿಂದ ನಗರದ ಟಿಬಿಡ್ಯಾಂನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಸಂಚಾರ ತಡೆದು ರೈತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೃಷಿ ಕಾಯ್ದೆ, ಭೂಸುಧಾರಣಾ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಾಸ್‌ ಪಡೆಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾಯ್ದೆಗಳನ್ನು ವಾಪಾಸ್‌ ಪಡೆಯಲಾಗುವುದು ಎಂದು ಭರವಸೆ ನೀಡಿದ್ದಾರೆ. ಆದರೆ, ಸಂಸತ್‌ನ ಅಧಿ ವೇಶನದಲ್ಲಿ ಮಂಡಿಸಿ ಕಾಯ್ದೆಯನ್ನು ಸಂವಿಧಾನಾತ್ಮಕವಾಗಿ ವಾಪಾಸ್‌ ಪಡೆಯಬೇಕು. ರಾಜ್ಯದಲ್ಲಿ ಈ ಕಾಯ್ದೆಗಳನ್ನು ಸುಗ್ರೀವಾಜ್ಞೆ ಹೊರಡಿಸಿ ಕಾಯ್ದೆ ಮಾಡಲಾಗಿದೆ. ಈ ಕಾಯ್ದೆಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ವಾಪಾಸ್‌ ಪಡೆಯಬೇಕು. ಜಾನುವಾರು ಹತ್ಯೆ ಕಾಯ್ದೆಯನ್ನೂ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ರೈತರ ಉತ್ಪನ್ನಗಳಿಗೆ ಸಮರ್ಪಕ ಬೆಲೆ ನಿಗದಿಯಾಗುತ್ತಿಲ್ಲ. ವೈಜ್ಞಾನಿಕ ಬೆಲೆ ನಿಗದಿಗೊಳಿಸಬೇಕು. ರೈತರಿಗೆ ವಿಕೋಪದಲ್ಲಿ ಬೆಳೆ ಹಾನಿ ಪರಿಹಾರವನ್ನು ಸಮರ್ಪಕವಾಗಿ ನೀಡುತ್ತಿಲ್ಲ. ಸಮರ್ಪಕ ಪರಿಹಾರ ಒದಗಿಸಬೇಕು. ರೈತ ವಿರೋಧಿ ನೀತಿಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಬಿಡಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಸಂಕಷ್ಟಕ್ಕೆ ಕಿವಿಗೊಡಬೇಕು. ಕೃಷಿ ಕಾಯ್ದೆ ವಿರೋಧಿ ಸಿ 700 ರೈತರು ಹುತಾತ್ಮರಾಗಿದ್ದಾರೆ. ಈ ಹುತಾತ್ಮ ರೈತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಕಾರ್ಪೋರೇಟ್‌ ವಲಯ ಮೆಚ್ಚಿಸುವ ಧೋರಣೆಯನ್ನು ಆಳುವ ಸರ್ಕಾರಗಳು ಕೈಬಿಡಬೇಕು ಎಂದು ಒತ್ತಾಯಿಸಿದರು.

ಹೊಸಪೇಟೆ, ಕಂಪ್ಲಿ, ಮರಿಯಮ್ಮನಹಳ್ಳಿ, ಗಾದಿಗನೂರು, ಕಮಲಾಪುರ ಸೇರಿದಂತೆ ವಿವಿಧ ಗ್ರಾಮಗಳಿಂದ ಬಂದಿದ್ದ ರೈತರು ನಗರದ ಡ್ಯಾಂ ರಸ್ತೆಯ ಸಾಯಿಬಾಬಾ ದೇವಸ್ಥಾನದಿಂದ ರಾಷ್ಟ್ರೀಯ ಹೆದ್ದಾರಿ 50ರವರೆಗೂ ಮೆರವಣಿಗೆ ನಡೆಸಿದರು. ಬಳಿಕ ಹೆದ್ದಾರಿ ಗಣೇಶ್‌ ದೇವಸ್ಥಾನದ ಬಳಿ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಮುಖಡರಾದ ಜೆ. ಕಾರ್ತಿಕ್‌, ಸಣ್ಣಕ್ಕಿ ರುದ್ರಪ್ಪ, ದೇವರಮನಿ ಮಹೇಶ, ಗಂಟೆ ಸೋಮು, ಜಂಬಯ್ಯ ನಾಯಕ, ಆರ್‌. ಭಾಸ್ಕರರೆಡ್ಡಿ, ಸಣ್ಣಮಾರೆಪ್ಪ, ನಾಗರತ್ನಮ್ಮ, ಕೆ.ಎಂ. ಸಂತೋಷ, ಕಾಳಿದಾಸ, ರುದ್ರಪ್ಪ ಇದ್ದರು. ಟ್ರಾಫಿಕ್‌ ಜಾಮ್‌, ಎನ್‌ಇಟಿ ಪರೀಕ್ಷೆ: ಪ್ರತಿಭಟನೆ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು. ಆಸ್ಪತ್ರೆಗೆ ತೆರಳುತ್ತಿದ್ದ ರೋಗಿಗಳಿಗೆ ಪೊಲೀಸರು ನೆರವಾದರು. ಇನ್ನೂ ಎನ್‌ಇಟಿ ಪರೀಕ್ಷೆ ಬರೆಯಲು ಬಳ್ಳಾರಿಗೆ ತೆರಳುತ್ತಿದ್ದ ನಾಲ್ಕಾರು ವಿದ್ಯಾರ್ಥಿಗಳು ಟ್ರಾಫಿಕ್‌ ಜಾಮ್‌ನಿಂದಾಗಿ ಪರೀಕ್ಷೆ ಬರೆಯದೇ ಕೊಪ್ಪಳಕ್ಕೆ ವಾಪಾಸಾದರು.

ಪೊಲೀಸರ-ರೈತರ ವಾಗ್ವಾದ: ರೈತರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆಯಿತು. ಪ್ರತಿಭಟನೆ ಸ್ಥಗಿತಗೊಳಿಸಲು ಪೊಲೀಸರು ಹೇಳುತ್ತಿದ್ದಂತೆಯೇ ಪೊಲೀಸರು ಹಾಗೂ ಪ್ರತಿಭಟನಾನಿರತ ರೈತರ ನಡುವೆ ಮಾತಿನಚಕಮಕಿ ನಡೆಯಿತು. ಬಂಧನ ಮಾಡುತ್ತೇವೆ ಎಂದು ಪೊಲೀಸರು ಆವಾಜ್‌ ಕೂಡ ಹಾಕಿದರು.

ಈ ವೇಳೆ ರೈತ ಮುಖಂಡರು ಹಾಗೂ ಡಿವೈಎಸ್ಪಿ ವಿಶ್ವನಾಥರಾವ್‌ ಕುಲಕರ್ಣಿ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದರು. ಬಳಿಕ ಪ್ರತಿಭಟನಾಕಾರರು ಹೋರಾಟ ಮುಗಿಸಿದರು. ಆನಂದ್‌ ಸಿಂಗ್‌ ಭೇಟಿ: ಹೊಸಪೇಟೆಯ ಸಾಯಿಬಾಬಾ ದೇಗುಲದ ಬಳಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದ ರೈತರನ್ನು ಕಂಡ ಸಚಿವ ಆನಂದ್‌ ಸಿಂಗ್‌ ಅವರು ಅವರ ಬಳಿ ಆಗಮಿಸಿ ಮಾತನಾಡಿಸಿದರು. ಬಳಿಕ ಅವರು ಹಗರಿಬೊಮ್ಮನಹಳ್ಳಿಗೆ ಎಂಎಲ್ಸಿ ಎಲೆಕ್ಷನ್‌ ಪ್ರಚಾರಕ್ಕೆ ತೆರಳಿದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.