ಜನರ ಸಹಭಾಗಿತ್ವಕ್ಕೆ ವಾರ್ಡ್‌ ಸಮಿತಿ ರಚನೆ

ಜನಾಗ್ರಹ ಸಂಸ್ಥೆ ಸಹಯೋಗ: ಪ್ರೀತಿ ಗೆಹ್ಲೋತ್‌

Team Udayavani, May 12, 2022, 3:10 PM IST

preeti-gehlot

ಬಳ್ಳಾರಿ: ನಗರದ ಅಭಿವೃದ್ಧಿಯಲ್ಲಿ ಸಾರ್ವಜನಿಕರು ಭಾಗವಹಿಸುವ ಸಲುವಾಗಿ ಜನಾಗ್ರಹ ಸಂಸ್ಥೆ ಸಹಯೋಗದಲ್ಲಿ ವಾರ್ಡ್‌ ಸಮಿತಿಗಳನ್ನು ರಚಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋತ್ ಹೇಳಿದರು.

ನಗರದ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಮೇಯರ್‌ ರಾಜೇಶ್ವರಿ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಎಂದರೆ ಕೇವಲ ಪಾಲಿಕೆ ಸದಸ್ಯರು, ಆಯುಕ್ತರಷ್ಟೇ ಆಗಿದ್ದಾರೆ. ನಗರದ ನಾಗೀಕರು ಭಾಗವಹಿಸುವ ಪ್ರಮಾಣ ತೀರಾ ಕಡಿಮೆ ಶೇ.10 ರಷ್ಟು ಇದ್ದು, ಸಾರ್ವಜನಿಕರ ದೃಷ್ಟಿಯಲ್ಲಿ ಇನ್ನು ಏನೇನು ಅಭಿವೃದ್ಧಿಯಾಗಬೇಕು. ಅವರ ನಿರೀಕ್ಷೆ, ಬೇಡಿಕೆಗಳೇನು ಎಂಬುದನ್ನು ಅರಿಯಲು ಈ ವಾರ್ಡ್‌ ಸಮಿತಿಗಳನ್ನು ರಚಿಸಲಾಗುತ್ತಿದೆ. ಈ ಕುರಿತು ಪಾಲಿಕೆಯ ಎಲ್ಲ ಸದಸ್ಯರಿಗೂ ಮಂಗಳವಾರ ಕಾರ್ಯಾಗಾರ ನಡೆಸಿ ಮಾಹಿತಿ ನೀಡಲಾಗಿದೆ. ಪಾಲಿಕೆ ಸದಸ್ಯರನ್ನು ಒಳಗೊಂಡಂತೆ ಒಟ್ಟು 10 ಜನ ಸದಸ್ಯರು ಇರಲಿದ್ದಾರೆ ಎಂದ ಅವರು, ವಾರ್ಡ್‌ ಸಮಿತಿಗೆ ಅರ್ಜಿ ಆಹ್ವಾನಿಸಿದರೆ, ಪ್ರತಿ ವಾರ್ಡ್ ಗಳಿಂದ ಕೇವಲ ಎರಡು ಅರ್ಜಿಗಳು ಸಲ್ಲಿಕೆಯಾಗಿವೆ. ಹೀಗಾಗಿ ಜನಾಗ್ರಹ ಸಂಸ್ಥೆ ಸಹಯೋಗದಲ್ಲಿ ಸಮಿತಿಗಳನ್ನು ರಚಿಸಲಾಗುತ್ತದೆ ಎಂದವರು ತಿಳಿಸಿದರು.

ಜನಾಗ್ರಹ ಸಂಸ್ಥೆಯು ಈಗಾಗಲೇ ಬೆಂಗಳೂರು, ಮಂಗಳೂರು ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿದೆ. ಮಂಗಳೂರಿನಲ್ಲಿ ವಾರ್ಡ್‌ ಸಮಿತಿಯೇ ನಿರ್ವಹಿಸಲು 60 ಲಕ್ಷ ರೂ. ಅನುದಾನ ನೀಡಲಾಗಿದ್ದು, ಯಶಸ್ವಿಯಾದ ಹಿನ್ನೆಲೆಯಲ್ಲಿ ಇದೀಗ 2 ಕೋಟಿ ಅನುದಾನ ನೀಡಲು ಮುಂದಾಗುತ್ತಿದೆ. ಹೀಗಾಗಿ ಬಳ್ಳಾರಿ ಮಹಾನಗರ ಪಾಲಿಕೆಯಲ್ಲೂ ಯಶಸ್ವಿಗೊಳಿಸಲು ಪ್ರಯತ್ನಿಸಲಾಗುವುದು ಎಂದರು.

ಆಸ್ತಿಗಳ ಡಿಜಿಟಲೀಕರಣ

ನಗರದ ಎಲ್ಲಾ ಆಸ್ತಿಗಳನ್ನು ಡಿಜಿಟಲೀಕರಣ ಮಾಡುವ ಮೂಲಕ ಆನ್‌ಲೈನ್‌ ವ್ಯವಸ್ಥೆ ಮಾಡಿ ಈ ಕುರಿತ ಎಲ್ಲ ಮಾಹಿತಿಯನ್ನು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗುವುದು. ದಿನೇದಿನೆ ಬೆಳೆಯುತ್ತಿರುವ ನಗರದಲ್ಲಿ ಖಾಲಿ ನಿವೇಶನಗಳು ಸೇರಿ ಸದ್ಯ 1.25 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ. ಇಷ್ಟು ಆಸ್ತಿಗಳ ಮಾಲೀಕರಿಂದ ನಿರೀಕ್ಷಿತ ಪ್ರಮಾಣದಲ್ಲಿ ತೆರಿಗೆ ಪಾವತಿಯಾಗುತ್ತಿಲ್ಲ. ಕಳೆದ ವರ್ಷ 28 ಕೋಟಿ ರೂ. ಗುರಿ ಹೊಂದಿದ್ದು, ಶೇ. 95ರಷ್ಟು ಸಂಗ್ರಹವಾಗಿದೆ. ಪ್ರಸಕ್ತ ವರ್ಷ 32 ಕೋಟಿ ರೂ.ಗಳ ಗುರಿ ಹೊಂದಲಾಗಿದೆ. ಆಸ್ತಿ ತೆರಿಗೆಯನ್ನು ಹೆಚ್ಚಿಸಬೇಕಾದರೆ ಡಿಜಿಟಲೀಕರಣ ಅಗತ್ಯವಾಗಿದೆ. ಇದಕ್ಕಾಗಿ ಖಾಸಗಿ ಏಜೆನ್ಸಿಗೆ ನೀಡಲಾಗಿದ್ದು, ಮುಂದಿನ 6 ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ. ಅಲ್ಲದೇ, ನೀರಿನ ತೆರಿಗೆ 16 ಕೋಟಿ ರೂ. ಗುರಿ ಹೊಂದಿದ್ದು, 16 ಕೋಟಿ ರೂ. ಸಂಗ್ರಹವಾಗಿದೆ. ಯುಜಿಡಿತೆರಿಗೆ ನಿರೀಕ್ಷಿಸಿದಷ್ಟು ವಸೂಲಿಯಾಗಿಲ್ಲ. ಕೇವಲ ಶೇ.68 ರಷ್ಟು ಸಂಗ್ರಹವಾಗಿದೆ. ಕಸ ವಿಲೇವಾರಿ ತೆರಿಗೆ 2.98 ಕೋಟಿ ರೂ. ಗುರಿಯಲ್ಲಿ 2.76 ಕೋಟಿ ರೂ. ಸಂಗ್ರಹವಾಗಿದೆ ಎಂದವರು ವಿವರಿಸಿದರು.

ಬ್ಲಾಕ್‌ ಲಿಸ್ಟ್‌

ಪಾಲಿಕೆಯ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಮುಗಿಸದ, ಕಳಪೆ ಕಾಮಗಾರಿ ಮಾಡಿದ್ದ ಐದು ಜನ ಗುತ್ತಿಗೆದಾರರನ್ನು ಬ್ಲಾಕ್‌ ಲಿಸ್ಟ್‌ಗೆ ಸೇರಿಸಲು ಶಿಫಾರಸು ಮಾಡಲಾಗಿದೆ ಎಂದರು.

ರಸ್ತೆ ಅಗಲೀಕರಣ

ನಗರದ ಡಾ| ರಾಜ್‌ ಕುಮಾರ್‌ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಯಾರಿಗೂ ಪರಿಹಾರ ನೀಡಲ್ಲ. ರಸ್ತೆಯ ಎರಡೂ ಬದಿಯಲ್ಲಿ ಶೇ.60-70 ರಷ್ಟು ತೆರವುಗೊಳಿಸಲಾಗುವುದು. ಇವರಿಗೆ ಪರಿಹಾರಕ್ಕೆ ಬದಲಿಗೆ ಟಿಡಿಆರ್‌ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಈ ಮೂಲಕ ಸ್ವಾಧೀನಪಡಿಸಿಕೊಂಡ ನಿವೇಶನದ ಮೌಲ್ಯದಷ್ಟೇ ಜಾಗವನ್ನು ಬೇರೆಗೆ ಖರೀದಿಸಲು ಅವಕಾಶ ಕಲ್ಪಿಸಲಾಗುವುದು. ಬೆಂಗಳೂರಿನಲ್ಲಿ ಈ ಪದ್ಧತಿ ಈಗಾಗಲೇ ಕಾರ್ಯರೂಪಕ್ಕೆ ಬಂದಿದ್ದು, ಬಳ್ಳಾರಿಯಲ್ಲಿ ಮೊದಲ ಬಾರಿಗೆ ಜಾರಿಗೆ ತರಲಾಗಿದೆ. ಯಶಸ್ವಿಗೊಳಿಸಲು ನಾನು, ಜಿಲ್ಲಾಧಿಕಾರಿಗಳು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮೇಯರ್‌ ರಾಜೇಶ್ವರಿ ಸುಬ್ಬರಾಯುಡು, ಉಪಮೇಯರ್‌ ಮುಬೀನಾಬೀ ಇದ್ದರು.

ಟಾಪ್ ನ್ಯೂಸ್

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.