ಕುರುಗೋಡು: ಆಕಸ್ಮಿಕ ಬೆಂಕಿಯಿಂದ ಸುಟ್ಟು ಕರಕಲಾದ ಮನೆ
Team Udayavani, Feb 22, 2022, 5:44 PM IST
ಕುರುಗೋಡು: ಆಕಸ್ಮಿಕ ಬೆಂಕಿಯಿಂದ ಗುಡಿಸಲು ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಸಮೀಪದ ಹಾವಿನಹಾಳು ಗ್ರಾಮದಲ್ಲಿ ಜರುಗಿದೆ.
ಗುಡಿಸಲು ಭಸ್ಮವಾಗಿರುವುದು ಹಾವಿನಹಾಳು ಗ್ರಾಮದ ಸುಭಾಷನದು ಎಂದು ತಿಳಿದು ಬಂದಿದೆ. ಹಗಲಿನ ಸಮಯ ಆಗಿದ್ದರಿಂದ ಮಕ್ಕಳು ಶಾಲೆಗೆ ತೆರಳಿದ್ದರು, ಮತ್ತು ಮನೆಯವರು ಕೆಲಸದ ನಿಮ್ಮಿತ್ತ ಹೊರಗಡೆ ಹೋದ ಸಂದರ್ಭದಲ್ಲಿ ಆಕಸ್ಮಿಕವಾಗಿ ಈ ಅವಘಡ ಸಂಭವಿಸಿದೆ.
ಮನೆಯಲ್ಲಿ ಇದ್ದ ದವಸ ದಾನ್ಯಗಳು ಹಾಗೂ ಉಡುಗೆ ತೋಡುಗೆಗಳು ಸುಟ್ಟು ಭಸ್ಮ ವಾಗಿವೆ. ಯಾವುದೇ ಪ್ರಾಣಹಾನಿ ಆಗಿಲ್ಲ. ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಗ್ರಾಪಂ ಆಡಳಿತ ಭೇಟಿ ನೀಡಿ ಪ್ರಾಥಮಿಕ ವರದಿಯನ್ನು ಸಂಗ್ರಹಿಸಿದ್ದಾರೆ.
ಸುದ್ದಿ ತಿಳಿದಕ್ಷಣ ಶಾಸಕರ ಪುತ್ರ ಎಂ. ಎಸ್. ಸಣ್ಣ ಸಿದ್ದಪ್ಪ ಭೇಟಿ ನೀಡಿ ಸಂತ್ರಸ್ತರಿಗೆ ಆಹಾರ ದಾನ್ಯ, ಬಟ್ಟೆ ಮತ್ತಿತರೆ ಅಗತ್ಯ ವಸ್ತುಗಳನ್ನು ತಮ್ಮ ಸ್ವಂತ ನೆರೆವೆನಿಂದ ವಿತರಿಸಿ ನೈತಿಕ ಸ್ಥೈರ್ಯ ತುಂಬಿದ್ದಾರೆ. ಅಲ್ಲದೆ ತಾಲೂಕು ಆಡಳಿತದಿಂದ ದೊರೆಯುವ ಸಹಾಯ ದನವನ್ನು ಕೊಡಿಸುವುದಾಗಿ ಹಾಗೂ ಗ್ರಾಪಂ ಯಿಂದ ಮನೆಯನ್ನು ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ಬಿಜೆಪಿ ಮುಖಂಡರು ಸೇರಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು
ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು
Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು
Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು
Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ