ಅವಿಭಕ್ತ ಕುಟುಂಬಗಳಿಂದ ಉತ್ತಮ ಸಂಸ್ಕಾರ
Team Udayavani, Dec 11, 2017, 3:03 PM IST
ಕಂಪ್ಲಿ: ಅವಿಭಕ್ತ ಕುಟುಂಬಗಳು ಕ್ಷೀಣಿಸುತ್ತಿರುವುದಿಂದ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿಗಳು ನಶಿಸುತ್ತಿದ್ದು, ಅವಿಭಕ್ತಕುಟುಂಬಗಳಿಗೆ ಒತ್ತು ನೀಡಬೇಕು ಎಂದು ಗ್ರಾಪಂ ಉಪಾಧ್ಯಕ್ಷ ಎಂ.ಎಸ್. ಗುರುಮೂರ್ತಿ ಹೇಳಿದರು.
ಹೊಸದರೋಜಿ ಗ್ರಾಮದ ಸ್ವಾಮಿವಿವೇಕಾನಂದ ವಿದ್ಯಾಸಂಸ್ಥೆಯ ಶಾಲೆಯಲ್ಲಿ ಆಯೋಜಿಸಿದ್ದ ಅಜ್ಜ ಅಜ್ಜಿಯಂದಿತರ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಇಂದಿನ ಆಧುನಿಕ ಯುಗದಲ್ಲಿ ದಿನದಿಂದ ದಿನಕ್ಕೆ ಅವಿಭಕ್ತ ಕುಟುಂಬಗಳು ಕಡಿಮೆ ಆಗುತ್ತಿರುವುದರಿಂದ ಮಾನವೀಯ ಸಂಬಂಧಗಳು ಕುಸಿತವಾಗುತ್ತಿವೆ ಎಂದರು. ದಲಿತ ಪ್ಯಾಂಥರ್ ಆಫ್ ಇಂಡಿಯಾದ ಬಳ್ಳಾರಿ ಜಿಲ್ಲಾಧ್ಯಕ್ಷ ನಾಗರಾಜ ಬೋವಿ ಮಾತನಾಡಿ, ಅವಿಭಕ್ತ ಕುಟುಂಬಗಳು ಇದ್ದರೆ ಅದರಿಂದ ಮನೆಯಲ್ಲಿಯನ ಮಕ್ಕಳಿಗೆ, ಮೊಮ್ಮಕ್ಕಳಿಗೆ ಉತ್ತಮ ಸಂಸ್ಕಾರ ಸಿಗುತ್ತದೆ. ಮನೆಯ ಹಿರಿಯರು ತಮ್ಮ ಅನುಭವ, ಪುರಾಣ, ರಾಮಾಯಣ, ಮಹಾಭಾರತದ ನೀತಿ ಕಥೆಗಳನ್ನು ಹೇಳುವ ಮೂಲಕ ಮಕ್ಕಳಲ್ಲಿ ಉತ್ತಮ ಗುಣಗಳನ್ನು ಕಲಿಸುತ್ತಾರೆ. ಜೊತೆಗೆ ಶಿಸ್ತನ್ನು, ಹಿರಿಯರನ್ನು, ಕಿರಿಯರನ್ನು ಗೌರವಿಸುವ ಆದರ್ಶ ಗುಣಗಳನ್ನು ಕಲಿಸುತ್ತಾರೆ. ಈ ಹಿನ್ನೆಲೆಯಲ್ಲಿ ಅವಿಭಕ್ತ ಕುಟುಂಬಗಳ ಅಗತ್ಯವಿದೆ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹೊಸದರೋಜಿ ಗ್ರಾಪಂ ಅಧ್ಯಕ್ಷೆ ಎನ್. ಪಲ್ಲವಿ, ಅವಿಭಕ್ತ ಕುಟುಂಬಗಳು ಕಣ್ಮರೆಯಾಗುತ್ತಿರುವ ಇಂದಿನ ಸಂದಿಗ್ಧ ಸಮಯದಲ್ಲಿ ಮಕ್ಕಳು ಒಂಟಿತನವನ್ನು ಅನುಭವಿಸುತ್ತಿದ್ದಾರೆ ಎಂದು ವಿಷಾದಿಸಿದರು. ವಿದ್ಯಾಸಂಸ್ಥೆಯ ಅಧ್ಯಕ್ಷರು ಹಾಗೂ ಶಾಲೆಯ ಮುಖ್ಯಶಿಕ್ಷಕ ಜಿ. ನಾಗರಾಜ ಮಾತನಾಡಿ, ಕಾರ್ಯಕ್ರಮದ ಉದ್ದೇಶ, ವಿದ್ಯಾರ್ಥಿಗಳಿಗೆ ಅವಿಭಕ್ತ ಕುಟುಂಬದ ಪ್ರಾಮುಖ್ಯತೆ ಕುರಿತು ವಿವರಿಸಿದರು.
ಶಾಲೆಯ ಶಿಕ್ಷಕರು, ಸಿಬ್ಬಂದಿಗಳು, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು, ವಿದ್ಯಾರ್ಥಿಗಳು, ಪಾಲಕರು, ಪೋಷಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ