ಬುದ್ಧಿಜೀವಿಗಳ ಮೌನ ಪ್ರಜಾಪ್ರಭುತ್ವಕ್ಕೆ ಬಹುದೊಡ್ಡ ಆತಂಕ


Team Udayavani, Jan 27, 2018, 3:41 PM IST

27-51.jpg

ಹೊಸಪೇಟೆ: ಬುದ್ಧಿಜೀವಿಗಳ ಮೌನ ಪ್ರಜಾಪ್ರಭುತ್ವಕ್ಕೆ ಬಹುದೊಡ್ಡ ಆತಂಕವಾಗಿದ್ದು, ಜಾಗತೀಕರಣ, ಖಾಸಗೀಕರಣ, ಜಾಗತಿಕ, ಏಕತೆ ಹಾಗೂ ಭಾಷಾ ಬಿಕ್ಕಟ್ಟನ್ನು ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ| ಮಲ್ಲಿಕಾ ಘಂಟಿ ಹೇಳಿದರು.

ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ಘಟಕವು 69ನೇ ಗಣರಾಜ್ಯೋತ್ಸವ ನಿಮಿತ್ತ ಶುಕ್ರವಾರ ಏರ್ಪಡಿಸಿದ್ದ ಪ್ರಜಾಪ್ರಭುತ್ವದ ಸಮಕಾಲೀನ ಬಿಕ್ಕಟ್ಟುಗಳು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬುದ್ಧಿಜೀವಿಗಳ ಮೌನ ಪ್ರಜಾಪ್ರಭುತ್ವಕ್ಕೆ ಬಹುದೊಡ್ಡ ಆತಂಕವಾಗಿದೆ. ಜಾಗತೀಕರಣ, ಖಾಸಗೀಕರಣಗಳ ಆಶಯ ಮಾರುಕಟ್ಟೆಯ
ಸೃಷ್ಟಿ. ಭಾರತ ಮಾರುಕಟ್ಟೆ ಆಗುತ್ತದೆ. ಇದು ಜಾಗತಿಕ ಬಿಕ್ಕಟ್ಟು. ಇದರೊಂದಿಗೆ ಏಕತೆಯ ಬಿಕ್ಕಟ್ಟನ್ನು, ಭಾಷಾ ಬಿಕ್ಕಟ್ಟನ್ನು
ಎದುರಿಸುತ್ತಿದ್ದೇವೆ. ಉದ್ಯಮಪತಿಗಳು ಸೃಷ್ಟಿಸುವ ಆರ್ಥಿಕ ಆಮಿಷಗಳಿಗೆ ನಾವು ಬಲಿಯಾಗುತ್ತಿದ್ದೇವೆ. ಮಾರುಕಟ್ಟೆ ಸಂಸ್ಕೃತಿ
ಜಗತ್ತನ್ನು ಯಾಮಾರಿಸುತ್ತಿರುವಾಗ ಸಮಾನತೆ, ಸಬಲೀಕರಣವನ್ನು ನಿಜವಾದ ಅರ್ಥದಲ್ಲಿ ಅನುಷ್ಠಾನಕ್ಕೆ ತರಲು ಸಾಧ್ಯವಾಗುತ್ತಿಲ್ಲ.
ಜನಪ್ರತಿನಿಧಿಗಳು ಸಂವಿಧಾನ ವಿರೋಧಿಯಾಗಿ ನೀಡುವ ಹೇಳಿಕೆಗಳು, ಮರ್ಯಾದೆ ಹತ್ಯೆಗಳಂತಹ ಬಿಕ್ಕಟ್ಟುಗಳು ಸಹಿಷ್ಣತೆಯ ಬಿಕ್ಕಟ್ಟುಗಳಂತಹ ಒಳಬಿಕ್ಕಟ್ಟು ಮತ್ತು ಹೊರಬಿಕ್ಕಟ್ಟುಗಳು ದೇಶವನ್ನು ಅಪಾಯದ ಅಂಚಿಗೆ ತಂದು ನಿಲ್ಲಿಸಿದೆ. “ಮನು’ ಅನ್ನು ಮನಸ್ಸಿನಿಂದ ನಾವೆಲ್ಲ ಕಿತ್ತುಹಾಕಬೇಕು. ಸಾಮಾಜಿಕ, ಸಾಂಸ್ಕೃತಿಕ ಅಪವ್ಯಾಖ್ಯಾನಗಳಿಗೆ ಉತ್ತರಿಸಲು ನಾವು ಸಿದ್ಧರಾಗಬೇಕು ಎಂದರು.

ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ| ಬಿ.ಎಂ.ಪುಟ್ಟಯ್ಯ ಮಾತನಾಡಿ, ದೇಶದಲ್ಲಿ ತಾತ್ವಿಕ ಬಿಕ್ಕಟ್ಟು ಎದುರಾಗಿದ್ದು,
ಪ್ರಜಾಪ್ರಭುತ್ವ ಸಾಮಾಜೀಕರಣಗೊಳ್ಳಲಿಲ್ಲ. ಮಹಿಳೆಯರ ಮೇಲಿನ ಅತ್ಯಾಚಾರ, ದಬ್ಟಾಳಿಕೆಗಳು ಅಭಿವೃದ್ಧಿಯಾಗಿವೆ. ಅಭಿವೃದ್ಧಿ
ತೆರೆದಿಡುವ ಮುಚ್ಚಿಡುವ ವೈರುಧ್ಯಗಳನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ. ಎಲ್ಲ ಬಗೆಯ ಸಂಪತ್ತು ಅಧಿಕಾರ ಆಸ್ತಿ ಆರ್ಥಿಕತೆಯ
ಕೇಂದ್ರೀಕರಣ ಮತ್ತೂಂದು ರೀತಿಯ ಬಿಕ್ಕಟ್ಟು ಆಗಿದೆ. ಎಲ್ಲರು ಸೇರಿ ದೇಶ ಕಟ್ಟಬೇಕು ಸಮಾಜದ ಎಲ್ಲರೂ ಮುಖ್ಯವಾಹಿನಿಗೆ
ಬರಬೇಕು ಎಂದು ಕರೆ ನೀಡಿದರು. ಕುಲಸಚಿವ ಡಾ| ಡಿ.ಪಾಂಡುರಂಗಬಾಬು ಮಾತನಾಡಿ, ಗಣರಾಜ್ಯದ ಸಂವಿಧಾನದ ಪ್ರಜಾಪ್ರಭುತ್ವದ ಆಶಯಗಳನ್ನು ಈಡೇರಿಸುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ಎಂದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ| ಶಿವಾನಂದ ವಿರಕ್ತಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ| ವೀರೇಶ ಜಾನೇಕಲ್‌ ನಿರೂಪಿಸಿದರು. ಸಂಗೀತ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಆರಂಭದಲ್ಲಿ ಕನ್ನಡ ವಿವಿ ಆವರಣದಲ್ಲಿ 69ನೇ ಗಣರಾಜ್ಯದ ಅಂಗವಾಗಿ ಕುಲಪತಿ ಡಾ| ಮಲ್ಲಿಕಾ
ಘಂಟಿ, ದ್ವಜಾರೋಹಣ ನೆರವೇಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.