G20 summit: ಜಗದ್ವಿಖ್ಯಾತ ಹಂಪಿಯ ಸ್ಮಾರಕಗಳು ಝಗಮಗ


Team Udayavani, Jul 9, 2023, 9:23 PM IST

1-sadas

ಹೊಸಪೇಟೆ: ಜಗದ್ವಿಖ್ಯಾತ ಹಂಪಿ ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ವಿದ್ಯುದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಹಂಪಿಯ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಲಾಗಿದೆ.

ಜುಲೈ 9 ರಿಂದ 16 ರವರೆಗೆ ಜಿ-20 ಶೃಂಗಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಂಪಿಯ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಲಾಗಿದೆ. ಹಂಪಿಯ ವಿಜಯ ವಿಠ್ಠಲ ದೇವಾಲಯ, ಸಾಸಿವೆ ಕಾಳು ಗಣಪ ಮಂಟಪ, ಶ್ರೀವಿರೂಪಾಕ್ಷೇಶ್ವರ ದೇವಾಲಯ, ಎದುರು ಬಸವಣ್ಣ ಮಂಟಪ, ಮಾತಂಗ ಪರ್ವತ ಸೇರಿದಂತೆ ಹಂಪಿಯ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಲಾಗಿದೆ.

ಹಂಪಿ ಬೈ ನೈಟ್ ಯೋಜನೆಗೆ ಈಗಾಗಲೇ ಹಂಪಿ ಅಭಿವೃದ್ಧಿ ಪ್ರಾಧಿಕಾರ ಸೈ ಎಂದಿದೆ. ಹಾಗಾಗಿ ಹಂಪಿಯ ಪ್ರಮುಖ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಲಾಗಿದೆ. ಹಂಪಿ ಉತ್ಸವದ ಸಮಯದಲ್ಲಿ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಲಾಗುತ್ತಿತ್ತು. ಈಗ ಜುಲೈ 9 ರಿಂದ 16 ರವರೆಗೂ ಹಂಪಿಯ ಸ್ಮಾರಕಗಳು ಜಗಮಗಿಸಲಿವೆ. ಹಾಗಾಗಿ ಹಂಪಿಯ ಸ್ಮಾರಕಗಳು ನವವಧುವಿನಂತೇ ಶೃಂಗಾರಗೊಂಡಿವೆ.

ಹಂಪಿಯ ಸ್ಮಾರಕಗಳನ್ನು ರಾತ್ರಿ ಹೊತ್ತಿನಲ್ಲೂ ವೀಕ್ಷಣೆಗೆ ಹಂಪಿ ಬೈ ನೈಟ್ ಯೋಜನೆ ರೂಪಿಸಲಾಗಿದೆ. ಜೊತೆಗೆ ಹಂಪಿಯ ಮಹತ್ವದ ಸ್ಮಾರಕಗಳ ಬಳಿ ಧ್ವನಿ ಮತ್ತು ಬೆಳಕು ಕಾರ್ಯಕ್ರಮದ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ. ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಎದುರು ಬಸವಣ್ಣ ಮಂಟಪ ಮತ್ತು ವಿಜಯ ವಿಠ್ಠಲ ದೇವಾಲಯದ ಬಳಿಯೂ ಧ್ವನಿ ಮತ್ತು ಬೆಳಕು ಕಾರ್ಯಕ್ರಮದ ವ್ಯವಸ್ಥೆ ಮಾಡಲಾಗಿದೆ. ಜಿ-20 ರಾಷ್ಟ್ರಗಳ ಪ್ರತಿನಿಧಿಗಳು ಈ ಕಾರ್ಯಕ್ರಮ ವೀಕ್ಷಣೆ ಮಾಡಲಿದ್ದಾರೆ. ಪ್ರವಾಸೋದ್ಯಮ, ಪುರಾತತ್ವ ಇಲಾಖೆಗಳು, ಹಂಪಿ ಅಭಿವೃದ್ಧಿ ಪ್ರಾಧಿಕಾರ ಹಾಗು ಜಿಲ್ಲಾಡಳಿತ ಹಂಪಿ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಿದ್ದು, ದೇಶ-ವಿದೇಶಿ ಪ್ರವಾಸಿಗರ ಗಮನ ಕೂಡ ಸೆಳೆಯುತ್ತಿದೆ.

ಹಂಪಿಯ ರಸ್ತೆಗಳಲ್ಲಿ ಜಿ-20 ಶೃಂಗಸಭೆಗೆ ಆಗಮಿಸುವ ಪ್ರತಿನಿಧಿಗಳಿಗೆ ಸ್ವಾಗತಿಸಲು ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಗಿದೆ. ಕಮಲಾಪುರ ಪುರಸಭೆ ವತಿಯಿಂದ ಈ ಚಿತ್ತಾರಗಳನ್ನು ಬಿಡಿಸಲಾಗಿದೆ. ಹಂಪಿ, ಕಮಲಾಪುರ ಗೋಡೆಗಳ ಮೇಲೂ ಕಲಾವಿದರು ಹಂಪಿಯ ಸ್ಮಾರಕಗಳನ್ನು ಕುಂಚದಲ್ಲಿ ಅರಳಿಸಿದ್ದಾರೆ. ಇಡೀ ಹಂಪಿ ಶೃಂಗಾರಗೊಂಡಿದೆ.

ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಹಂಪಿಯ ಸ್ಮಾರಕಗಳ ಬಳಿ ದೇಶದ ವಿವಿಧ ಕಲೆಗಳ ಪ್ರದರ್ಶನ ಕೂಡ ನಡೆಯಲಿದೆ. ಈಗಾಗಲೇ ಕಲಾವಿದರು ಆಗಮಿಸಿದ್ದು, 52 ಪ್ರತಿನಿಧಿಗಳಿಗೆ ಭಾರತೀಯ ಕಲೆಯನ್ನು ಉಣಬಡಿಸಲಿದ್ದಾರೆ.

ಹಂಪಿಯ ಇವೋಲ್ ಬ್ಯಾಕ್ ಹೋಟೆಲ್‌ಗೆ ಆಗಮಿಸಿದ ಜಿ-20 ರಾಷ್ಟ್ರಗಳ ಪ್ರತಿನಿಧಿಗಳನ್ನು ಸ್ಥಳೀಯ ಹಗಲು ವೇಷ ಕಲಾವಿದರ ತಂಡ ಬರಮಾಡಿಕೊಂಡಿತು. ಹಂಪಿ ನೆಲದ ಕಲೆಯೊಂದಿಗೆ ಸ್ವಾಗತ ಮಾಡಿದ ಕಲಾವಿದರು, ಹಂಪಿಯ ಗತ ವೈಭವ ಸಾರುವ ಕಾರ್ಯ ಮಾಡಿದರು.

ಹಂಪಿಯಲ್ಲಿ ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಪ್ರವಾಸಿಗರಲ್ಲಿ ಇಳಿಮುಖವಾಗಿದೆ. ಪ್ರವಾಸಿಗರಿಗೆ ನಿರ್ಬಂಧ ಹೇರದಿದ್ದರೂ ಪ್ರವಾಸಿಗರು ಈ ವೀಕೆಂಡ್‌ನಲ್ಲಿ ಭಾರಿ ಪ್ರಮಾಣದಲ್ಲಿ ಸುಳಿಯಲಿಲ್ಲ. ಕಳೆದ ಭಾನುವಾರ 8 ಸಾವಿರಕ್ಕೂ ಅಧಿಕ ಪ್ರವಾಸಿಗರು ಹಂಪಿಗೆ ಆಗಮಿಸಿದ್ದರು. ಹಂಪಿಯಲ್ಲಿ 1076 ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.