ಕೋಳಿಫಾರಂ ಸ್ಥಳಾಂತರಕ್ಕೆ ಶಾಸಕ ನಾಯ್ಕ ಸೂಚನೆ
ನೊಣಗಳ ಹಾವಳಿ: ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಸ್ಥಳೀಯ ಶಾಸಕರು
Team Udayavani, May 3, 2020, 12:14 PM IST
ಹಗರಿಬೊಮ್ಮನಹಳ್ಳಿ: ಓಬಳಾಪುರ ಗ್ರಾಮಸ್ಥರು ನೊಣಗಳ ಹಾವಳಿ ಬಗ್ಗೆ ಶಾಸಕ ಭೀಮಾನಾಯ್ಕ ಬಳಿ ಅಳಲು ತೋಡಿಕೊಂಡರು.
ಹಗರಿಬೊಮ್ಮನಹಳ್ಳಿ: “ಒಂದಿಷ್ಟು ವಿಷನಾದ್ರೂ ಕೊಟ್ಟಬೇಡಿ. ಇಲ್ಲ ನೊಣಗಳ ಹಾವಳಿಯಿಂದ ನಮ್ಮನ್ನು ಮುಕ್ತಿಗೊಳಿಸಿ’ ಎಂದು ಶಾಸಕ ಎಸ್. ಭೀಮಾನಾಯ್ಕ ಬಳಿ ವಿವಿಧ ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡರು.
ಹೌದು. ತಾಲೂಕಿನ ಕ್ಯಾತ್ಯಾಯನಮರಡಿ, ಓಬಳಾಪುರ, ಕಡ್ಲಬಾಳು ಗ್ರಾಮಸ್ಥರು ನೊಣಗಳ ಹಾವಳಿಗೆ ಬೇಸತ್ತಿದ್ದಾರೆ. ಈ ಗ್ರಾಮಗಳ ಮಧ್ಯೆ ಭಾಗದಲ್ಲಿರುವ ಕೋಳಿಫಾರಂನಿಂದಾಗಿ ನೋಣಗಳ ಸಮಸ್ಯೆ ಜನರ ನಿದ್ದೆಗೆಡಿಸಿದೆ. ಜನರ ಸಮಸ್ಯೆ ಆಲಿಸಿದ ಶಾಸಕ ಭೀಮಾನಾಯ್ಕ ಓಬಳಾಪುರ ಗ್ರಾಮಕ್ಕೆ ಭೇಟಿ ನೀಡಿ ಜನರ ಸಂಕಷ್ಟಕ್ಕೆ ಸ್ಪಂದಿಸಿದರು. ಸ್ಥಳದಲ್ಲಿದ್ದ ತಹಶೀಲ್ದಾರ್ ಆಶಪ್ಪ ಪೂಜಾರ್ ಗೆ ಕೂಡಲೇ ಕೋಳಿಫಾರಂನ್ನು ಬಂದ್ ಮಾಡಿಸಿ. ಲಾಕ್ಡೌನ್ನಿಂದಾಗಿ ಕೋಳಿಗಳು ಫಾರಂನಲ್ಲಿಯೇ ಇರುವುದರಿಂದ ಈ ಸಮಸ್ಯೆ ಎದುರಾಗಿದೆ. ಕೂಡಲೇ ಆರು ತಿಂಗಳುಗಳ ಕಾಲ ಕೋಳಿಫಾರಂ ಬಂದ್ ಮಾಡಿಸಿ. ನಂತರ ಇಲ್ಲಿಯ ಗ್ರಾಮಸ್ಥರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ದಿನಗಳಲ್ಲಿ ಪ್ರಾರಂಭಿಸೋದೋ ಬೇಡವೋ ಎಂಬುದನ್ನು ಚರ್ಚಿಸೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ| ಸುಲೋಚನಾ, ಪಶು ಸಹಾಯಕ ನಿರ್ದೇಶಕ ಡಾ| ದೇವಗಿರಿ, ತಾಪಂ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಬುಡ್ಡಿ ಬಸವರಾಜ, ತಾಪಂ ಸದಸ್ಯ ಅನಿಲ್ ಜಾಣ, ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ, ಮುಖಂಡರಾದ ಮುಟುಗನಹಳ್ಳಿ ಕೊಟ್ರೇಶ, ಹಾಲ್ದಾಳ್ ವಿಜಯಕುಮಾರ, ಕೇಶವರೆಡ್ಡಿ, ಬಾಲಕೃಷ್ಣಬಾಬು, ಡಿ.ಮಂಜುನಾಥ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Loksabha; ದಿಂಗಾಲೇಶ್ವರ ಶ್ರೀ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕೆಲಸವಿದೆ: ಅರವಿಂದ ಬೆಲ್ಲದ್
Phone Tapping; ತನಿಖೆಯಿಂದ ಸತ್ಯ ಬಯಲು: ಎಂ.ಬಿ.ಪಾಟೀಲ್
Bellary; ಕಾಂಗ್ರೆಸ್ ಏನೇ ಹಾರಾಟ ಮಾಡಿದರೂ ನಮಗೆ ಲಾಭ ಆಗುತ್ತದೆ: ವಿಜಯೇಂದ್ರ
Election ಬಳಿಕ ಕಾಂಗ್ರೆಸ್ ನವರು ಕೌರವರಾಗ್ತಾರೆ, ಬಿಜೆಪಿಯವರು ಪಾಂಡವರಾಗ್ತಾರೆ: ಶ್ರೀರಾಮುಲು
Ballari; ಗುರು-ಶಿಷ್ಯ ಪರಂಪರೆಗೆ ವೀರಣ್ಣ ಜ್ವಲಂತ ಸಾಕ್ಷಿ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?