ಗಾಂಧಿ ತತ್ವಗಳ ಆಚರಣೆಯೇ ಸಮಸ್ಯೆಗೆ ಪರಿಹಾರ: ಕೊಟ್ರಪ್ಪ
Team Udayavani, Mar 13, 2018, 5:17 PM IST
ಬಳ್ಳಾರಿ: ರಾಷ್ಟ್ರಪತಿ ಮಹಾತ್ಮ ಗಾಂಧೀಜಿಯವರ ತತ್ವಗಳಿಂದ ದೇಶದಲ್ಲಿ ಪ್ರಸ್ತುತ ಉಂಟಾಗಿರುವ ಮತ್ತು ಪ್ರತಿದಿನ ಹುಟ್ಟಿಕೊಳ್ಳುತ್ತಿರುವ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಚೋರನೂರು ಕೊಟ್ರಪ್ಪ ಅಭಿಪ್ರಾಯಪಟ್ಟರು.
ನಗರದ ಎಎಸ್ಎಂ ಮಹಿಳಾ ಕಾಲೇಜಿನಲ್ಲಿ ಗಾಂಧೀಜಿಯವರ 150ನೇ ಜಯಂತಿ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ
ಇಲಾಖೆ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಕಾಲೇಜು ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಗಾಂಧಿ ಧ್ವನಿ ಮತ್ತು ಬೆಳಕಿನ ಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದರು. ಗಾಂಧಿಧೀಜಿ ತತ್ವ-ಆದರ್ಶಗಳಿಂದ ದಿನೇ ದಿನೇ ವಿಮುಖರಾಗುತ್ತಿರುವ
ಪರಿಣಾಮ ಬಡತನ, ನಿರುದ್ಯೋಗ, ಅಸಮಾನತೆ, ಕೋಮುದ್ವೇಷ, ಭ್ರಷ್ಟಾಚಾರ, ಭಯೋತ್ಪಾದನೆ, ಅಸೂಯೆ ಭಾವನೆಯಂತ ಅನೇಕ ಸಮಸ್ಯೆಗಳು ಹುಟ್ಟಿಕೊಳ್ಳುತ್ತಿವೆ. ಇವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಹರಸಾಹಸಪಡುತ್ತಿರುವುದನ್ನು ನಾವು ಕಾಣುತ್ತಿದ್ದೇವೆ ಎಂದ ಅವರು, ಗಾಂಧೀಜಿ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನಮ್ಮ ಸಮಸ್ಯೆಗಳು ನಿವಾರಣೆಯಾಗಲಿವೆ ಎಂದರು.
ಗಾಂಧಿವಾದಿ ಟಿ.ಜಿ.ವಿಠಲ್ ಮಾತನಾಡಿ, ಜೀವನ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತು ನಮ್ಮ ಕನಸುಗಳನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಗಾಂಧೀಜಿ ಅವರ ಚಿಂತನೆಗಳನ್ನು ಅಳವಡಿಸಿಕೊಳ್ಳುವುದು ಅತ್ಯಂತ ಸೂಕ್ತ. ಗಾಂಧಿಧೀಜಿ ಬಳ್ಳಾರಿಗೆ ಎರಡು ಬಾರಿ ಭೇಟಿ ಮಾಡಿದ್ದರು. ಜಗತ್ತಿಗೆ ಅವರು ನೀಡಿದ ಕೊಡುಗೆ ಗಮನಿಸಿದ ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಆಹಿಂಸಾ ದಿನವನ್ನಾಗಿ ಘೋಷಿಸಿ
ಆಚರಣೆ ಮಾಡಿಕೊಂಡು ಬರುತ್ತಿದೆ ಎಂದರು. ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಮಹಾವಿದ್ಯಾಲಯದ
ಪ್ರಾಂಶುಪಾಲ ಡಾ.ಎಂ.ಪಂಪಾಪತಿ, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ರಾಮಲಿಂಗಪ್ಪ ಬಿ.ಕೆ ಹಾಗೂ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್