ಗುಳೆ ತಡೆದ ಉದ್ಯೋಗ ಖಾತ್ರಿ!


Team Udayavani, May 19, 2018, 4:22 PM IST

bell-1.jpg

ಹಗರಿಬೊಮ್ಮನಹಳ್ಳಿ: ಬರದ ಬೇಗೆಗೆ ಬೆಂದಿರುವ ತಾಲೂಕಿನ ಕೂಲಿ ಕಾರ್ಮಿಕರು ಮತ್ತು ಬಡವರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ನೀಡುವ ಕೆಲಸ ಹೊಟ್ಟೆ ತುಂಬಿಸುತ್ತಿದೆ.

ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಂತರ್ಜಲ ಪ್ರಮಾಣ ಕುಸಿತವಾಗುತ್ತಿರುವುದರಿಂದ ಕೂಲಿ ಕಾರ್ಮಿಕರಿಗೆ ಹೊಲದಲ್ಲಿ ಕೆಲಸ ಇಲ್ಲದಂತಾಗಿದೆ. ಅಲ್ಪಸ್ವಲ್ಪ ಹೊಲಗಳನ್ನು ಹೊಂದಿರುವ ರೈತರು ಕೂಡ ಸೆಲಿಕೆ, ಗುದ್ದಲಿ ಹಿಡಿದು ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗುತ್ತಿದ್ದಾರೆ. ತಂಬ್ರಹಳ್ಳಿಯ ತೋಂಟದಾರ್ಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿರುವ ಹಿನ್ನೀರು ಪ್ರದೇಶದಲ್ಲಿನ ಹಳ್ಳದ ಹೂಳು ತೆಗೆಯಲು ತಾಲೂಕಿನ ಆರು ಗ್ರಾಪಂ ವ್ಯಾಪ್ತಿಯ ಕೂಲಿ ಕಾರ್ಮಿಕರಿಗೆ ಕೆಲಸ ನೀಡಿದ್ದು, ಕಾರ್ಮಿಕರ ಜೀವನಕ್ಕೆ ಆಸರೆಯಾದಂತಾಗಿದೆ. ಇದರ ಜೊತೆಗೆ ಟ್ರ್ಯಾಕ್ಟರ್‌ ಹೊಂದಿರುವ ರೈತರಿಗೂ ಕೂಡ ಯೋಜನೆ ವರದಾನವಾಗಿದೆ. ತಂಬ್ರಹಳ್ಳಿ ಭಾಗದ ರೈತರು ಹೂಳೆತ್ತಿರುವ ಫಲವತ್ತತೆಯ ಕಪ್ಪು ಮಣ್ಣನ್ನು ತಮ್ಮ ಹೊಲಗಳಿಗೆ ಒಯ್ಯುತ್ತಿರುವುದು ಭೂಮಿಯ ಫಲವತ್ತತೆಗೆ ಪೂರಕವಾಗಿದೆ. ಹಳ್ಳದಲ್ಲಿ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಕೆಲಸದ ಎನ್‌ಎಂಆರ್‌ ತೆಗೆಯುವ ಕಂಪ್ಯೂಟರ್‌ ಆಪರೇಟರ್‌ಗಳಿಗೆ ಕೆಲಸದ ಒತ್ತಡವಿದ್ದರೂ ಬೇಸರ ಮಾಡಿಕೊಳ್ಳದೆ ಕಾರ್ಮಿಕರ ಕೆಲಸಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ.

ತಾಲೂಕಿನ ತಂಬ್ರಹಳ್ಳಿ, ಬಾಚಿಗೊಂಡನಹಳ್ಳಿ, ಗದ್ದಿಕೇರಿ, ಮೋರಿಗೇರಿ, ಮುತ್ರೂರು, ಬನ್ನಿಗೋಳ ಗ್ರಾಪಂ ಕೂಲಿ ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾರೆ. ಕೆಲಸಕ್ಕೆ 7.5 ಕೋಟಿ ರೂ. ಮೊತ್ತ ವಿನಿಯೋಗಿಸಲಾಗುತ್ತದೆ. ಈ ಕೆಲಸದಿಂದ ಅಂತರ್ಜಲ ಪ್ರಮಾಣ ಜಾಸ್ತಿ ಆಗುವುದರ ಜೊತೆಗೆ ಕಾರ್ಮಿಕರಿಗೆ ಕೆಲಸ ನೀಡುವ ಉದ್ದೇಶ ಈಡೇರಿದಂತಾಗಿದೆ ಎಂದು ತಂಬ್ರಹಳ್ಳಿ ಗ್ರಾಪಂ ಪಿಡಿಒ ಶಾಂತನಗೌಡ ತಿಳಿಸಿದ್ದಾರೆ. 

ತಾಪಂ ಇಒ ಮಲ್ಲಾ ನಾಯ್ಕ ಅವರು ಬರದ ಪರಿಸ್ಥಿತಿ ಅರಿತು, ತಾಲೂಕಿನ ಪ್ರತಿಯೊಬ್ಬ ಪಿಡಿಒಗೆ ಕೆಲಸ ನೀಡಲು ಆದೇಶಿಸಿದ್ದಾರೆ. ಈ ಹಿಂದೆ ಉದ್ಯೋಗ ಖಾತ್ರಿ ಯೋಜನೆ ಕೇವಲ ಗ್ರಾಪಂ ಸದಸ್ಯರ ಪಾಲಾಗುತ್ತಿದ್ದನ್ನು ತಿಳಿದ ನಾಯ್ಕವರು, ಈಗ ಕೂಲಿ ಕಾರ್ಮಿಕರಿಗೆ ಕೆಲಸ ಸಿಗುವಂತೆ ಮಾಡಿದ್ದಾರೆ. 

ತಂಬ್ರಹಳ್ಳಿ ಹಳ್ಳದಲ್ಲಿರುವ ಚೆಕ್‌ಡ್ಯಾಂ ಏರಿ ಏರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಇದರಿಂದ ಅಂತರ್ಜಲ ಪ್ರಮಾಣ ಹೆಚ್ಚಾಗಿ ಸುತ್ತಲಿನ ಬೋರ್‌ವೆಲ್‌ಗಳು ರಿಚಾರ್ಜ್‌ ಆಗುತ್ತವೆ. ಈ ಹಳ್ಳದಲ್ಲಿ ಕೂಲಿ ಕಾರ್ಮಿಕರಿಗೆ ಕನಿಷ್ಠ ಎರಡು ತಿಂಗಳು ಕೆಲಸ ಸಿಗುತ್ತದೆ. ಕೆಲಸದ ಅಗತ್ಯತೆ ಇದ್ದಲಿ ನಿರಂತರ ಕೆಲಸ ನೀಡಲಾಗುವುದು. ಹಳ್ಳದ
ಏರಿ ಏರಿಸಿ ಪಿಚ್ಚಿಂಗ್‌ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗುವುದು. 
ಬಿ.ಮಲ್ಲಾನಾಯ್ಕ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ

ಇರೋ ಸ್ವಲ್ಪ ಹೊಲದಲ್ಲಿ ಏನಾದ್ರೂ ಮಾಡಿ ಜೀವನ ಮಾಡೋನಾ ಅಂದ್ರ ಏನ್‌ ಬೆಳೆದರೂ ಸರಕಾರದವರು ಒಳ್ಳೇ
ರೇಟ್‌ ಕೊಡಲಿ. ಅದಕ್ಕ ಬಂಡವಾಳ ಇಲ್ಲದ ಉದ್ಯೋಗ ಖಾತ್ರಿ ಯೋಜನೆಯ ಕೆಲಸಕ್ಕಾ ಹೋಗದು ಒಳ್ಳೇದು ಅಂದು ನಾವು ಕೆಲಸಕ್ಕಾ ಹೋಂಟಿವ್ರಿ. ಬರಗಾಲ ಹಿಂಗೇ ಮುಂದುವರಿದರೆ ಜೀವನ ಮಾಡೋದು ಕಷ್ಟ ಐತ್ರಿ.
ಡಣಾಪುರ ದೇವಪ್ಪ, ಕೂಲಿ ಕಾರ್ಮಿಕ 

„ಸುರೇಶ ಯಳಕಪ್ಪನವರ

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.