ಗಾಂಧೀಜಿ ವ್ಯಕ್ತಿತ್ವ ಜಗತ್ತಿಗೇ ಮಾದರಿ
Team Udayavani, Oct 3, 2020, 5:07 PM IST
ಸಂಡೂರು: ಗಾಂಧೀಜಿ ವ್ಯಕ್ತಿತ್ವ ಜಗತ್ತಿಗೆ ಮಾದರಿಯಾಗಿದೆ ಎಂದು ವಿರಕ್ತಮಠದ ಪ್ರಭುಮಹಾಸ್ವಾಮಿಗಳು ತಿಳಿಸಿದರು. ಅವರು ವೀರಶೈವ ಕಲ್ಯಾಣ ಮಂಟಪದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಜಿಲ್ಲಾ ಜನಜಾಗೃತಿ ವೇದಿಕೆ ಸಹಯೋಗದಲ್ಲಿ ಗಾಂಧಿ ಸ್ಮೃತಿ ಕಾರ್ಯಕ್ರಮ, ಜನಮಂಗಳ ಕಾರ್ಯಕ್ರಮದಡಿ ವಿಶೇಷ ಚೇತನರಿಗೆ ಪರಿಕರ ವಿತರಣೆ, ಸೃಜನಶೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಗಾಂಧೀಜಿಯವರ ತತ್ವಗಳ ನಿಜವಾದ ಪಾಲನೆಯನ್ನು ಡಾ| ವೀರೇಂದ್ರ ಹೆಗ್ಗಡೆಯವರು ಅನುಸರಿಸುವ ಮೂಲಕ ರಾಮರಾಜ್ಯದ ಕನಸ್ಸುಗಳನ್ನು ನನಸು ಮಾಡುತ್ತಿದ್ದಾರೆ ಎಂದರು. ಧರ್ಮಸ್ಥಳ ಗಾಮಾಭಿವೃದ್ಧಿ ಸಂಸ್ಥೆ ಜಿಲ್ಲಾನಿರ್ದೇಶಕ ಚಂದ್ರಶೇಖರ ಶೆಟ್ಟಿ ಮಾತನಾಡಿ,ಡಾ| ವೀರೇಂದ್ರ ಹೆಗ್ಗಡೆಯವರು ದೇಶದಸಾಮಾನ್ಯ ಪ್ರಜೆಯೂ ಸಹ ಸರಿದಾರಿಯಲ್ಲಿ ಸಾಗುವ ಮೂಲಕ ಆರ್ಥಿಕ ಸ್ವಾತಂತ್ರ್ಯ ಪಡೆಯಲು ಸ್ವಾಸಹಾಯ ಸಂಘಗಳನ್ನು ಪ್ರಾರಂಭಿಸಿದರು ಎಂದರು. ಅತಿಥಿ ಜನಜಾಗೃತಿ ವೇದಿಕೆ ಸದಸ್ಯ ಬಂಡ್ರಿ ರವಿಕುಮಾರ್ ಗಾಂಧೀಜಿ ಹಾಗೂ ಶಾಸ್ತ್ರಿಯವರ ತತ್ವಗಳು ಆದರ್ಶನೀಯ ಎಂದರು.
ಬಸವರಾಜ ಬಣಕಾರ ವಿಶೇಷ ಉಪನ್ಯಾಸ ನೀಡಿದರು. ತಾಲೂಕು ಯೋಜನಾಧಿಕಾರಿ ಸ್ವಾಗತಿಸಿ ಯೋಜನೆಯ ಉದ್ದೇಶಗಳನ್ನು ತಿಳಿಸಿದರು. 25ಕ್ಕೂ ಹೆಚ್ಚು ಸ್ವ ಸಹಾಯ, ಸ್ತ್ರೀಶಕ್ತಿ ಸಂಘಗಳು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ