ಸರ್ಕಾರ ಹಂಪಣ್ಣನವರ ಸಮಾಜ ಸೇವೆ ಪರಿಗಣಿಸಲಿ


Team Udayavani, Nov 26, 2018, 4:04 PM IST

bell-2.jpg

ಬಳ್ಳಾರಿ: ಪತ್ರಿಕಾರಂಗದಲ್ಲಿ ಪತ್ರಕರ್ತರಾಗಿ, ಪತ್ರಿಕೋದ್ಯಮಿಯಾಗಿ ಸೇವೆ ಸಲ್ಲಿಸಿರುವ ಸಿ.ಜಿ.ಹಂಪಣ್ಣನವರಿಗೆ ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್‌, ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಲಭಿಸಬೇಕು ಎಂದು ಸಂಡೂರು ವಿರಕ್ತಮಠದ ಪ್ರಭುಸ್ವಾಮಿ ಹೇಳಿದರು.

ನಗರದ ರಾಘವಕಲಾ ಮಂದಿರದಲ್ಲಿ ಹಿರಿಯ ಸಾಹಿತಿ ಸಿ.ಜಿ.ಹಂಪಣ್ಣ ಅವರ 80ನೇ ಜನ್ಮದಿನ ಕಾರ್ಯಕ್ರಮ ಮತ್ತು ಗಡಿನಾಡ ಕನ್ನಡಿಗ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
 
ಸಿ.ಜಿ.ಹಂಪಣ್ಣನವರು ಕಳೆದ 6 ದಶಕಗಳಿಂದ ಪತ್ರಕರ್ತರಾಗಿ, ಚಲನಚಿತ್ರ ನಿರ್ಮಾಪಕರಾಗಿ, ಚಲನಚಿತ್ರ ವಿತರಕರಾಗಿ ಕಾರ್ಯನಿರ್ವಹಿಸಿದ್ದಾರೆ. ಕನ್ನಡ ಮತ್ತು ಆಂಧ್ರಪ್ರದೇಶದ ತೆಲುಗು ಭಾಷಾ ಬಾಂಧವ್ಯವನ್ನು ಬೆಸೆದಿದ್ದಾರೆ. ಇವರ ಸೇವೆಯನ್ನು ಗುರುತಿಸಿದ್ದ ಕೆಲ ವರ್ಷಗಳ ಹಿಂದೆ ಆಂಧ್ರದ ಮಾಜಿ ಮುಖ್ಯಮಂತ್ರಿ ಕೆ.ರೋಸಯ್ಯ, ಹಂಪಣ್ಣರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ನಮ್ಮನ್ನು ಬೇರೆ ರಾಜ್ಯಗಳವರು ಗುರುತಿಸಿದರೂ, ಜಿಲ್ಲೆಯಲ್ಲೇ ಇರುವ ವಿವಿಗಳು ಗುರುತಿಸಿಲ್ಲ. ಈ ನಿಟ್ಟಿನಲ್ಲಿ ಬಳ್ಳಾರಿಯ ವಿಎಸ್‌ ಕೆ ವಿವಿಯು ಸಿ.ಜಿ.ಹಂಪಣ್ಣನವರಿಗೆ ಗೌರವ ಡಾಕ್ಟರೇಟ್‌ ಪದವಿ ನೀಡಬೇಕಾಗಿದೆ. ಜತೆಗೆ ರಾಜ್ಯ ಸರ್ಕಾರವೂ ರಾಜ್ಯೋತ್ಸವ ಪ್ರಶಸ್ತಿಯನ್ನೂ ನೀಡಬೇಕಾಗಿದೆ ಎಂದರು.
 
ಪ್ರತಿಯೊಬ್ಬರಿಗೂ ಬಾಲ್ಯ, ಯೌವನ ಮತ್ತು ಸಂಧ್ಯಾಕಾಲದ ಜೀವನವಿರುತ್ತದೆ. ಇವರು ತಮ್ಮ ಸಂಧ್ಯಾಕಾಲದಲ್ಲೂ ಎಲ್ಲರಿಗೂ ಮಾದರಿಯಾಗುವ ಜೀವನ ನಡೆಸುತ್ತಿದ್ದಾರೆ. ಇಂದಿನ ಯುವಜನತೆಗೆ ಮಾದರಿಯಾಗಿದ್ದಾರೆ. 

ಉತ್ತರ ಕರ್ನಾಟಕ ರಾಜ್ಯವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಲು ಹೊರಟಿರುವವರಿಗೆ ಜಿಲ್ಲೆಯ ಜನರು ಏಕೀಕರಣದ ಸಂದರ್ಭದಲ್ಲೆ ಉತ್ತರ ನೀಡಿದ್ದಾರೆ. ಅಖೀಲ ಕರ್ನಾಟಕಕ್ಕೆ ಬಳ್ಳಾರಿ ಮಾದರಿ ಜಿಲ್ಲೆಯಾಗಿದೆ. ಗಡಿಭಾಗದಲ್ಲಿರುವ ಸೌಹಾರ್ದತೆಯನ್ನು ಕಾಪಾಡಬೇಕಿದೆ. ರಾಜ್ಯದ ಗಡಿಯಲ್ಲಿರುವ ಜನರು ಎರಡು ಭಾಷೆ ಮತ್ತು ಎರಡು ಸಂಸ್ಕೃತಿಯನ್ನು ಅರಿತಿದ್ದಾರೆ. ಗಡಿಭಾಗದಲ್ಲಿ ಜಿಲ್ಲೆ ರಾಜ್ಯದ ಗಮನ ಸೆಳೆದಿದೆ ಎಂದರು.

ಗಡಿನಾಡ ಕನ್ನಡಿಗ ಅಭಿನಂದನಾ ಗ್ರಂಥ ಬಿಡುಗಡೆಗೊಳಿಸಿದ ಮಾತನಾಡಿದ ರಂಗಭೂಮಿ ಹಿರಿಯ ಕಲಾವಿದ, ನಾಡೋಜ ಬೆಳಗಲ್ಲು ವೀರಣ್ಣ , ಜಿಲ್ಲೆಯ ಸಾಹಿತಿಗಳು, ಕಲಾವಿದರು ಯಾರೂ ಪ್ರಚಾರದ ಬೆನ್ನತ್ತಿ ಹೋಗುವವರಲ್ಲ. ಪ್ರಚಾರವೇ ಅವರ ಬೆನ್ನತ್ತಿ ಬರುತ್ತದೆ ಎಂದರು.

ಚೆಳ್ಳಗುರ್ಕಿಯ ವೈದ್ಯ ಸಿ.ಎರ್ರೆಪ್ಪ ಅಧ್ಯಕ್ಷತೆ ವಹಿಸಿದ್ದರು. ಕಲಾವಿದೆ ಸುಭದ್ರಮ್ಮ ಮನ್ಸೂರು, ಜನಪದ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಟಿ.ಎಚ್‌. ಎಂ.ಬಸವರಾಜ್‌, ಇತಿಹಾಸ ಸಂಶೋಧಕ ವೈ. ಹನುಮಂತರೆಡ್ಡಿ, ಸಾಹಿತಿ ರಜನೀಶ್‌ ಕುಲಕರ್ಣಿ, ವನಮಾಲಾ ಕುಲಕರ್ಣಿ, ಮುಖ್ಯಶಿಕ್ಷಕಿ ವೈ. ಆರ್‌.ಪಲ್ಲವಿ, ಸಿ.ಜಿ.ಹಂಪಣ್ಣ ಅಭಿನಂದನಾ ಸಮಿತಿ ಗೌರವಾಧ್ಯಕ್ಷರಾದ ಕೇಣಿ ಜಂಬುನಾಥ್‌, ಕೆ.ಚನ್ನಪ್ಪ, ಆನೆಗಂಗಣ್ಣ, ನಿಷ್ಠಿರುದ್ರಪ್ಪ, ದರೂರು ಪುತುಷೋತ್ತಮ ಗೌಡ, ರಮೇಶ್‌ ಗೌಡ ಪಾಟೀಲ…, ಗಂಗಾಧರ್‌ ಪತ್ತಾರ್‌,
ಬಂಗ್ಲೆ ಮಲ್ಲಿಕಾರ್ಜುನ, ವಿ.ಜಗನ್‌ಮೋಹನ್‌ ರೆಡ್ಡಿ, ಕಾಳಪ್ಪ ಪತ್ತಾರ್‌, ಕೆ.ಬಿ.ಸಿದ್ದಲಿಂಗಪ್ಪ ಇನ್ನಿತರರಿದ್ದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

Bellary; ಮೌಲ್ಯಮಾಪನ ಕೇಂದ್ರದಲ್ಲಿ ಹೃದಯಾಘಾತದಿಂದ ಉಪನ್ಯಾಸಕ ಸಾವು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

ಸಂಡೂರು: ಸದೃಢ ದೇಶ ನಿರ್ಮಾಣಕ್ಕಾಗಿ ಮೋದಿ ಬೆಂಬಲಿಸಿ-ಶ್ರೀರಾಮುಲು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

Bellary; ಮಾಜಿ ಮೇಯರ್ ಮಗನಿಂದ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

bellary

Bellary: ತಡರಾತ್ರಿ ಸರಣಿ ಕಳ್ಳತನ; ಎಂಟು ಮನೆಗಳಿಗೆ ನುಗ್ಗಿದ ಕಳ್ಳರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.