ಫ್ಲೋರೋಸಿಸ್ ತಡೆ-ನಿಯಂತ್ರಣ ಕಾರ್ಯಕ್ರಮ
ರೋಗಿಗಳಿಗೆ ಗಾಲಿ ಕುರ್ಚಿ ವಿತರಣೆ
Team Udayavani, May 11, 2022, 2:15 PM IST
ಬಳ್ಳಾರಿ: ರಾಷ್ಟ್ರೀಯ ಫ್ಲೋರೋಸಿಸ್ ತಡೆ ಹಾಗೂ ನಿಯಂತ್ರಣ ಕಾರ್ಯಕ್ರಮದ ಅಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಮೂಳೆ ಫ್ಲೋರೊಸಿಸ್ನಿಂದ ಗುರುತಿಸಲ್ಪಟ್ಟ ರೋಗಿಗಳಿಗೆ ಗಾಲಿ ಕುರ್ಚಿ ವಿತರಣಾ ಕಾರ್ಯಕ್ರಮವನ್ನು ಮಂಗಳವಾರದಂದು ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ| ಎಚ್.ಎಲ್.ಜನಾರ್ಧನ್ ಅವರು ಮೂಳೆ ಫ್ಲೋರೊಸಿಸ್ನಿಂದ ಗುರುತಿಸಲ್ಪಟ್ಟ ರೋಗಿಗಳಿಗೆ ಗಾಲಿ ಕುರ್ಚಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಯಲ್ಲಿ ವಿವಿಧ ಗ್ರಾಮಗಳಲ್ಲಿ ನೀರಿನಲ್ಲಿ ಕಂಡುಬರುವಂಥ ಫ್ಲೊರೋಸಿಸ್ ಪ್ರಮಾಣವನ್ನು ಪರೀಕ್ಷೆ ಮಾಡಲಾಗುತ್ತಿದ್ದು, ನಿರಂತರವಾಗಿ ಆರೋಗ್ಯ ಜಾಗೃತಿಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ವಿಶೇಷವಾಗಿ ಮೂಳೆ ಮತ್ತು ದಂತ ಫ್ಲೋರೊಸಿಸ್ನ ತೊಂದರೆಯನ್ನು ನಿರ್ವಹಿಸಲು ಹಾಗೂ ಅದನ್ನು ನಿಯಂತ್ರಿಸಲು ಸಾರ್ವಜನಿಕರು ಶುದ್ಧೀಕರಿಸಿದ ನೀರನ್ನು ಕುಡಿಯಬೇಕು ಹಾಗೂ ಕಿತ್ತಳೆ, ನಿಂಬೆ, ಹಸಿರು ಸೊಪ್ಪು, ಮೊಳಕೆಕಾಳು, ಹಾಲು, ಬೆಲ್ಲ ಸೇವನೆಯಿಂದ ಫ್ಲೋರೊಸಿಸ್ನನ್ನು ಕಾಯಿಲೆಯನ್ನು ನಿಯಂತ್ರಿಸಬಹುದು ಹಾಗೂ ವಿಶೇಷವಾಗಿ ಹೆಚ್ಚು ಫ್ಲೋರೈಡ್ಯುಕ್ತ ಆಳವಾದ ಕೊಳವೆ ಬಾವಿಯ ನೀರನ್ನು ಕುಡಿಯದಂತೆ ಮುಂಜಾಗ್ರತೆ ವಹಿಸಬೇಕು. ಆಹಾರದಲ್ಲಿ ಕಪ್ಪು ಟೀ, ಅಡಿಕೆ, ಕಪ್ಪು ಉಪ್ಪು ಮತ್ತು ಹೆಚ್ಚು ಫ್ಲೋರೈಡ್ ಅಂಶವಿರುವ ಟೂತ್ಪೇಸ್ಟ್/ ಬಾಯಿ ಸ್ವಚ್ಛಗೊಳಿಸುವ ದ್ರಾವಣಗಳನ್ನು ಬಳಸಬಾರದು ಎಂದು ತಿಳಿಸಿದರು. ಈ ಕಾರ್ಯಕ್ರಮದ ಅಡಿಯಲ್ಲಿ ಸಿರುಗುಪ್ಪ ತಾಲ್ಲೂಕಿನ ಉತ್ತನೂರು ಗ್ರಾಮದ ಮಲ್ಲಯ್ಯ ತಂದೆ ಅಂಜಿನಪ್ಪ ಇವರಿಗೆ ಗಾಲಿ ಕುರ್ಚಿಯನ್ನು ಹಾಗೂ ಮೂರು ತಿಂಗಳುವರೆಗೂ ಆಗುವಷ್ಟು ವಿಟಮಿನ್ ಸಿ ಮತ್ತು ವಿಟಮಿನ್ ಡಿ3, ಕ್ಯಾಲ್ಸಿಯಮ್ ಮಾತ್ರೆಗಳನ್ನು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರ್ಸಿಎಚ್ ಅಧಿಕಾರಿಗಳಾದ ಡಾ| ಅನಿಲ್ ಕುಮಾರ್, ಸಂಡೂರಿನ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ| ಕುಶಲ್ ರಾಜ್, ಜಿಲ್ಲಾ ಫ್ಲೋರೊಸಿಸ್ ಸಲಹೆಗಾರರಾದ ಡಾ| ಆನಂದ್ ಹಾಗೂ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ