ಸಿರುಗುಪ್ಪದಲ್ಲಿ ಭತ್ತ ಉಳಿಸಿಕೊಳ್ಳಲು ಅನ್ನದಾತರ ಹರಸಾಹಸ!


Team Udayavani, Mar 23, 2018, 11:04 AM IST

bell-3.jpg

ಸಿರುಗುಪ್ಪ: ಅಸರ್ಮಕ ವಿದ್ಯುತ್‌ ಪೂರೈಕೆಯಿಂದ ಬೇಸತ್ತ ರೈತರು ನಾಟಿ ಮಾಡಿದ ಭತ್ತ ಉಳಿಸಿಕೊಳ್ಳಲು ಡೀಸೆಲ್‌  ಮೋಟಾರ್‌ ಗಳಿಂದ ನೀರೆತ್ತಲು ಮೊರೆ ಹೋಗಿದ್ದು, ಈಗ ಡೀಸೆಲ್‌ ಮೋಟಾರ್‌ಗಳಿಗೆ ಭಾರಿ ಬೇಡಿಕೆ ಬಂದಿದೆ.

ತಾಲೂಕಿನ ಎಚ್‌.ಹೊಸಳ್ಳಿ, ಹಾಗಲೂರು, ದರೂರು, ಕರೂರು, ಗೋಸಬಾಳು, ಕೂರಿಗನೂರು, ಬೂದುಗುಪ್ಪ ಮತ್ತು ಮೈಲಾಪುರ ಕ್ಯಾಂಪ್‌ ಭಾಗದ ದೊಡ್ಡ ಹಳ್ಳದ ದಂಡೆಯಲ್ಲಿರುವ ಏತ ನೀರಾವರಿ ಯೋಜನೆಯಿಂದ ಸುಮಾರು ನಾಲ್ಕು ಸಾವಿರ ಎಕರೆ ಪ್ರದೇಶದಲ್ಲಿ ನಾಟಿ ಮಾಡಿದ ಭತ್ತದ ಗದ್ದೆಗಳಿಗೆ ನೀರುಣಿಸಲು ಸಮರ್ಪಕ ವಿದ್ಯುತ್‌ ಪೂರೈಕೆ ಇಲ್ಲದೆ ರೈತರು ಪರ್ಯಾಯವಾಗಿ ಹಳ್ಳದಲ್ಲಿನ ನೀರೆತ್ತಲು ಡೀಸೆಲ್‌ ಮೋಟಾರ್‌ಗಳ ಮೂಲಕ ನೀರೆತ್ತುತ್ತಿದ್ದಾರೆ. ಈ ಭಾಗದ ರೈತರು ಬೆಳೆದ ಭತ್ತದ ಗದ್ದೆಗಳಿಗೆ ಸಮರ್ಪಕ ನೀರುಣಿಸಲು ಕಳೆದ 15 ದಿನಗಳಿಂದ ವಿದ್ಯುತ್‌ ಸಮಸ್ಯೆಯಾಗಿದ್ದು, ಭತ್ತದ ಗದ್ದೆಗಳಿಗೆ ನೀರುಣಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ
ನಾಡಿ ಮಾಡಿದ ಭತ್ತವು ಒಣಗುತ್ತಿದ್ದು, ಹೇಗಾದರೂ ಮಾಡಿ ತಾವು ಬೆಳೆದ ಬೆಳೆಯನ್ನು ಉಳಿಸಿಕೊಳ್ಳಬೇಕೆಂದು ರೈತರು ಡೀಸೆಲ್‌ ಮೋಟಾರುಗಳಿಂದ ನೀರೆತ್ತಿ ಬೆಳೆಗೆ ಬಿಡಲು ಮುಂದಾಗಿದ್ದಾರೆ. ಹಳ್ಳವನ್ನು ನಂಬಿ ನಾಟಿ ಮಾಡಿದ್ದ ರೈತರಿಗೆ ಹಳ್ಳದಲ್ಲಿ ನೀರಿದ್ದರೂ ವಿದ್ಯುತ್‌ ಸಮಸ್ಯೆ ಕಾಡುತ್ತಿದ್ದರಿಂದ ಬೆಳೆದ ಭತ್ತದ ಗದ್ದೆಗಳಿಗೆ ನೀರಿಲ್ಲದೆ ಬೆಳೆ ಒಣಗುತ್ತಿರುವುದರಿಂದ ಅನ್ನದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವು ಭತ್ತದ ಗದ್ದೆಗಳು ತೆನೆ ಬಿಡುವ ಹಂತದಲ್ಲಿದ್ದರೆ, ಇನ್ನೂ ಕೆಲವು ತೆನೆ ಬಿಟ್ಟಿದ್ದು, ನೀರಿಲ್ಲದೆ ಕಾಳು ತುಂಬುತ್ತಿಲ್ಲ. ಆದ್ದರಿಂದ ರೈತರು ಬೆಳೆ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. 

ಮೋಟಾರ್‌ಗಳಿಗೆ ಭಾರಿ ಬೇಡಿಕೆ: ರೈತರು ಬೆಳೆ ಉಳಿಸಲು ಡೀಸೆಲ್‌ ಮೋಟಾರ್‌ಗಳಿಗೆ ಮೊರೆ ಹೋಗಿರುವುದರಿಂದ ಡೀಸೆಲ್‌ ಮೋಟಾರ್‌ಗಳಿಗೆ ಭಾರಿ ಬೇಡಿಕೆ ಬಂದಿದೆ. ಡೀಸೆಲ್‌ ಮೋಟಾರ್‌ಗಳಿಗೆ ಒಂದು ದಿನಕ್ಕೆ ಬಾಡಿಗೆ 1 ಸಾವಿರದಿಂದ 2 ಸಾವಿರಕ್ಕೆ ತಲುಪಿದೆ. ಮೋಟಾರ್‌ ಗಳ ಕೊರತೆಯಿಂದ ಕೆಲವರು ಹೊಸ ಮೋಟಾರ್‌ನ್ನೆ ಖರೀದಿಸಿದರೆ, ಇನ್ನೂ ಕೆಲವರು ಟ್ರಾÂಕ್ಟರ್‌ಗಳ ಇಂಜಿನ್‌
ಸಹಾಯದಿಂದ ನೀರೆತ್ತಲು ಮುಂದಾಗಿದ್ದಾರೆ. ಈಗಾಗಲೆ ರೈತರು ತಮ್ಮ ಬೆಳೆಗೆ ಸುಮಾರು 15ರಿಂದ 20 ಸಾವಿರ ರೂ.
ವೆಚ್ಚ ಮಾಡಿದ್ದು, ಭತ್ತದ ಗದ್ದೆಗಳಿಗೆ ಒಂದೆರಡು ಬಾರಿ ನೀರುಣಿಸಿದರೆ ಬೆಳೆಯು ಕೈ ಸೇರುತ್ತದೆ ಹೀಗಾಗಿ ಹಳ್ಳದ ದಂಡೆಯಲ್ಲಿರುವ ರೈತರು ಎಕರೆ ಭೂಮಿಗೆ ನೀರುಣಿಸಲು 500 ರೂ. ಖರ್ಚಾದರೆ, ಹಳ್ಳದಿಂದ ದೂರದ ಗದ್ದೆಗಳಿಗೆ ಪೈಪ್‌ಲೈನ್‌ ಮೂಲಕ ನೀರು ಹರಿಸಲು ಎಕರೆಗೆ 1400 ರೂ.ವರೆಗೆ ವೆಚ್ಚ ಮಾಡಬೇಕಾಗಿದೆ.

ಅಸಮರ್ಪಕ ವಿದ್ಯುತ್‌ ಪೂರೈಕೆಯಿಂದ ನಮ್ಮ ಬೆಳೆ ಉಳಿಸಿಕೊಳ್ಳಲು ಡೀಸೆಲ್‌ ಮೋಟಾರ್‌ಗಳ ಮೊರೆ ಹೋಗಬೇಕಾಗಿದೆ. ಖರ್ಚು ಹೆಚ್ಚಾದರೂ ಅನಿವಾರ್ಯವಾಗಿ ಡೀಸೆಲ್‌ ಮೋಟಾರಿನಿಂದ ನೀರು ಹರಿಸಿ ಬೆಳೆ ಉಳಿಸುವ ಪ್ರಯತ್ನ ಮಾಡುತ್ತಿದ್ದೇವೆ.
ಮಲ್ಲಿಕಾರ್ಜುನ, ಎಚ್‌.ಹೊಸಳ್ಳಿ ಗ್ರಾಮದ ರೈತ.

ಜೆಸ್ಕಾಂ ಇಲಾಖೆಯಿಂದ ನಿಯಮದ ಪ್ರಕಾರ ದಿನಕ್ಕೆ ಏಳು ತಾಸು ವಿದ್ಯುತ್‌ ಪೂರೈಕೆ ಮಾಡುತ್ತಿದ್ದೇವೆ. ಈ ಭಾಗದಲ್ಲಿ ಯಾವುದೇ ಲೋಡ್‌ ಶೆಡ್ಡಿಂಗ್‌ ಮಾಡುತ್ತಿಲ್ಲ.
ವಿಜಯ್‌ಕುಮಾರ್‌,ಜೆಸ್ಕಾಂ ಎಇಇ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.