ಕಾರ್ಯಕರ್ತೆಯರ ಕಾರ್ಯ ಕಾರ್ಯ ಶ್ಲಾಘನೀಯ: ಶಾಸಕ ಪಿ.ಟಿ. ಪರಮೆಶ್ವರನಾಯ್ಕ
Team Udayavani, Jun 30, 2020, 12:06 PM IST
ಹೂವಿನಹಡಗಲಿ: ಆಶಾ ಕಾರ್ಯಕರ್ತೆಯರಿಗೆ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಚೆಕ್ ವಿತರಣೆ ಮಾಡಿದರು.
ಹೂವಿನಹಡಗಲಿ: ಇಡೀ ಜಗತನ್ನೆ ಕಾಡುತ್ತಿರುವ ಮಹಾಮಾರಿ ಕೋವಿಡ್ ಸಂದರ್ಭದಲ್ಲಿ ತಮ್ಮ ಜೀವನವನ್ನು ಪಣಕ್ಕಿಟ್ಟು ಆರೋಗ್ಯ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ಕ್ಷೇತ್ರದ ಶಾಸಕ ಪಿ.ಟಿ. ಪರಮೆಶ್ವರನಾಯ್ಕ ಹೇಳಿದರು.
ಪಟ್ಟಣದ ತಾಪಂ ರಾಜೀವ್ ಗಾಂಧಿ ಸಭಾಭವನದಲ್ಲಿ ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸಹಕಾರಿ ಸಂಘದಿಂದ (ಬಿಡಿಸಿಸಿಬ್ಯಾಂಕ್) 4.35 ಲಕ್ಷ ರೂ. ಸಹಾಯ ಧನ ವಿತರಣೆ ಮಾಡಿ ಮಾತನಾಡಿದರು. ಆಶಾ ಕಾರ್ಯಕರ್ತೆಯರಿಗೆ ಕೊಡುತ್ತಿರುವ ಸಹಾಯ ಧನ ಆತ್ಯಲ್ಪವಾಗಿದ್ದು ಸರ್ಕಾರದಲ್ಲಿ ಈ ಕುರಿತು ಗಮನ ಸೆಳೆಯುವುದಾಗಿ ಸಹ ತಿಳಿಸಿದರು. ಮೊನ್ನೆ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ನೀಡಿರುವ ಪ್ರೋತ್ಸಾಹಧನ ಬದಲಾಗಿ ಅವರಿಗೆ ಶಾಶ್ವತವಾಗಿ ವೇತನ ಹೆಚ್ಚಳ ಮಾಡುವ ಕುರಿತು ಸರ್ಕಾರದ ಗಮನ ಸೆಳೆಯುವೆ ಎಂದರು.
ಇಂದು ಸಹಕಾರಿ ಸಂಘಗಳು ಸರ್ಕಾರಕ್ಕೆ ಸಮಾನವಾಗಿ ಅವರಿಗೆ 3000ರೂ. ಪ್ರೋತ್ಸಾಹ ಧನವನ್ನು ನೀಡಲಾಗಿದೆ. ಆ ನಿಟ್ಟಿನಲ್ಲಿ ನಮ್ಮ ಸಹಕಾರಿ ಸಂಘಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ ಎಂದರು. ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಐಗೊಳ್ ಚಿದಾನಂದ್ ಮಾತನಾಡಿ, ನಮ್ಮ ಕೇಂದ್ರ ಬ್ಯಾಂಕಿನಿಂದ ಒಟ್ಟು 25 ಲಕ್ಷ ರೂಗಳನ್ನು ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದು ಆದರಲ್ಲಿ ನಮ್ಮ ಕ್ಷೇತ್ರದ ಶಾಸಕರ ಮಾರ್ಗದರ್ಶನದಂತೆ ನಮ್ಮ ತಾಲೂಕಿನ ಪ್ರತಿ ಆಶಾ ಕಾರ್ಯಕರ್ತೆಯರಿಗೂ 3000 ರೂಗಳ ಸಹಾಯ ಧನ ನೀಡಲಾಗಿದೆ ಎಂದರು. ಅಶಾ ಕಾರ್ಯಕರ್ತೆಯರು ಯಾವುದೇ ಕಾರಣಕ್ಕೂ ಎದೆಗುಂದದೆ ನೀವುಗಳು ಕೆಲಸ ಮಾಡಿ ನಿಮ್ಮ ಜೊತೆ ನಾವಿರುತ್ತೇವೆ ಎಂದು ನೈತಿಕ ಬೆಂಬಲ ಸೂಚಿಸಿದರು.
ಈ ಸಂದರ್ಭದಲ್ಲಿ ಕೊವಿಡ್ ಟಾಸ್ಕ್ಫೋರ್ಸ್ ಸಮಿತಿ ಆಧ್ಯಕ್ಷ ವಾರದ ಗೌಸುಮೊಹದ್ದಿನ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯುಎಚ್. ಸೋಮಶೇಖರ್, ನೋಡೆಲ್ ಅಧಿಕಾರಿ ಡಾ| ಜೆ.ಡಿ. ಉಮೇಶ್, ಬಿಡಿಸಿಸಿ ಬ್ಯಾಂಕ್ನ ಎಜಿಎಂ ಕೊಟ್ರೇಶ್, ವ್ಯವಸ್ಥಾಪಕ ಎಸ್. ಬೆನ್ನೂರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?