ಗಾಂಧೀಜಿ ಸಮಾಜವಾದಿ ತತ್ವ ಎಲ್ಲರಿಗೂ ಸ್ಫೂರ್ತಿ
ವಿವಿಧ ದೃಷ್ಟಿಕೋನಗಳ ಬಗ್ಗೆ ಸಂಶೋಧನೆಗಳು ನಡೆಯುವುದು ಅನಿವಾರ್ಯವಾಗಿದೆ
Team Udayavani, Aug 16, 2022, 6:05 PM IST
ಹೊಸಪೇಟೆ: ಪ್ರಸ್ತುತ ದೇಶ ಪ್ರೇಮವನ್ನು ಭಾವನಾತ್ಮಕತೆಗಿಂತ, ಶ್ರಮ, ಸಂಸ್ಕೃತಿ, ಕಾಯಕ, ತತ್ವ ಸಿದ್ಧಾಂತಗಳ ಬೌದ್ಧಿಕತೆಯಿಂದ ಮೂಡಿಸುವುದು ನಮ್ಮೆಲ್ಲರ ಗುರಿಯಾಗಲಿ ಎಂದು ಕನ್ನಡ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗ ಪ್ರಾಧ್ಯಾಪಕ ಡಾ| ಚಿನ್ನಸ್ವಾಮಿ ಸೋಸಲೆ ಅಭಿಪ್ರಾಯಪಟ್ಟರು.
ಕನ್ನಡ ವಿಶ್ವವಿದ್ಯಾಲಯದ ಲೋಹಿಯ ಅಧ್ಯಯನದ ಪೀಠದ ವತಿಯಿಂದ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ “ಸ್ವಾತಂತ್ರ್ಯ ಚಳವಳಿ: ಸಮಾಜವಾದಿ ದೃಷ್ಟಿಕೋನ’ ವಿಶೇಷ ಉಪನ್ಯಾಸದಲ್ಲಿ ಸೋಮವಾರ ಮಾತನಾಡಿದರು. ಸ್ವಾತಂತ್ರ್ಯ ಚಳವಳಿ ಜೊತೆ ಜೊತೆಗೆ ಸಮಾಜವಾದವು ರೂಪುಗೊಂಡಿತು ಎಂದರು.
ಸ್ಥಳೀಯ ಹೋರಾಟಗಳು, ಚಳವಳಿಗಳಾವುವು 1930ರವರೆಗೆ ದೃಷ್ಟಿಕೋನದಿಂದ ಕೂಡಿರಲಿಲ್ಲ. ಪೂನಾ ಒಪ್ಪಂದದ ನಂತರ ನಡೆದ ಎಲ್ಲ ಸ್ವಾತಂತ್ರ್ಯ ಚಳವಳಿಗಳು ಸಮಾಜವಾದದ ದೃಷ್ಟಿಕೋನದ ಹಿನ್ನೆಲೆಯಲ್ಲಿ ನಡೆಯಲಾರಂಭಿಸಿದವು. ಮಹಾತ್ಮಗಾಂಧಿಧೀಜಿಯವರು ಕೂಡ ಸಮಾಜವಾದದ ದೃಷ್ಟಿಕೋನದದಲ್ಲಿ ಹರಿಜನ ಪತ್ರಿಕೆಯಯನ್ನು ಹುಟ್ಟು ಹಾಕಿದರು. ಗಾಂಧೀಜಿಯವರು ಅಳವಡಿಸಿಕೊಂಡ ಸಮಾಜವಾದಿ ತತ್ವ ಮುಂದೆ ಯುವಜನರಿಗೆ ಸ್ಫೂರ್ತಿಯಾಯಿತು ಎಂದು ಹೇಳಿದರು.
ವಿಶ್ವವಿದ್ಯಾಲಯ ಕುಲಪತಿ ಡಾ| ಸ.ಚಿ. ರಮೇಶ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟದಲ್ಲಿ ಕಾರ್ಮಿಕ ದೃಷ್ಟಿಕೋನ, ಮಹಿಳಾ ದೃಷ್ಟಿಕೋನ, ಸಮಾಜವಾದಿ ದೃಷ್ಟಿಕೋನ ಹೀಗೆ ವಿವಿಧ ದೃಷ್ಟಿಕೋನಗಳು ಮಹತ್ವದ ಪಾತ್ರವಹಿಸಿವೆ. ಈ ವಿವಿಧ ದೃಷ್ಟಿಕೋನಗಳ ಬಗ್ಗೆ ಸಂಶೋಧನೆಗಳು ನಡೆಯುವುದು ಅನಿವಾರ್ಯವಾಗಿದೆ ಎಂದರು.
75ನೇ ಅಮೃತ ಮಹೋತ್ಸವದ ಸಂದರ್ಭದಲ್ಲಿ ಸದೃಢ ದೇಶ ನಿರ್ಮಾಣಕ್ಕೆ ನಾವೆಲ್ಲರೂ ಸದೃಢ ಮನಸ್ಸು ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಈ ಸಂದರ್ಭದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಗುಂಡುರಾವ್ ದೇಸಾಯಿ ಅವರನ್ನು ಸನ್ಮಾನಿಸಲಾಯಿತು. ಕನ್ನಡ ವಿಶ್ವವಿದ್ಯಾಲಯದ ಕುಲಸಚಿ ಡಾ| ಎ. ಸುಬ್ಬಣ್ಣ ರೈ ಮಾತನಾಡಿದರು.
ಉಪಕುಲಸಚಿವ ಡಾ| ಎ. ವೆಂಕಟೇಶ ಸ್ವಾತಂತ್ರ್ಯ ಹೋರಾಟಗಾರರನ್ನು ಪರಿಚಯಿಸಿದರು. ಆಜಾದಿ ಕಾ ಅಮೃತ ಮಹೋತ್ಸವದ ಸಂಯೋಜನಾಧಿಕಾರಿ ಡಾ| ಮೋಹನ್ ರಾವ್ ಪಾಂಚಾಳ ಮತ್ತು ವಿವಿಧ ವಿಭಾಗಗಳ ಅಧ್ಯಾಪಕರು, ಸಂಶೋಧನಾರ್ಥಿಗಳು ಬೋಧಕೇತರ ಸಿಬ್ಬಂದಿಗಳು ಇದ್ದರು. ಮಹಿಳಾ ಅಧ್ಯಯನ ವಿಭಾಗದ ಸಂಶೋಧನಾರ್ಥಿ ಪುಷ್ಪ ನಿರೂಪಿಸಿದರು. ಮಂಜುನಾಥ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ