ವಿರೂಪಾಪೂರಗಡ್ಡಿಗೆ ಅಧಿಕಾರಿಗಳ ಭೇಟಿ-ಸಮೀಕ್ಷೆ
ಅಕ್ರಮ ರೆಸಾರ್ಟ್ ತೆರವುಗೊಳಿಸುವಂತೆ ಫೆ. 11ರಂದು ಸುಪ್ರೀಂ ಆದೇಶ
Team Udayavani, Feb 14, 2020, 1:13 PM IST
ಗಂಗಾವತಿ: ವಿರೂಪಾಪೂರಗಡ್ಡಿಯ ಅಕ್ರಮ ರೆಸಾರ್ಟ್ ಗಳನ್ನು ತಿಂಗಳೊಳಗೆ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಹಂಪಿ ಅಭಿವೃದ್ಧಿ ಪ್ರಾಧಿಕಾರ ಮತ್ತು ತಾಲೂಕು ಆಡಳಿತದ ಅಧಿಕಾರಿಗಳು ವಿರೂಪಾಪೂರಗಡ್ಡಿಗೆ ಗುರುವಾರ ಭೇಟಿ ನೀಡಿ ಸಮೀಕ್ಷೆ ನಡೆಸಿದರು.
ವಿರುಪಾಪೂರಗಡ್ಡಿಯಲ್ಲಿ ಜನತೆ ವಾಸವಾಗಿರುವ ಮನೆಗಳೆಷ್ಟು? ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುತ್ತಿರುವ ಮನೆಗಳೆಷ್ಟು? ಎನ್ನುವ ಮಾಹಿತಿ ಸಂಗ್ರಹಿಸಿದ್ದಾರೆ. ಈಗಾಗಲೇ ಸಾಣಾಪೂರ ಗ್ರಾಪಂ ವಿರೂಪಾಪೂರಗಡ್ಡಿಯಲ್ಲಿರುವ ರೆಸಾರ್ಟ್ ಹೊಟೇಲ್ ಮತ್ತು ವಸತಿ ಮನೆಗಳ ಸಮಗ್ರ ಮಾಹಿತಿ ನೀಡಿದ್ದರೂ ಸುಪ್ರೀಂಕೋರ್ಟ್ ತೀರ್ಪಿನ ನಂತರ ಪ್ರಾಧಿಕಾರ ಅ ಧಿಕಾರಿಗಳು ಪುನಃ ಸಮೀಕ್ಷೆ ನಡೆಸಿದ್ದಾರೆ.
ವಿರೂಪಾಪೂರಗಡ್ಡಿಯಲ್ಲಿ 60ಕ್ಕೂ ಹೆಚ್ಚು ರೆಸಾರ್ಟ್, ಹೊಟೇಲ್ಗಳಿವೆ. ಬಟ್ಟೆ, ಹಳೆಯ ಸಾಮಾನು, ತಂಪು ಪಾನೀಯ ಅಂಗಡಿ, ವಾಹನಗಳನ್ನು ಬಾಡಿಗೆ ಕೊಡುವುದು ಸೇರಿ 150ಕ್ಕೂ ಹೆಚ್ಚು ಸಣ್ಣಪುಟ್ಟ ವ್ಯವಹಾರ ಮಾಡುವ ಅಂಗಡಿ ಮುಂಗಟ್ಟುಗಳಿವೆ. ಪ್ರಾ ಧಿಕಾರದ ನೋಟಿಸ್ ಪ್ರಶ್ನಿಸಿ 15 ಜನ ರೆಸಾರ್ಟ್ ಮಾಲೀಕರು ಸುಪ್ರೀಂಕೋರ್ಟ್ಗೆ ಹಾಗೂ ಇಬ್ಬರು ಮಾಲೀಕರು ಹೈಕೋರ್ಟ್ಗೆ ಹೋಗಿದ್ದರು. ಫೆ.11ರಂದು ಸುಪ್ರೀಂಕೋರ್ಟ್ ರೆಸಾರ್ಟ್ ಮಾಲೀಕರ ಅರ್ಜಿ ತಿರಸ್ಕಾರ ಮಾಡಿ ಅಕ್ರಮ ರೆಸಾರ್ಟ್ ತೆರವುಗೊಳಿಸುವಂತೆ ಆದೇಶ ನೀಡಿತ್ತು.
ಡಂಗುರ ಮೂಲಕ ಮಾಹಿತಿ
ಸುಪ್ರೀಂಕೋರ್ಟ್ ಸೂಚನೆಯಂತೆ ವಿರೂಪಾಪೂರಗಡ್ಡಿಯಲ್ಲಿರುವ ಅಕ್ರಮ ರೆಸಾರ್ಟ್ ಸೇರಿ ವಾಣಿಜ್ಯ ವ್ಯವಹಾರ ನಡೆಸುವವರಿಗೆ ಕೋರ್ಟ್ ಆದೇಶ ಪ್ರತಿ ವಿತರಿಸಲಾಗುತ್ತದೆ. ರೆಸಾರ್ಟ್ಗಳಲ್ಲಿ ತಂಗಿರುವ ದೇಶ-ವಿದೇಶದ ಪ್ರವಾಸಿಗರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗುತ್ತದೆ. ರೆಸಾರ್ಟ್ಗಳಿಗೆ ಆನ್ಲೈನ್ ಮೂಲಕ ಬುಕ್ಕಿಂಗ್ ಮಾಡಿಕೊಂಡಿರುವ ಪ್ರವಾಸಿಗರು ಬುಕಿಂಗ್ ಕ್ಯಾನ್ಸಲ್ ಮಾಡಲು ಸೂಚನೆ ನೀಡಲಾಗುತ್ತದೆ. ತೆರವು ಕಾರ್ಯ ಕುರಿತು ಡಂಗುರ ಹಾಕಿಸಿ, ರೆಸಾರ್ಟ್ ಮಾಲೀಕರಿಗೆ ತಮ್ಮ ಅಮೂಲ್ಯ ವಸ್ತುಗಳನ್ನು ಸುರಕ್ಷಿತವಾಗಿಟ್ಟುಕೊಳ್ಳುವಂತೆ ತಿಳಿಸಲಾಗುತ್ತದೆ.
ಎಲ್.ಡಿ. ಚಂದ್ರಕಾಂತ,
ತಹಶೀಲ್ದಾರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ