ಮಣ್ಣೂರು -ಸೂಗೂರು ಗ್ರಾಮವನ್ನು ಕಂಪ್ಲಿ ತಾಲೂಕಿಗೆ ಸೇರ್ಪಡೆ ಮಾಡಲು ಒತ್ತಾಯ
Team Udayavani, Mar 20, 2022, 3:19 PM IST
ಕುರುಗೋಡು: ಸಿರುಗುಪ್ಪ ತಾಲೂಕಿನ ಗಡಿ ಭಾಗದ ಗ್ರಾಮಗಳಾದ ಮಣ್ಣೂರು -ಸೂಗೂರು ಗ್ರಾಮಗಳನ್ನು ಹತ್ತಿರವಿರುವ ನೂತನ ತಾಲೂಕು ಕಂಪ್ಲಿಗೆ ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಮಣ್ಣೂರು ಸೂಗೂರು ನಿಯೋಗ, ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮದ ಮುಖಂಡರು ಮಾತನಾಡಿ, ನಮ್ಮೂರಿನಿಂದ ಸಿರುಗುಪ್ಪ 35 ಕಿ. ಮೀ ಮತ್ತು ಹೋಬಳಿ ಕೇಂದ್ರ ತೆಕ್ಕಲಕೋಟೆ 40 ಕಿ. ಮೀ ಅಂತರದಲ್ಲಿ ಇದೆ ಕಂಪ್ಲಿ ತಾಲೂಕು ಕೇಂದ್ರ ಕೇವಲ 15 ಕಿ. ಮೀ ಅಂತರದಲ್ಲಿ ಇರುವುದನ್ನು ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ತಿಳಿಸಿದರು.
ಕಂಪ್ಲಿ ತಾಲೂಕು ಕೇಂದ್ರ ಘೋಷಿಸಿದ ಬಳಿಕ ಪ್ರಥಮ ಅಧಿಸೂಚನೆಯಲ್ಲಿ ಮಣ್ಣೂರು -ಸೂಗೂರನ್ನು ಕಂಪ್ಲಿ ತಾಲೂಕಿನಲ್ಲಿ ಸೇರ್ಪಡೆ ಮಾಡಲಾಗಿತ್ತು 2ನೇ ಅಧಿಸೂಚನೆಯಲ್ಲಿ ಕೈ ಬಿಡಲಾಗಿದೆ ಎಂದು ಸಚಿವರಿಗೆ ವಿವರವಾಗಿ ತಿಳಿಸಿದ್ದಾರೆ.
ಈ ಕುರಿತು ಈಗಾಗಲೇ ಎರಡು ಮೂರು ದಿನಗಳ ಹಿಂದೆ ಕಂದಾಯ ಸಚಿವ ಆರ್. ಅಶೋಕ್ ಅವರಿಗೂ ಕೂಡ ಮಣ್ಣೂರು ಸೂಗೂರು ಗ್ರಾಮವನ್ನು ಕಂಪ್ಲಿ ತಾಲೂಕಿಗೆ ಸೇರ್ಪಡೆ ಮಾಡುವಂತೆ ಸಿರುಗುಪ್ಪ ಶಾಸಕ ಸೋಮಲಿಂಗಪ್ಪ ಅವರ ನೇತೃತ್ವದಲ್ಲಿ ನಿಯೋಗ ಮನವಿ ಮಾಡಿ ಅನುಕೂಲ ಮತ್ತು ಅನಾನುಕೂಲ ಬಗ್ಗೆ ವಿವರವಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?