ತುಂಗಭದ್ರಾ ನದಿಯಲ್ಲಿ ಪ್ರವಾಹ ಇಳಿಮುಖ


Team Udayavani, Aug 19, 2018, 4:04 PM IST

bell-2.jpg

ಕಂಪ್ಲಿ: ಸ್ಥಳೀಯ ಪಟ್ಟಣದ ಕೋಟೆ ಪ್ರದೇಶದಲ್ಲಿ ಕಳೆದ 5 ದಿನಗಳಿಂದ ಮೈದುಂಬಿ ಹರಿಯುತ್ತಿದ್ದ ತುಂಗಭದ್ರ ನದಿಯಲ್ಲಿ ಇಂದು ಬೆಳಿಗ್ಗೆಯಿಂದ ಪ್ರವಾಹದ ಪ್ರಮಾಣ ಕಡಿಮೆಯಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಂಡಿದ್ದು ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ತುಂಗಭದ್ರಾ ಜಲಾಶಯದ ಮೇಲ್ಭಾಗದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ನದಿಗೆ ಸುಮಾರು 90 ಸಾವಿರ ಕ್ಯೂಸೆಕ್‌ ನೀರನ್ನು ಬಿಡುತ್ತಿರುವುದರಿಂದ ಕಂಪ್ಲಿ ಗಂಗಾವತಿ ಸಂಪರ್ಕ ಸೇತುವೆ ಕೆಳಭಾಗದಲ್ಲಿ ನೀರು ಹರಿಯುತ್ತಿರುವುದು ಕಂಡು ಬಂದಿತು.

ಕಂಪ್ಲಿ-ಗಂಗಾವತಿ ಸೇತುವೆ ಮೇಲೆ ನೀರು ಇಲ್ಲದೇ ಇರುವುದರಿಂದ ಕಳೆದ 5 ದಿನಗಳಿಂದ ಪ್ರವಾಹಕ್ಕೆ ನೀರಿನ ಜೊತೆಯೇ ಹರಿದು ಬಂದ ಕಸಕಡ್ಡಿ, ಗಿಡ ಗಂಟೆಗಳು ಸೇತುವೆಯ ಕಂಬಿಗಳಿಗೆ ಸಿಕ್ಕಿಕೊಂಡಿವೆ. ಇದರಿಂದ ಸಾರ್ವಜನಿಕರ ಹಾಗೂ ದ್ವಿಚಕ್ರಗಳ ಸಂಚಾರಕ್ಕೆ ಅಡ್ಡಿಯಾಗಿತ್ತು. ಆದರೆ ಇಂದು ಬೆಳಗ್ಗೆ ಪುರಸಭೆಯ ಸಿಬ್ಬಂದಿಗಳು ಸೇತುವೆಯ ಮೇಲೆ ಸಂಗ್ರಹವಾಗಿದ್ದ ಕಸಕಡ್ಡಿಗಳನ್ನು, ಗಿಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿದರು. ಸೇತುವೆ ಮೇಲೆ ನೀರಿನ ಪ್ರಮಾಣ ಕಡಿಮೆಯಾಗಿದ್ದರಿಂದ ಎರಡು ಕಡೆಯ ಸಾರ್ವಜನಿಕರು ಸಂಭ್ರಮದಿಂದ ಸೇತುವೆಯ ಮೇಲೆ ಓಡಾಡುತ್ತಿರುವುದು
ಕಂಡು ಬಂತು. ಜೊತೆಗೆ ಕಂಪ್ಲಿಯಿಂದ ಗಂಗಾವತಿಗೆ ಹೋಗುವವರು ಹಾಗು ಗಂಗಾವತಿ ಭಾಗದಿಂದ ಕಂಪ್ಲಿ ಕಡೆಗೆ ಬರುವವರು ತಮ್ಮ ಸಾಮಗ್ರಿಗಳನ್ನು ಹೊತ್ತುಕೊಂಡು ಸೇತುವೆ ಮೇಲೆ ನಡೆದುಕೊಂಡು ಬರುವ ಹಾಗೂ ಆಟೋಗಳ ಮೂಲಕ ಸಂಚರಿಸುವ ದೃಶ್ಯ ಸಂಜೆಯವರೆಗೂ ಕಂಡು ಬಂತು. 

ಪುರಸಭೆ ಅಧ್ಯಕ್ಷರಾದ ಎಂ. ಸುಧೀರ್‌, ಕಂದಾಯ ಇಲಾಖೆ ಅಧಿಕಾರಿಗಳು ಸೇತುವೆ ಮೇಲಿನ ಕಸಕಡ್ಡಿ,ಗಿಡ ಮರಗಳ ತೆರವು ಕಾರ್ಯ ಪರಿಶೀಲಿಸಿದರು. ನದಿಯಲ್ಲಿ ಪ್ರವಾಹ ಕಡಿಮೆಯಾಗಿದ್ದರೂ ಯಾವ ಕ್ಷಣದಲ್ಲಿಯಾದರೂ ಪುನಃ ಪ್ರವಾಹ ಬರಬಹುದು ಎಂಬ ಹಿನ್ನೆಲೆಯಲ್ಲಿ ನದಿ ತೀರದಲ್ಲಿ ಕಂಪ್ಲಿ ಪೊಲೀಸ್‌ ಇಲಾಖೆ, ಕಂದಾಯ ಇಲಾಖೆ, ಪುರಸಭೆ ಸಿಬ್ಬಂದಿ ಕಟ್ಟೆಚ್ಚರ ವಹಿಸಿದ್ದರು.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.