ಭಯ ಬಿಟ್ಟು ಪರೀಕ್ಷೆ ಎದುರಿಸಿ: ಭೀಮಾ
Team Udayavani, Jun 22, 2020, 4:59 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಗರಿಬೊಮ್ಮನಹಳ್ಳಿ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತಾಲೂಕು ಆಡಳಿತ ಸಮರ್ಪಕ ಪೂರ್ವ ಸಿದ್ಧತೆ ಮಾಡಿಕೊಂಡಿದೆ ಎಂದು ಶಾಸಕ ಎಸ್.ಭೀಮಾ ನಾಯ್ಕ ಹೇಳಿದರು.
ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ತಾಲೂಕಿನ ಒಟ್ಟು 4500 ವಿದ್ಯಾರ್ಥಿಗಳಿಗೆ ಕಾಟನ್ ಮಾಸ್ಕ್ ಗಳನ್ನು ವಿತರಿಸಲಾಗುವುದು. ಆರೋಗ್ಯ ಮತ್ತು ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಲಾಗುವುದು. ಶಿಕ್ಷಣ ಸಚಿವರ ಆದೇಶದ ಮೇರೆಗ ಪೂರ್ವಭಾವಿ ಸಭೆ ಕರೆದು ಸಮರ್ಪಕ ತಯಾರಿ ಮಾಡಲಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಾವುದೇ ಭಯ ಬೀಳುವ ಅಗತ್ಯವಿಲ್ಲ ಎಂದು ಹೇಳಿದರು.
ಕ್ಷೇತ್ರದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಹಾರೈಸಿದರು. ಗ್ರಾಮೀಣ ಪ್ರದೇಶದಲ್ಲಿ ಪರೀಕ್ಷೆ ಯಶಸ್ವಿಯಾಗಲು ಆಯಾ ಗ್ರಾಪಂ ಪಿಡಿಒಗಳು ಕಾಳಜಿಯಿಂದ ಸರಕಾರದ ಆದೇಶ ಪಾಲಿಸಬೇಕು. ಪರೀಕ್ಷೆ ದಿವಸ ಎಲ್ಲಾ ಪರೀಕ್ಷೆ ಕೇಂದ್ರಗಳಿಗೆ ಕಾರ್ಯಕರ್ತರ ಮೂಲಕ ಮಾಸ್ಕ್ ಗಳನ್ನು ವಿತರಿಸಲಾಗುವುದು. ಪಟ್ಟಣದ ಶಾಲೆಗಳಿಗೆ ಈಗಾಗಲೇ ಬಿಇಒ ಕೈಗೆ ಮಾಸ್ಕ್ಗಳನ್ನು ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.
ತಹಶೀಲ್ದಾರ್ ಆಶಪ್ಪ ಪೂಜಾರ್, ಬಿಇಒ ಶೇಖರಪ್ಪ ಹೊರಪೇಟೆ ಮಾತನಾಡಿದರು. ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ, ಮುಟುಗನಹಳ್ಳಿ ಕೊಟ್ರೇಶ, ಬುಡ್ಡಿ ಬಸವರಾಜ, ಪವಾಡಿ ಹನುಮಂತಪ್ಪ, ಚಿಂತ್ರಪಳ್ಳಿ ದೇವೇಂದ್ರಪ್ಪ, ಹಾಲ್ದಾಳ್ ವಿಜಯಕುಮಾರ, ಹಂಚಿನಮನಿ ಹನುಮಂತಪ್ಪ, ಕನ್ನಿಹಳ್ಳಿ ಚಂದ್ರಶೇಖರ, ಮುಖ್ಯ ಗುರುಗಳಾದ ವಟ್ಟಮ್ಮನಹಳ್ಳಿ ಮಲ್ಲಪ್ಪ, ಓಬಯ್ಯ, ಎಚ್.ಅಂಜಿನಪ್ಪ, ಯು.ಕೃಷ್ಣನಾಯ್ಕ, ಆರ್.ಕೊಟ್ರಪ್ಪ, ಎಂ.ಮಂಜುನಾಥ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು