ವೈಭವದ ಶ್ರೀವಿರೂಪಾಕ್ಷೇಶ್ವರ-ಪಂಪಾಂಬಿಕೆ ಕಲ್ಯಾಣೋತ್ಸವ


Team Udayavani, Mar 31, 2018, 5:07 PM IST

bella-2.jpg

ಹೊಸಪೇಟೆ: ಐತಿಹಾಸಿಕ ಹಂಪಿಯ ಶ್ರೀವಿರೂಪಾಕ್ಷೇಶ್ವರ ಹಾಗೂ ಪಂಪಾಂಬಿಕೆ ದೇವಿಯ ಕಲ್ಯಾಣೋತ್ಸವ ಗುರುವಾರ ರಾತ್ರಿ ಅತ್ಯಂತ ವೈಭವದಿಂದ ನಡೆಯಿತು. ದೇವಸ್ಥಾನದ ಮಧ್ಯರಂಗ ಮಂಟಪದಲ್ಲಿ ನಿರ್ಮಿಸಿಲಾದ ಕೇದಿಗೆ ಅಲಂಕೃತ ವಿವಾಹ ಮಂಟಪದಲ್ಲಿ ಚೈತ್ರ ಶುದ್ಧ ತ್ರಯೋದಶಿ ರಾತ್ರಿ 9 ಗಂಟೆ ಸುಮಾರಿಗೆ ಚಂದ್ರ ಮೌಳೇಶ್ವರ ಮತ್ತು ಪಾರ್ವತಿ, ವಿರೂಪಾಕ್ಷೇಶ್ವರ ಮತ್ತು ಪಂಪಾಂಬಿಕೆ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಕಲ್ಯಾಣ ಮಹೋತ್ಸವದ ವಿಶೇಷ ಪೂಜೆ ನೆರವೇರಿಸಲಾಯಿತು.

ಶಶಿಪೂಜೆ, ಪುಣ್ಯಾಹವಾಚನ, ನಂದಿಪೂಜೆ, ಶಶಿ ಪುರಂದರ ಪೂಜೆ, ಕನ್ಯಾದಾನ, ಮಾಂಗಲ್ಯಧಾರಣೆ, ಅಕ್ಷತಾರೋಪಣ, ಹಾಗೂ ಕಲ್ಯಾಣೋತ್ಸವವನ್ನು ವಿವಿಧ ಮಂತ್ರಘೋಷದೊಂದಿಗೆ ಸಾಂಪ್ರದಾಯಿಕವಾಗಿ ನೇರವೇರಿಸಲಾಯಿತು.

ಹಂಪಿ ಜಾತ್ರಾ ಮಹೋತ್ಸವದ ನಿಮಿತ್ತವಾಗಿ ಶ್ರೀರಾಮ ನವಮಿಯಿಂದ 9 ದಿನಗಳ ಕಾಲ ಸಿಂಹವಾಹನ, ಸೂರ್ಯಮಂಡಲ ಉತ್ಸವ, ಚಂದ್ರಮಂಡಳ ಉತ್ಸವ, ಶೇಷವಾಹನ ಉತ್ಸವ, ಪುಷ್ಪನಮನ, ರಜತನಂದಿ ಉತ್ಸವ, ಗಜಾವಾಹನ ಉತ್ಸವ, ಅಶ್ವವಾಹನ ಉತ್ಸವ ಹಾಗೂ ಗಜ ವಾಹನೋತ್ಸವವನ್ನು ನೆರವೇರಿಸಲಾಯಿತು. 

ಆಗಮಿಕ ರವಿಶಂಕರ ಶರ್ಮಾ ನೇತೃತ್ವದಲ್ಲಿ ದೇವಸ್ಥಾನದ ಆರ್ಚಕರಾದ ಪಿ.ಶ್ರೀನಾಥ ಶರ್ಮಾ, ಜೆ.ಎಸ್‌.ಶ್ರೀನಾಥ
ಶರ್ಮಾ, ಜೆ.ಎಸ್‌.ಮುರುಳೀಧರಶಾಸ್ತ್ರೀ, ಮುರುಳಿಧರಶಾಸ್ತ್ರೀ, ಮಂಜುನಾಥ ಭಟ್‌, ರವಿ ಪಾಟೀಲ್‌ ಇತರರು ಕಲ್ಯಾಣೋತ್ಸವದ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು. ನಾಡಿನ ಎಲ್ಲೆಡೆಯಿಂದ ಬಂದಿದ್ದ ಸಾವಿರಾರು ಭಕ್ತರು ಕಲ್ಯಾಣ ಮಹೋತ್ಸವಕ್ಕೆ ಸಾಕ್ಷಿಯಾದರು.

ಚಕ್ರತೀರ್ಥ ಕೋದಂಡರಾಮ ದೇವಸ್ಥಾನದ ಅರ್ಚಕರು ವಧು ಪಂಪಾಂಬಿಕೆಯ ಕಡೆಯಿಂದ ಬೀಗರಾಗಿ ಆಗಮಿಸಿದ್ದರು. ವರ ವಿರೂಪಾಕ್ಷನ ಕಡೆಯಿಂದ ಶ್ರೀ ವಿದ್ಯಾರಣ್ಯ ಭಾರತಿ ಸ್ವಾಮೀಜಿ ಪಾಲ್ಗೊಂಡಿದ್ದರು. ನಂತರ ಸಾಮಾನ್ಯ ಜನರ ವಿವಾಹದಂತೆ ಎಲ್ಲಾ ರೀತಿಯ ಮಂತ್ರ, ಪೂಜಾ ವಿಧಾನಗಳನ್ನು ಅರ್ಚಕ ಸಮೂಹ ಕಲ್ಯಾಣೋತ್ಸವ ನೆರವೇರಿಸಲಾಯಿತು. ನಂತರ ಸ್ವಾಮೀಜಿಗಳ ಆಶೀರ್ವಾದ, ಫ‌ಲಪುಷ್ಪ ಅರ್ಪಣೆ ನಡೆಯಿತು. ವಿವಾಹ ಸಮಾರಂಭ ಬಳಿಕ ಕಮಲಾಪುರದ ಭಕ್ತರು, ರಜತನಂದಿ ಉತ್ಸವ ನೆರವೇರಿಸಿದರು.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.