ಕೋಳಿಫಾರಂ ಸ್ಥಳಾಂತರಕ್ಕೆ ಶಾಸಕ ನಾಯ್ಕ ಸೂಚನೆ

ನೊಣಗಳ ಹಾವಳಿ: ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸ್ಥಳೀಯ ಶಾಸಕರು

Team Udayavani, May 3, 2020, 12:14 PM IST

3-may-32

ಹಗರಿಬೊಮ್ಮನಹಳ್ಳಿ: ಓಬಳಾಪುರ ಗ್ರಾಮಸ್ಥರು ನೊಣಗಳ ಹಾವಳಿ ಬಗ್ಗೆ ಶಾಸಕ ಭೀಮಾನಾಯ್ಕ ಬಳಿ ಅಳಲು ತೋಡಿಕೊಂಡರು.

ಹಗರಿಬೊಮ್ಮನಹಳ್ಳಿ: “ಒಂದಿಷ್ಟು ವಿಷನಾದ್ರೂ ಕೊಟ್ಟಬೇಡಿ. ಇಲ್ಲ ನೊಣಗಳ ಹಾವಳಿಯಿಂದ ನಮ್ಮನ್ನು ಮುಕ್ತಿಗೊಳಿಸಿ’ ಎಂದು ಶಾಸಕ ಎಸ್‌. ಭೀಮಾನಾಯ್ಕ ಬಳಿ ವಿವಿಧ ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡರು.

ಹೌದು. ತಾಲೂಕಿನ ಕ್ಯಾತ್ಯಾಯನಮರಡಿ, ಓಬಳಾಪುರ, ಕಡ್ಲಬಾಳು ಗ್ರಾಮಸ್ಥರು ನೊಣಗಳ ಹಾವಳಿಗೆ ಬೇಸತ್ತಿದ್ದಾರೆ. ಈ ಗ್ರಾಮಗಳ ಮಧ್ಯೆ ಭಾಗದಲ್ಲಿರುವ ಕೋಳಿಫಾರಂನಿಂದಾಗಿ ನೋಣಗಳ ಸಮಸ್ಯೆ ಜನರ ನಿದ್ದೆಗೆಡಿಸಿದೆ. ಜನರ ಸಮಸ್ಯೆ ಆಲಿಸಿದ ಶಾಸಕ ಭೀಮಾನಾಯ್ಕ ಓಬಳಾಪುರ ಗ್ರಾಮಕ್ಕೆ ಭೇಟಿ ನೀಡಿ ಜನರ ಸಂಕಷ್ಟಕ್ಕೆ ಸ್ಪಂದಿಸಿದರು. ಸ್ಥಳದಲ್ಲಿದ್ದ ತಹಶೀಲ್ದಾರ್‌ ಆಶಪ್ಪ ಪೂಜಾರ್‌ ಗೆ ಕೂಡಲೇ ಕೋಳಿಫಾರಂನ್ನು ಬಂದ್‌ ಮಾಡಿಸಿ. ಲಾಕ್‌ಡೌನ್‌ನಿಂದಾಗಿ ಕೋಳಿಗಳು ಫಾರಂನಲ್ಲಿಯೇ ಇರುವುದರಿಂದ ಈ ಸಮಸ್ಯೆ ಎದುರಾಗಿದೆ. ಕೂಡಲೇ ಆರು ತಿಂಗಳುಗಳ ಕಾಲ ಕೋಳಿಫಾರಂ ಬಂದ್‌ ಮಾಡಿಸಿ. ನಂತರ ಇಲ್ಲಿಯ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ದಿನಗಳಲ್ಲಿ ಪ್ರಾರಂಭಿಸೋದೋ ಬೇಡವೋ ಎಂಬುದನ್ನು ಚರ್ಚಿಸೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ| ಸುಲೋಚನಾ, ಪಶು ಸಹಾಯಕ ನಿರ್ದೇಶಕ ಡಾ| ದೇವಗಿರಿ, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಬುಡ್ಡಿ ಬಸವರಾಜ, ತಾಪಂ ಸದಸ್ಯ ಅನಿಲ್‌ ಜಾಣ, ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ, ಮುಖಂಡರಾದ ಮುಟುಗನಹಳ್ಳಿ ಕೊಟ್ರೇಶ, ಹಾಲ್ದಾಳ್‌ ವಿಜಯಕುಮಾರ, ಕೇಶವರೆಡ್ಡಿ, ಬಾಲಕೃಷ್ಣಬಾಬು, ಡಿ.ಮಂಜುನಾಥ ಇದ್ದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್‌

ವಿಜಯೇಂದ್ರ

Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ

ಚುನಾವಣೆ ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.