ಪೋಕ್ಸೊ ಬಾಲಾಪರಾಧಿ ಅನುಮಾನಾಸ್ಪದ ಸಾವು

ಇಬ್ಬರು ಗೃಹ ರಕ್ಷಕ ಸಿಬ್ಬಂದಿಗಳ ಬಂಧನ ; ಹೌಸ್ ಫಾದರ್ ನಾಪತ್ತೆ

Team Udayavani, Jun 15, 2020, 11:13 PM IST

ಪೋಕ್ಸೊ ಬಾಲಾಪರಾಧಿ ಅನುಮಾನಾಸ್ಪದ ಸಾವು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಳ್ಳಾರಿ: ಪೋಕ್ಸೊ ಕಾಯ್ದೆಯಡಿ ಬಂಧನಕ್ಕೊಳಗಾಗಿ, ನಗರದ ಬಾಲಾಪರಾಧಿ ಮಂದಿರದಲ್ಲಿ ಇಡಲಾಗಿದ್ದ ಅಪ್ರಾಪ್ತ ಬಾಲಕ ಅನುಮಾನಾಸ್ಪದವಾಗಿ ಭಾನುವಾರ ಸಂಜೆ ಮೃತಪಟ್ಟಿದ್ದಾನೆ.

ನೆರೆಯ ಕೊಪ್ಪಳ ಜಿಲ್ಲೆಯವನಾಗಿದ್ದ 16 ವರ್ಷದ ಈ ಬಾಲಕನು ವಿರುದ್ಧ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಬೆಳಗಿನ ಜಾವ 1.30 ಗಂಟೆ ಸುಮಾರಿಗೆ ನಗರದ ಎಸ್‌ಪಿ ವೃತ್ತ ಬಳಿಯ ಬಾಲಾಪರಾಧ ಮಂದಿರಕ್ಕೆ ಕರೆತರಲಾಗಿತ್ತು.

ಆದರೆ, ಭಾನುವಾರ ಸಂಜೆ ಹೊತ್ತಿಗೆ ಬಾಲಕನು ಅನುಮಾಸ್ಪದವಾಗಿ ಮೃತಪಟ್ಟಿದ್ದಾನೆ. ಈ ಕುರಿತು ಕೌಲ್‌ ಬಜಾರ್ ಠಾಣೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ದೂರು ನೀಡಲಾಗಿದ್ದು, ಪ್ರಕರಣ ದಾಖಲಾಗಿದೆ.

ಸಾವಿಗೆ ಕಾರಣವೇನು ಎಂಬುದು ತನಿಖೆಯಿಂದ ಬಹಿರಂಗವಾಗಬೇಕಿದೆ. ಮಂದಿರಕ್ಕೆ ಭದ್ರತೆ ಒದಗಿಸುತ್ತಿದ್ದ ಇಬ್ಬರು ಗೃಹ ರಕ್ಷಕ ಸಿಬ್ಬಂದಿಗಳನ್ನು ಬಂಧಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

ಜಿಲ್ಲೆಯ 2ನೇ ಹೆಚ್ಚುವರಿ ನ್ಯಾಯಾಧೀಶ ರಘುನಾಥ್‌ಗೌಡ ಸಮಕ್ಷಮದಲ್ಲಿ ಮೃತ ಬಾಲಕನ ಮರಣೋತ್ತರ ಪರೀಕ್ಷೆ ಸೋಮವಾರ ಸಂಜೆ ನಡೆಯಿತು.

ಸಾವಿನ ಸುತ್ತ ಅನುಮಾನದ ಹುತ್ತ
ಬಾಲಾಪರಾಧ ಮಂದಿರಕ್ಕೆ ಭದ್ರತೆ ಒದಗಿಸುತ್ತಿದ್ದ ಗೃಹರಕ್ಷಕರಾದ ಮಾರುತಿ, ಓಬಳೇಶ್ ಎನ್ನುವವರು ಬಂಧನದಲ್ಲಿದ್ದಾರೆ. ಆದರೆ, ಮಾರುತಿ ಎನ್ನುವ ಗೃಹರಕ್ಷಕ ಸಿಬ್ಬಂದಿಯು ಕಳೆದ ಮೇ 30ರಂದೇ ಬಾಲಾಪರಾಧ ಮಂದಿರದಿಂದ ರಿಲೀವ್ ಆಗಿ ಅವನ ಸ್ಥಾನಕ್ಕೆ ಓಬಳೇಶ್ ಎನ್ನುವವರನ್ನು ನಿಯೋಜಿಸಲಾಗಿದೆ. ಆದರೂ, ಮಾರುತಿ ಎನ್ನುವವರು ಬಾಲಮಂದಿರಕ್ಕೇಕೆ ಬಂದಿದ್ದರು ಎಂಬುದು ಸ್ಪಷ್ಟವಾಗಬೇಕಿದೆ.

ಅಲ್ಲದೇ, ಮೃತ ಬಾಲಕನ ಮೇಲೆ ಹಲ್ಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗುತ್ತಿದೆ. ಮಂದಿರದ ಇನ್ನಿಬ್ಬರು ಬಾಲಕರಿಗೂ ತೀವ್ರವಾದ ಗಾಯಗಳಾಗಿವೆ. ಜತೆಗೆ ಮಂದಿರದ ಹೌಸ್ ಫಾದರ್ ನಾಪತ್ತೆಯಾಗಿದ್ದಾರೆ, ಅಧೀಕ್ಷಕರು ರಜೆಯಲ್ಲಿದ್ದಾರೆ ಎನ್ನಲಾಗುತ್ತಿದೆ.

ಪ್ರಕರಣ ದಾಖಲಿಸಿಕೊಂಡಿರುವ ಕೌಲ್‌ಬಜಾರ್ ಪೊಲೀಸರು ಬಾಲಾಪರಾಧ ಮಂದಿರದ ಸಿಸಿಟಿವಿ ಪುಟೇಜ್‌ಗಳನ್ನು ಪಡೆದು ತನಿಖೆ ಕೈಗೆತ್ತಿಕೊಂಡಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

Bellary; ಲೋಕಸಭೆ ಟಿಕೆಟ್ ಮೂಲಕ ಅಜ್ಞಾತವಾಸದಿಂದ ಹೊರ ಬಂದಂತಾಗಿದೆ: ಶ್ರೀರಾಮುಲು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.